AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು