AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡ ಎಬೋಲಾ: 7 ಪ್ರಕರಣಗಳು ದೃಢ, 3 ಸಾವು

ಕೊನಾಕ್ರಿ ಪ್ರಯೋಗಾಲಯವು ಎಬೋಲಾ ವೈರಸ್ ಇರುವಿಕೆಯನ್ನು ದೃಢಪಡಿಸಿದೆ ಎಂದು ತುರ್ತು ಸಭೆಯ ನಂತರ ಅಧಿಕಾರಿಗಳು ಹೇಳಿದ್ದಾರೆ.

ಕೊರೊನಾ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡ ಎಬೋಲಾ: 7 ಪ್ರಕರಣಗಳು ದೃಢ, 3 ಸಾವು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 9:03 PM

Share

ಕೊರೊನಾ ವೈರಸ್​ ಭೀತಿ ನಿಧಾನವಾಗಿ ಕಡಿಮೆ ಆಗುತ್ತಿದೆ. ಅಗತ್ಯ ಕ್ರಮಗಳನ್ನು ಕೈಗೊಂಡ ಪರಿಣಾಮ, ಕೊರೊನಾ ಹರಡುವಿಕೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಅಲ್ಲದೆ, ಕೊರೊನಾಗೆ ಲಸಿಕೆ ಕೂಡ ಅನ್ವೇಷಣೆಗೊಂಡಿದ್ದು ಜನರ ಆತ್ಮಸ್ಥೈರ್ಯ ಹೆಚ್ಚಿಸಿದೆ. ಹೀಗಿರುವಾಗಲೇ, ದಕ್ಷಿಣಾ ಆಫ್ರಿಕಾದಲ್ಲಿ ಭೀಕರ ಎಬೋಲಾ ಮತ್ತೆ ಕಾಣಿಸಿಕೊಂಡಿದೆ. 7 ಎಬೋಲಾ ಪ್ರಕರಣಗಳು ಇಂದು ದೃಢವಾಗಿದೆ ಎಂದು ಗಿನಿಯಾ ಆರೋಗ್ಯ ಇಲಾಖೆ ಹೇಳಿದೆ.

ಇಂದು ಬೆಳಗ್ಗೆ, ಕೊನಾಕ್ರಿ ಪ್ರಯೋಗಾಲಯವು ಎಬೋಲಾ ವೈರಸ್ ಇರುವಿಕೆಯನ್ನು ದೃಢಪಡಿಸಿದೆ ಎಂದು ತುರ್ತು ಸಭೆಯ ನಂತರ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, ಮೂವರು ಮೃತಪಟ್ಟಿದ್ದು, ಇದಕ್ಕೆ ಎಬೋಲಾ ಕಾರಣ ಎಂದು ಅಧಿಕಾರಿಗಳು ಆತಂಕ ಹೊರಹಾಕಿದ್ದಾರೆ.

ಜನವರಿ ಅಂತ್ಯಕ್ಕೆ ಲಿಬೇರಿಯನ್​ ಗಡಿ ಭಾಗದಲ್ಲಿರುವ ಗೌಕೆಯಲ್ಲಿ ಓರ್ವ ಮೃತಪಟ್ಟಿದ್ದ. ಈತನ ಅಂತ್ಯಕ್ರಿಯೆ ಫೆಬ್ರವರಿ 1ರಂದು ನಡೆದಿತ್ತು. ಈತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಅನೇಕರಲ್ಲಿ ಅತಿಸಾರ, ವಾಂತಿ ಜತೆಗೆ ರಕ್ತ ಕಾರಿಕೊಳ್ಳಲು ಆರಂಭಿಸಿದ್ದರು. ಕೆಲ ದಿನ ಬಿಟ್ಟು ಜ್ವರ ಕೂಡ ಕಾಣಿಸಿಕೊಂಡಿತ್ತು. ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೆಲವರಲ್ಲಿ ಎಬೋಲಾ ವೈರಸ್​ ಇರುವ ವಿಚಾರ ಬೆಳಕಿಗೆ ಬಂದಿದೆ. 7 ಪ್ರಕರಣಗಳು ದೃಢವಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಬೋಲಾ ದಕ್ಷಿಣ ಆಫ್ರಿಕಾವನ್ನು ಭೀಕರವಾಗಿ ಕಾಡಿತ್ತು. ಈ ರೋಗಕ್ಕೆ 11,360 ಜನರು ಮೃತಪಟ್ಟಿದ್ದರು. ಈಗ ಈ ವೈರಸ್​ ಮತ್ತೆ ಕಾಣಿಸಿಕೊಂಡಿರುವುದು ಆತಂಕ ಸೃಷ್ಟಿಸಿದೆ. ಅಲ್ಲದೆ, ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಎಚ್ಚೆತ್ತುಕೊಂಡಿದ್ದು, ಸಹಾಯ ನೀಡುವ ಭರವಸೆ ನೀಡಿದೆ.

ಇದನ್ನೂ ಓದಿ: Disease X ಬರುತಿದೆ ಎಚ್ಚರವಿರಲಿ.. ಎಬೊಲಾದಷ್ಟೇ ಮಾರಣಾಂತಿಕ, ಪ್ರಸರಣದಲ್ಲಿ ಕೊರೊನಾಕ್ಕಿಂತಲೂ ವೇಗ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್