AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ತಾಲೀಬಾನಿಗಳ ಹಿಡಿತದಲ್ಲಿ ಕಾಬೂಲ್​ ನಗರ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದೆ ಎಂದ ರಷ್ಯಾ!

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!
ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!
TV9 Web
| Edited By: |

Updated on:Aug 17, 2021 | 8:38 AM

Share

ಕಾಬೂಲ್: ಮೊದಲೇ ಅರಾಜಕತೆಯಿಂದ ನೆಲ ಕಚ್ಚಿರುವ ಅಫ್ಘಾನಿಸ್ತಾನದ ಮೇಲೆ ಈಗ ಪ್ರಕೃತಿಯೂ ಮುನಿಸಿಕೊಂಡಂತಿದೆ. ಆಫ್ಘನ್​ ನೆಲೆಗಳು ಕಂಪಿಸತೊಡಗಿವೆ. ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ (Fayzabad) ಲಘು ಭೂಕಂಪ (earthquake ) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5ರಷ್ಟು ದಾಖಲಾಗಿದೆ. ತಕ್ಷಣಕ್ಕೆ, ಯಾವುದೇ ಸಾವು ನೋವು ವರದಿಯಾಗಿಲ್ಲ.

ತಾಲೀಬಾನಿಗಳ ಹಿಡಿತದಲ್ಲಿ ಕಾಬೂಲ್​ ನಗರ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದೆ: ಅಫ್ಘಾನಿಸ್ತಾನದ ಬಹುತೇಕ ಭೂಭಾಗಗಳಲ್ಲಿ ತಾಲೀಬಾನಿಗಳ ಆಟಾಟೋಪ ಮುಂದುವರಿದಿದೆ. ಬಹುತೇಕ ಜನರು ದಿಕ್ಕಾಪಾಲಗಿದ್ದು, ಮನೆಗಳಲ್ಲೇ ಉಳಿದಿರುವ ಮಂದಿ ರಕ್ಷಣೆಗಾಗಿ ಕಾದುಕುಳಿತಿದ್ದಾರೆ. ಆದರೆ ತಾಲೀಬಾನಿಗಳು ಅಫ್ಘಾನಿಸ್ತಾನವನ್ನು ತನ್ನ ಕಬ್ಜಾಗೆ ತೆಗೆದುಕೊಂಡು ಮೊದಲ 24 ಗಂಟೆಗಳು ಕಳೆದಿವೆ. ಈ ಅವಧಿಯಲ್ಲಿ, ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಕಾಬೂಲ್​ ಸುರಕ್ಷಿತವಾಗಿದೆ ಎಂದು ರಷ್ಯಾ ಹೇಳಿದೆ.

ತಾಲೀಬಾನಿಗಳು (Taliban ) ಕಾಬೂಲ್​ ನಗರವನ್ನು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿರಿಸಿದ್ದಾರೆ ಎಂದು ಅಫ್ಘಾನಿಸ್ತಾನದ ರಷ್ಯಾ ಅಂಬಾಸಿಡರ್​ ಮಿಟ್ರಿ ಝಿರನೋವ್ (Dmitry Zhirnov)​ ಹೇಳಿದ್ದಾರೆ.

ವಿದೇಶಾಂಗ ಸಚಿವ ಜೈಶಂಕರ್​ರಿಂದ ಭಾರತೀಯರಿಗೆ ಅಭಯ: ಈ ಮಧ್ಯೆ, ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆ ಮೊದಲ ಆದ್ಯತೆ, ಕಾಬೂಲ್‌ನಲ್ಲಿರುವ ಸಿಖ್ ಮುಖಂಡರು, ಹಿಂದೂ ಮುಖಂಡರ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್ ಮಾಡಿ ಅಭಯ ನೀಡಿದ್ದಾರೆ.

ಇನ್ನು ನಿನ್ನೆ ಕಾಬೂಲ್​ನಲ್ಲಿ ಅಮೆರಿಕದ ಸೇನಾ ವಿಮಾನವೇರಿ ಪಲಾಯನಗೈಯಲು ಅಫ್ಘಾನಿಸ್ತಾನದ ಜನ ಹರಸಾಹಸ ಪಟ್ಟಿದ್ದಾರೆ. ಆ ವೇಳೆ ಸೇನೆ ವಿಮಾನದ ಒಳಗಿನ ದೃಶ್ಯ ಇಲ್ಲಿದೆ:

Afghanistan: ಅಫ್ಘಾನಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, ಕಾಬೂಲ್ ಏರ್‌ಪೋರ್ಟ್‌ ಬಳಿ ಫೈರಿಂಗ್, ವಿಮಾನಗಳ ಹಾರಾಟ ರದ್ದು

(Earthquake in Afghanistan Kabul safer in Taliban hands says Russia ambassador to Afghanistan)

Published On - 8:23 am, Tue, 17 August 21

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್