AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alaska Earthquake: ಅಲಾಸ್ಕಾದಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

ಯುಎಸ್​ನ ಅಲಾಸ್ಕಾದಲ್ಲಿ ಪದೇಪದೇ ಭೂಕಂಪನ ಆಗುತ್ತಿರುತ್ತದೆ. ಜುಲೈನಲ್ಲಿ 8.2ರಷ್ಟು ತೀವ್ರತೆಯಲ್ಲಿ ಪ್ರಬಲ ಭೂಕಂಪ ಆಗಿತ್ತು. ಪೆರಿವಿಲ್ಲೆಯಿಂದ ಆಗ್ನೇಯಕ್ಕೆ 91 ಕಿಮೀ ದೂರದಲ್ಲಿ ಭೂಕಂಪ ಉಂಟಾಗಿದ್ದು, ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಸುನಾಮಿ ಮುನ್ನೆಚ್ಚರಿಕೆ ನೀಡಿತ್ತು.

Alaska Earthquake: ಅಲಾಸ್ಕಾದಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು
ಭೂಕಂಪದ ಚಿತ್ರ
Follow us
TV9 Web
| Updated By: Lakshmi Hegde

Updated on:Dec 22, 2021 | 8:20 AM

ಅಮೆರಿಕದ ಅಲಾಸ್ಕಾದಲ್ಲಿ ಮಂಗಳವಾರ ಮಧ್ಯಾಹ್ನ 1.42ರ ಹೊತ್ತಿಗೆ ಪ್ರಬಲ ಭೂಕಂಪ (Alaska Earthquake) ಸಂಭಿವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 6.3ರಷ್ಟು ದಾಖಲಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಈ ಬಾರಿ ಭೂಮೇಲ್ಮೈ ಆಳದಿಂದ 125 ಕಿಮೀ ಆಳದಲ್ಲಿ ಸಂಭವಿಸಿದೆ. ಸದ್ಯ ಯಾವುದೇ ರೀತಿಯ ಸುನಾಮೆ ಎಚ್ಚರಿಕೆ ಇಲ್ಲ ಎಂದು ಹೇಳಲಾಗಿದೆ.  

ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಕೇಂದ್ರದ ಪ್ರಕಾರ ಇಲ್ಲಿ 5.9ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.  ಅಂಕಾರೇಜ್​​ನ ನೈಋತ್ಯಕ್ಕೆ ಸುಮಾರು 138 ಮೈಲುಗಳಷ್ಟು ದೂರವಿರುವ ಇಲಿಯಾಮ್ನಾ ಜ್ವಾಲಾಮುಖಿ ಸಮೀಪವೇ ಭೂಕಂಪ ಉಂಟಾಗಿದೆ ಎಂದು ಯುಎಸ್​​ಜಿಎಸ್​ ತಿಳಿಸಿದೆ.  ಅಲಾಸ್ಕಾದ ಕೆನೈ ಪೆನಿನ್ಸುಲಾದಿಂದ ಕುಕ್​ ಇನ್ಲೆಟ್ನಾದಾದ್ಯಂತ ಭೂಮಿ ಕಂಪನವಾಗಿದೆ. ಇಲ್ಲಿಂದ ದೂರವಿರುವ ಫೇರ್ಬ್ಯಾಂಕ್ಸ್​, ಕೊಡಿಯಾಕ್​ ಮತ್ತು ವಾಡ್ಲೆಜ್​​ನಲ್ಲೂ ಭೂಮಿ ನಡುಗಿದ ವರದಿಯಾಗಿದೆ.   ಆದರೆ ಎಲ್ಲಿಯೂ ಯಾವುದೇ ಆಸ್ತಿಪಾಸ್ತಿ, ಮನೆಗಳಿಗೆ ಹಾನಿಯಾಗಿಲ್ಲ. ಪ್ರಾಣ ಹಾನಿಯೂ ಆಗಿಲ್ಲ ಎಂದು ವರದಿಯಾಗಿದೆ.

ಯುಎಸ್​ನ ಅಲಾಸ್ಕಾದಲ್ಲಿ ಪದೇಪದೇ ಭೂಕಂಪನ ಆಗುತ್ತಿರುತ್ತದೆ. ಜುಲೈನಲ್ಲಿ 8.2ರಷ್ಟು ತೀವ್ರತೆಯಲ್ಲಿ ಪ್ರಬಲ ಭೂಕಂಪ ಆಗಿತ್ತು. ಪೆರಿವಿಲ್ಲೆಯಿಂದ ಆಗ್ನೇಯಕ್ಕೆ 91 ಕಿಮೀ ದೂರದಲ್ಲಿ ಭೂಕಂಪ ಉಂಟಾಗಿದ್ದು, ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಸುನಾಮಿ ಮುನ್ನೆಚ್ಚರಿಕೆ ನೀಡಿತ್ತು. ಆಗ ರಸ್ತೆಗಳೆಲ್ಲ ಭರ್ಜರಿ ಸೀಳುಬಿಟ್ಟಿದ್ದವು. ಅಪಾರ ಪ್ರಮಾಣದ ಹಾನಿಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿಯೇ ಜೂನ್​​ನಲ್ಲಿ ಆದ ಭೂಕಂಪದ ತೀವ್ರತೆ ಅತ್ಯಂತ ಹೆಚ್ಚು ಎಂದು ವಿಶ್ಲೇಸಿಸಲಾಗಿದೆ. ಅದರ ಹೊರತಾಗಿ 2020ರ ಅಕ್ಟೋಬರ್​ನಲ್ಲೂ ಕೂಡ ಅಲಾಸ್ಕಾದ ಸ್ಯಾಡ್ ಪಾಯಿಂಟ್​ ಎಂಬಲ್ಲಿ 7.5 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಇದರ ತೀವ್ರತೆಗೆ ಸಾಗರದಲ್ಲಿ ಸುನಾಮಿ ಮಾದರಿಯ ಅಲೆಗಳು ಎದ್ದಿದ್ದವು. ಹಾಗೇ, 2020ರ ಜುಲೈನಲ್ಲೂ ಕೂಡ ಪೆನಿನ್ಸುಲಾದಲ್ಲಿ 7.8 ತೀವ್ರತೆಯಲ್ಲಿ ಭೂಮಿ ನಡುಗಿತ್ತು. ಒಟ್ಟಾರೆ ಈ ಪ್ರದೇಶದಲ್ಲಿ ಆಗಾಗ ಭೂಕಂಪನ ಸಂಭವಿಸುವುದು ಸಾಮಾನ್ಯವೆಂಬಂತಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; ಹುದ್ದೆ, ವೇತನ ಮೊದಲಾದ ಮಾಹಿತಿ ಇಲ್ಲಿದೆ

Published On - 8:19 am, Wed, 22 December 21

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ