AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ತಾಲೀಬಾನಿಗಳ ಹಿಡಿತದಲ್ಲಿ ಕಾಬೂಲ್​ ನಗರ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದೆ ಎಂದ ರಷ್ಯಾ!

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!
ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!
TV9 Web
| Edited By: |

Updated on:Aug 17, 2021 | 8:38 AM

Share

ಕಾಬೂಲ್: ಮೊದಲೇ ಅರಾಜಕತೆಯಿಂದ ನೆಲ ಕಚ್ಚಿರುವ ಅಫ್ಘಾನಿಸ್ತಾನದ ಮೇಲೆ ಈಗ ಪ್ರಕೃತಿಯೂ ಮುನಿಸಿಕೊಂಡಂತಿದೆ. ಆಫ್ಘನ್​ ನೆಲೆಗಳು ಕಂಪಿಸತೊಡಗಿವೆ. ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ (Fayzabad) ಲಘು ಭೂಕಂಪ (earthquake ) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5ರಷ್ಟು ದಾಖಲಾಗಿದೆ. ತಕ್ಷಣಕ್ಕೆ, ಯಾವುದೇ ಸಾವು ನೋವು ವರದಿಯಾಗಿಲ್ಲ.

ತಾಲೀಬಾನಿಗಳ ಹಿಡಿತದಲ್ಲಿ ಕಾಬೂಲ್​ ನಗರ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದೆ: ಅಫ್ಘಾನಿಸ್ತಾನದ ಬಹುತೇಕ ಭೂಭಾಗಗಳಲ್ಲಿ ತಾಲೀಬಾನಿಗಳ ಆಟಾಟೋಪ ಮುಂದುವರಿದಿದೆ. ಬಹುತೇಕ ಜನರು ದಿಕ್ಕಾಪಾಲಗಿದ್ದು, ಮನೆಗಳಲ್ಲೇ ಉಳಿದಿರುವ ಮಂದಿ ರಕ್ಷಣೆಗಾಗಿ ಕಾದುಕುಳಿತಿದ್ದಾರೆ. ಆದರೆ ತಾಲೀಬಾನಿಗಳು ಅಫ್ಘಾನಿಸ್ತಾನವನ್ನು ತನ್ನ ಕಬ್ಜಾಗೆ ತೆಗೆದುಕೊಂಡು ಮೊದಲ 24 ಗಂಟೆಗಳು ಕಳೆದಿವೆ. ಈ ಅವಧಿಯಲ್ಲಿ, ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಕಾಬೂಲ್​ ಸುರಕ್ಷಿತವಾಗಿದೆ ಎಂದು ರಷ್ಯಾ ಹೇಳಿದೆ.

ತಾಲೀಬಾನಿಗಳು (Taliban ) ಕಾಬೂಲ್​ ನಗರವನ್ನು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿರಿಸಿದ್ದಾರೆ ಎಂದು ಅಫ್ಘಾನಿಸ್ತಾನದ ರಷ್ಯಾ ಅಂಬಾಸಿಡರ್​ ಮಿಟ್ರಿ ಝಿರನೋವ್ (Dmitry Zhirnov)​ ಹೇಳಿದ್ದಾರೆ.

ವಿದೇಶಾಂಗ ಸಚಿವ ಜೈಶಂಕರ್​ರಿಂದ ಭಾರತೀಯರಿಗೆ ಅಭಯ: ಈ ಮಧ್ಯೆ, ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆ ಮೊದಲ ಆದ್ಯತೆ, ಕಾಬೂಲ್‌ನಲ್ಲಿರುವ ಸಿಖ್ ಮುಖಂಡರು, ಹಿಂದೂ ಮುಖಂಡರ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್ ಮಾಡಿ ಅಭಯ ನೀಡಿದ್ದಾರೆ.

ಇನ್ನು ನಿನ್ನೆ ಕಾಬೂಲ್​ನಲ್ಲಿ ಅಮೆರಿಕದ ಸೇನಾ ವಿಮಾನವೇರಿ ಪಲಾಯನಗೈಯಲು ಅಫ್ಘಾನಿಸ್ತಾನದ ಜನ ಹರಸಾಹಸ ಪಟ್ಟಿದ್ದಾರೆ. ಆ ವೇಳೆ ಸೇನೆ ವಿಮಾನದ ಒಳಗಿನ ದೃಶ್ಯ ಇಲ್ಲಿದೆ:

Afghanistan: ಅಫ್ಘಾನಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, ಕಾಬೂಲ್ ಏರ್‌ಪೋರ್ಟ್‌ ಬಳಿ ಫೈರಿಂಗ್, ವಿಮಾನಗಳ ಹಾರಾಟ ರದ್ದು

(Earthquake in Afghanistan Kabul safer in Taliban hands says Russia ambassador to Afghanistan)

Published On - 8:23 am, Tue, 17 August 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?