AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಭೂಕಂಪ(Earthquake) ಸಂಭವಿಸಿದೆ, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ. ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್​ ತಿಂಗಳಲ್ಲಿ ಸಂಭವಿಸಿದ 4ನೇ ಭೂಕಂಪ ಇದಾಗಿದೆ. ಕಳೆದ ವಾರವಷ್ಟೇ ಹೆರಾತ್​ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು, ನೂರಾರು ಮಂದಿ ಗಾಯಗೊಂಡಿದ್ದರು. ಅಫ್ಘಾನ್ ಜನತೆ ಸರಣಿ ಭೂಕಂಪಗಳಿಂದಾಗಿ ತತ್ತರಿಸಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Oct 26, 2023 | 7:04 AM

Share

ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಭೂಕಂಪ(Earthquake) ಸಂಭವಿಸಿದೆ, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ. ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್​ ತಿಂಗಳಲ್ಲಿ ಸಂಭವಿಸಿದ 4ನೇ ಭೂಕಂಪ ಇದಾಗಿದೆ. ಕಳೆದ ವಾರವಷ್ಟೇ ಹೆರಾತ್​ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು, ನೂರಾರು ಮಂದಿ ಗಾಯಗೊಂಡಿದ್ದರು. ಅಫ್ಘಾನ್ ಜನತೆ ಸರಣಿ ಭೂಕಂಪಗಳಿಂದಾಗಿ ತತ್ತರಿಸಿದೆ.

ಗುರುವಾರ ಮುಂಜಾನೆ ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 1.10ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, 150 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಹಾನಿ ಅಥವಾ ಸಾವು ನೋವುಗಳ ವರದಿಯಾಗಿಲ್ಲ.

6.3 ತೀವ್ರತೆಯ ಭೂಕಂಪವು ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಕನಿಷ್ಠ 4,000 ಜನರನ್ನು ಬಲಿತೆಗೆದುಕೊಂಡಿತು , ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ.

ಈ ಹಿಂದೆ ಅಕ್ಟೋಬರ್ 15 ರಂದು ರಿಕ್ಟರ್ ಮಾಪಕದಲ್ಲಿ 5.4 ರ ತೀವ್ರತೆಯ ಭೂಕಂಪವು ಅಫ್ಘಾನಿಸ್ತಾನವನ್ನು ತಲ್ಲಣಗೊಳಿಸಿತು. ಅದಕ್ಕೂ ಮೊದಲು, ಅಕ್ಟೋಬರ್ 13 ರಂದು ಅಫ್ಘಾನಿಸ್ತಾನದಲ್ಲಿ 4.6 ರ ತೀವ್ರತೆಯ ಭೂಕಂಪ ಸಂಭವಿಸಿದೆ.

ಮತ್ತಷ್ಟು ಓದಿ: Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ಅಕ್ಟೋಬರ್ 11 ರಂದು ರಿಕ್ಟರ್ ಮಾಪಕದಲ್ಲಿ 6.1 ರ ತೀವ್ರತೆಯ ಮತ್ತೊಂದು ಭೂಕಂಪವು ದೇಶವನ್ನು ಆತಂಕಕ್ಕೆ ತಳ್ಳಿತ್ತು. ಹೆರಾತ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತು ಗಾಯಗಳ ಸಂಖ್ಯೆಯನ್ನು ತಾಲಿಬಾನ್ ಇನ್ನೂ ನೀಡಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ