AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ ಪ್ರಬಲ ಭೂಕಂಪಕ್ಕೆ 6 ಮಂದಿ ಸಾವು, ದೆಹಲಿ ಸುತ್ತಮುತ್ತಲೂ ಭೂಕಂಪದ ಅನುಭವ

ಭೂಕಂಪದಿಂದ ಆಘಾತಕ್ಕೊಳಗಾದ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಸುಮಾರು 10 ಸೆಕೆಂಡ್​ಗಳ ಕಾಲ ಭೂಕಂಪದ ಅನುಭವವಾಯಿತು ಎಂದು ವರದಿಯಾಗಿದೆ.

Nepal Earthquake: ನೇಪಾಳದಲ್ಲಿ ಪ್ರಬಲ ಭೂಕಂಪಕ್ಕೆ 6 ಮಂದಿ ಸಾವು, ದೆಹಲಿ ಸುತ್ತಮುತ್ತಲೂ ಭೂಕಂಪದ ಅನುಭವ
ನೇಪಾಳ ಭೂಕಂಪ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 09, 2022 | 7:18 AM

ದೆಹಲಿ / ಕಠ್ಮಂಡು: ನೇಪಾಳದ ದೋಟಿ ಜಿಲ್ಲೆಯಲ್ಲಿ ಬುಧವಾರ ನಸುಕಿನಲ್ಲಿ (ನ 9) ಪ್ರಬಲ ಭೂಕಂಪ  (Nepal Earthquake) ಸಂಭವಿಸಿದ್ದು, ಹಲವು ಮನೆಗಳು ಕುಸಿದಿವೆ. ಸತ್ತವರ ನಿಖರ ಸಂಖ್ಯೆ ಇನ್ನೂ ವರದಿಯಾಗಬೇಕಿದ್ದು, ಸುದ್ದಿಸಂಸ್ಥೆಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ ಈವರೆಗೆ ಆರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ನೇಪಾಳದ ಭೂಕಂಪದ ಉತ್ತರಕಂಪನಗಳು (Strong Tremors) ದೆಹಲಿ, ರಾಷ್ಟ್ರ ರಾಜಧಾನಿ ಪ್ರದೇಶ, ನೋಯ್ಡಾ ಸೇರಿದಂತೆ ಹಲವೆಡೆ ಜನರ ಅನುಭವಕ್ಕೆ ಬಂದಿವೆ. ಭೂಕಂಪದಿಂದ ಆಘಾತಕ್ಕೊಳಗಾದ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಸುಮಾರು 10 ಸೆಕೆಂಡ್​ಗಳ ಕಾಲ ಭೂಕಂಪದ ಅನುಭವವಾಯಿತು ಎಂದು ವರದಿಯಾಗಿದೆ.

ನೇಪಾಳದಲ್ಲಿ ಮಂಗಳವಾರ (ನ 8) ರಾತ್ರಿ 8.52ಕ್ಕೆ ಮೊದಲ ಬಾರಿಗೆ ಭೂಮಿಯು ಕಂಪಿಸಿದ ಅನುಭವವಾಯಿತು. ಮೊದಲ ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.9 ಎಂದು ದಾಖಲಾಗಿತ್ತು. ಬುಧವಾರ (ನ 9) ನಸುಕಿನ 1.57ಕ್ಕೆ ಎರಡನೇ ಬಾರಿಗೆ ಭೂಮಿಯು ಕಂಪಿಸಿತು. ಇದರ ತೀವ್ರತೆಯು 6.3ರಷ್ಟು ಇತ್ತು. ನೇಪಾಳದ ಎರಡನೇ ಭೂಕಂಪನದ ಅಲೆಗಳು ಭಾರತದ ದೆಹಲಿ, ಗಾಜಿಯಾಬಾದ್, ನೋಯ್ಡಾ, ಗುರುಗ್ರಾಮ ಮತ್ತು ಲಖನೌ ನಗರಗಳನ್ನೂ ನಡುಗಿಸಿತು.

‘ಭೂಕಂಪವು ಭೂಮಿಯ 10 ಕಿಮೀ ಆಳದಲ್ಲಿ ಸಂಭವಿಸಿದೆ. ರಾತ್ರಿಯಿಂದೀಚೆಗೆ ಯಾವುದೇ ತುರ್ತುಕರೆ ಬಂದಿಲ್ಲ. ನೇಪಾಳದಲ್ಲಿ ಭೂಕಂಪನದ ಕೇಂದ್ರವಿತ್ತು’ ಎಂದು ‘ನ್ಯಾಷನಲ್ ಸೆಂಟರ್ ಫಾರ್ ಸೆಸ್​ಮೊಲಜಿ’ ಕಚೇರಿಯು ಟ್ವೀಟ್ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಭೂಕಂಪನದ ಅನುಭವವನ್ನು ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಕೇವಲ ಅರ್ಧಗಂಟೆಯ ಅವಧಿಯಲ್ಲಿ ಟ್ವಿಟರ್​ನಲ್ಲಿ #earthquake ಹ್ಯಾಷ್​ಟ್ಯಾಗ್ ಟ್ರೆಂಡ್ ಆಗಿತ್ತು. ಭಾರತದಲ್ಲಿ ಭೂಕಂಪದಿಂದ ಜೀವಹಾನಿ ಅಥವಾ ಆಸ್ತಿಹಾನಿಯಾದ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Published On - 7:15 am, Wed, 9 November 22

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ