AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russi Ukraine War: ಕತ್ತಲಲ್ಲಿ ಮುಳುಗಿದ ಉಕ್ರೇನ್; ರಷ್ಯಾದ ಭಯೋತ್ಪಾದಕರು ಕಾರಣ ಎಂದ ಝೆಲೆನ್​​ಸ್ಕಿ

Ukriane Blackout: ದಿನಗಟ್ಟಲೆ ವಿದ್ಯುತ್ ಇಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Russi Ukraine War: ಕತ್ತಲಲ್ಲಿ ಮುಳುಗಿದ ಉಕ್ರೇನ್; ರಷ್ಯಾದ ಭಯೋತ್ಪಾದಕರು ಕಾರಣ ಎಂದ ಝೆಲೆನ್​​ಸ್ಕಿ
ಉಕ್ರೇನ್​ನಲ್ಲಿ ಕ್ಷಿಪಣಿ ದಾಳಿImage Credit source: AP
TV9 Web
| Edited By: |

Updated on:Sep 12, 2022 | 8:01 AM

Share

ಕೀವ್: ಸುಲಭವಾಗಿ ಗೆಲ್ಲಬಹುದು ಎಂದು ಉಕ್ರೇನ್​ ಮೇಲೆ ದಂಡೆತ್ತಿ ಬಂದಿದ್ದ ರಷ್ಯಾ ಸೇನೆ (Russia Ukraine Conflict) ಒಂದಾದ ಮೇಲೆ ಒಂದರಂತೆ ಹಿನ್ನಡೆ ಅನುಭವಿಸುತ್ತಿದೆ. 200ನೇ ದಿನಕ್ಕೆ ಕಾಲಿಟ್ಟಿರುವ ಯುದ್ಧದಲ್ಲಿ ಸತತ ಸೋಲುಗಳಿಂದ ಹತಾಶವಾಗಿರುವ ರಷ್ಯಾ ಇದೀಗ ಪರೋಕ್ಷವಾಗಿ ಒತ್ತಡ ಹೇರುವ ತಂತ್ರಗಳಿಗೆ ಮೊರೆ ಹೋಗಿದೆ. ಉಕ್ರೇನ್​ನ ಪೂರ್ವ ಭಾಗದ ಹಲವು ಪ್ರಾಂತ್ಯಗಳಲ್ಲಿ ಸಾರಾಸಗಟಾಗಿ ವಿದ್ಯುತ್ ಸರಬರಾಜು ಕಡಿತಗೊಳಿಸಿದೆ. ದಿನಗಟ್ಟಲೆ ವಿದ್ಯುತ್ ಇಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಖಾರ್ಕಿವ್ ಮತ್ತು ಡೊನೆಟ್​ಸ್ಕ್​ ಪ್ರಾಂತ್ಯಗಳು ಕತ್ತಲಲ್ಲಿ ಮುಳುಗಲು ರಷ್ಯಾದ ಭಯೋತ್ಪಾದಕರು ಕಾರಣ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್​ಸ್ಕಿ ಆರೋಪಿಸಿದ್ದಾರೆ. ಝಪೊರಿಖ್​ಖಿಯಾ, ಡ್ನಿಪ್ರೊಪೆಟ್ರೊವ್​​ಕ್​ ಮತ್ತು ಸುಮಿ ಪ್ರಾಂತ್ಯಗಳ ಕೆಲವೆಡೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಿದೆ ಎಂದು ಝೆಲೆನ್​ಸ್ಕಿ ಹೇಳಿದ್ದಾರೆ.

ಈ ಪ್ರದೇಶಗಳಲ್ಲಿ ಸೇನಾ ನೆಲೆಗಳು ಇಲ್ಲ. ಆದರೆ ಜನರಿಗೆ ಬೆಳಕು ಮತ್ತು ಶಾಖ ಸಿಗದಂತೆ ಮಾಡುವ ಉದ್ದೇಶದಿಂದ ರಷ್ಯಾ ಇಂಥ ಕೆಟ್ಟ ಕ್ರಮಕ್ಕೆ ಮುಂದಾಗಿದೆ. ಸುಮಾರು 90 ಲಕ್ಷ ಜನರು ಇದರಿಂದ ಸಂಕಷ್ಟ ಅನುಭವಿಸುವಂತಾಗಿದೆ. ಪೂರ್ವ ಉಕ್ರೇನ್​ನ ಹಲವು ಹಳ್ಳಿ ಮತ್ತು ಪಟ್ಟಣಗಳಿಂದ ರಷ್ಯಾ ಸೇನಾಪಡೆಗಳನ್ನು ಉಕ್ರೇನ್ ಹಿಮ್ಮೆಟ್ಟಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಉಕ್ರೇನ್​ನ ರೈಲ್ವೆ ಜಾಲವನ್ನೂ ರಷ್ಯಾ ಹಾಳುಗೆಡವುತ್ತಿದೆ. ಖಾರ್ಕಿವ್ ಸೇರಿದಂತೆ ವಿವಿಧ ನಗರಗಳಿಗೆ ರೈಲು ಸಂಪರ್ಕ ಅಸ್ತವ್ಯಸ್ತಗೊಂಡಿದೆ.

ಉಕ್ರೇನ್ ಪ್ರತಿದಾಳಿ; ಹಿಮ್ಮೆಟ್ಟುತ್ತಿರುವ ರಷ್ಯಾ

ಉಕ್ರೇನ್ ಪಡೆಗಳು ಭಾನುವಾರ (ಸೆ 11) ರಷ್ಯಾ ಗಡಿ ಸಮೀಪದ ಪೂರ್ವ ಪ್ರಾಂತ್ಯಗಳಲ್ಲಿ ಸಂಘಟಿತ ಪ್ರತಿದಾಳಿ ನಡೆಸಿವೆ. ಇದು ಯುದ್ಧದ ಫಲಿತಾಂಶದ ಮೇಲೆ ಪರಿಣಾಮ ಬೀರುವಷ್ಟು ಯಶಸ್ವಿಯಾಗಿದ್ದು, ಈಶಾನ್ಯ ಖಾರ್ಕಿವ್ (Kharkiv) ಪ್ರದೇಶದಲ್ಲಿ ರಷ್ಯಾ-ಆಕ್ರಮಿತ ಪ್ರದೇಶಗಳನ್ನು ಉಕ್ರೇನ್ ಮತ್ತೆ ತನ್ನ ಸುಪರ್ದಿಗೆ ಪಡೆದುಕೊಂಡಿದೆ. ರಷ್ಯಾದ ಯೋಧರು ತಮ್ಮ ಯುದ್ಧಸಾಮಗ್ರಿಗಳು ಮತ್ತು ಯುದ್ಧೋಪಕರಣಗಳನ್ನು ಬಂಕರ್​ಗಳಲ್ಲಿಯೇ ಬಿಟ್ಟು ಓಡಿ ಹೋಗಿದ್ದಾರೆ. ಉಕ್ರೇನ್​ನ ರಾಷ್ಟ್ರೀಯ ವಾಹಿನಿ ಈ ಸಂಬಂಧ ಸುದ್ದಿ ಪ್ರಸಾರ ಮಾಡಿದೆ. ಯುದ್ಧಭೂಮಿಯಿಂದ ರಷ್ಯಾ ಹಿಂದೆ ಸರಿದಿದ್ದನ್ನು ಉಕ್ರೇನ್ ಅಧ್ಯಕ್ಷ ಝೆಲೆನ್​ಸ್ಕಿ ಲೇವಡಿ ಮಾಡಿದ್ದಾರೆ.

Published On - 8:01 am, Mon, 12 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ