AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Earthquake: ಇಂಡೋನೇಷ್ಯಾದಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ತಜ್ಞರು

ಇಂಡೋನೇಷ್ಯಾದ ಹವಾಮಾನ ಇಲಾಖೆ ಅಧಿಕಾರಿಗಳು ಸುಮಾರು 7.5 ರಷ್ಟು ತೀವ್ರತೆಯ ಭೂಕಂಪ ಆಗಿದ್ದಾಗಿ ಹೇಳಿದ್ದಾರೆ. ಪೂರ್ವ ನುಸಾ ತೆಂಗರಾ ಪ್ರದೇಶದಲ್ಲಿ ಭೂಕಂಪ ಅಪ್ಪಳಿಸಿದ್ದಾಗಿ ತಿಳಿಸಿದ್ದಾರೆ.

Indonesia Earthquake: ಇಂಡೋನೇಷ್ಯಾದಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ತಜ್ಞರು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 14, 2021 | 11:07 AM

Share

ಇಂಡೋನೇಷ್ಯಾದಲ್ಲಿಂದು ಪ್ರಬಲ ಭೂಕಂಪನವಾಗಿದೆ. ಇಂಡೋನೇಷ್ಯಾದ ಮೌಮೆರೆಯಿಂದ ಉತ್ತರಕ್ಕೆ 95 ಕಿಮೀ ದೂರದಲ್ಲಿ ಭೂಮಿ ನಡುಗಿದ್ದು, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.6ರಷ್ಟು ದಾಖಲಾಗಿದೆ ಎಂದು ಯುನೈಟೆಡ್​ ಸ್ಟೇಟಸ್​​  ಇಂಡೋನೇಷ್ಯಾದ ಮೌಮೆರೆಯಿಂದ ಉತ್ತರಕ್ಕೆ 95 ಕಿಮೀ ದೂರದಲ್ಲಿಭೂವೈಜ್ಞಾನಿಕ ಸಮೀಕ್ಷೆ (USGS) ತಿಳಿಸಿದೆ. 

ಇನ್ನು ಇಂಡೋನೇಷ್ಯಾದ ಹವಾಮಾನ ಇಲಾಖೆ ಅಧಿಕಾರಿಗಳು ಸುಮಾರು 7.5 ರಷ್ಟು ತೀವ್ರತೆಯ ಭೂಕಂಪ ಆಗಿದ್ದಾಗಿ ಹೇಳಿದ್ದಾರೆ. ಪೂರ್ವ ನುಸಾ ತೆಂಗರಾ ಪ್ರದೇಶದಲ್ಲಿ ಭೂಕಂಪ ಅಪ್ಪಳಿಸಿದ್ದಾಗಿ ಮಾಹಿತಿ ನೀಡಿರುವ ಅವರು ಸುನಾಮಿ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೇ, ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ, ಭೂಕಂಪವು 7.7ರಷ್ಟು ತೀವ್ರತೆಯಲ್ಲಿ ಆಗಿದೆ ಎಂದು ಹೇಳಿದೆ.

ಭೂಕಂಪನವು ಮೌಮೆರೆ ಪಟ್ಟಣದ ಉತ್ತರಕ್ಕೆ 112 ಕಿ.ಮೀ ದೂರದಲ್ಲಿ ಸಮುದ್ರದ ಅಡಿಯಲ್ಲಿ 18.5 ಕಿಮೀ ಆಳದಲ್ಲಿ ಅಪ್ಪಳಿಸಿದೆ ಎಂದು ಯುಎಸ್​ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಈ ಪಟ್ಟಣದಲ್ಲಿ 85 ಸಾವಿರದಷ್ಟು ಜನರು ವಾಸವಾಗಿದ್ದು, ಪೂರ್ವ ನುಸಾ ಟೆಂಗರಾ ಪ್ರಾಂತ್ಯದ ದೀಪಗಳಲ್ಲೇ ಎರಡನೇ ಅತಿ ದೊಡ್ಡ ದ್ವೀಪವಾಗಿದೆ. ಸದ್ಯಕ್ಕೆ ಯಾವುದೇ ಹಾನಿಯಾದ ಬಗ್ಗೆ, ಜೀವ ಹೋದ ಬಗ್ಗೆ ವರದಿಯಾಗಿಲ್ಲ.  ಆದರೆ ಇಲ್ಲಿನ ಜನರಿಗೆ ಭೂಮಿ ಪ್ರಬಲವಾಗಿ ನಡುಗಿದ ಅನುಭವ ಆಗಿದೆ. ಭೂಮಿ ಅಲುಗಾಡುತ್ತಿದ್ದಂತೆ ಜನರು ತಮ್ಮ ಮನೆಗಳಿಂದ ಓಡಿ ಹೊರಬಂದಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪರಿಹಾರ ಸಂಸ್ಥೆಯ ವಕ್ತಾರ ಅಬ್ದುಲ್​ ಮುಹಾರಿ ತಿಳಿಸಿದ್ದಾರೆ.  ಇನ್ನು ಕರಾವಳಿ ತೀರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹೇಳಲಾಗಿದೆ. 1972ರಲ್ಲಿ ಸಂಭವಿಸಿದ ಸುನಾಮಿಯಂತೆ ದೊಡ್ಡ ಮಟ್ಟದ ಸುನಾಮಿ ಏಳುವ ಸಾಧ್ಯತೆ ಇದೆ ಎಂದು ಫ್ಲೋರ್ಸ್ ತೈಮೂರ್ ಜಿಲ್ಲೆಯ ಮುಖ್ಯಸ್ಥ ಆ್ಯಂಟನ್ ಹಯಾನ್ ತಿಳಿಸಿದ್ದಾರೆ. ಇಂಡೋನೇಷ್ಯಾದಲ್ಲಿ ಜನವರಿ ತಿಂಗಳಲ್ಲಿ 6.2ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಅಂದು ಸುಮಾರು 105 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು: ರಾಷ್ಟ್ರಕವಿ ಕುವೆಂಪು ಸೊಸೆ ರಾಜೇಶ್ವರಿ ತೇಜಸ್ವಿ ನಿಧನ

Published On - 9:49 am, Tue, 14 December 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?