AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ರಾಜಕೀಯ ಪ್ರಕ್ಷುಬ್ಧತೆ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಾ?

ನೇಪಾಳದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆ ಮತ್ತು ಹೆಚ್ಚುತ್ತಿರುವ ಹಿಂಸಾಚಾರವು ಈಗ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಬಹುದು. ಭಾರತವು ನೇಪಾಳದೊಂದಿಗೆ ಆಳವಾದ ಆರ್ಥಿಕ ಸಂಬಂಧವನ್ನು ಹೊಂದಿದೆ, ವಿಶೇಷವಾಗಿ ವ್ಯಾಪಾರ ಮತ್ತು ಇಂಧನ ಪೂರೈಕೆಯಲ್ಲಿ. ಈ ಬಿಕ್ಕಟ್ಟು ಗಡಿಯಾಚೆಗಿನ ವ್ಯಾಪಾರದ ಮೇಲೆ ಪರಿಣಾಮ ಬೀರಬಹುದು, ಇದು ಎರಡೂ ದೇಶಗಳಿಗೆ ಆರ್ಥಿಕ ನಷ್ಟದ ಸಾಧ್ಯತೆಯನ್ನು ಹೆಚ್ಚಿಸಿದೆ.ನೇಪಾಳದಲ್ಲಿನ ಈ ರಾಜಕೀಯ ಬಿಕ್ಕಟ್ಟಿನ ಪರಿಣಾಮವು ನೇಪಾಳಕ್ಕೆ ಮಾತ್ರ ಸೀಮಿತವಾಗಿರದೆ, ನೆರೆಯ ಭಾರತಕ್ಕೂ ಕಳವಳಕಾರಿ ವಿಷಯವಾಗಬಹುದು.ಭಾರತವು ನೇಪಾಳದ ಅತಿದೊಡ್ಡ ವ್ಯಾಪಾರ ಪಾಲುದಾರ.

ನೇಪಾಳದ ರಾಜಕೀಯ ಪ್ರಕ್ಷುಬ್ಧತೆ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಾ?
ನೇಪಾಳ ಪ್ರತಿಭಟನೆ
ನಯನಾ ರಾಜೀವ್
|

Updated on:Sep 10, 2025 | 2:32 PM

Share

ಕಠ್ಮಂಡು, ಸೆಪ್ಟೆಂಬರ್ 10: ಕಳೆದ ಎರಡು ದಿನಗಳಿಂದ ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳು ಇಡೀ ವಿಶ್ವದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದೆ. ಇದರಿಂದಾಗಿ ಪ್ರಧಾನಿ ಕೆಪಿ ಶರ್ಮಾ ಓಲಿ(KP Sharma Oli) ರಾಜೀನಾಮೆ ನೀಡಬೇಕಾಯಿತು. 20 ರಿಂದ 30 ವರ್ಷ ಆಸು ಪಾಸಿನ ಯುವಕರು ಮೊದಲು ಪ್ರತಿಭಟನೆ ಆರಂಭಿಸಿದರು. ಪ್ರತಿಭಟನಾಕಾರರು ಮಾಜಿ ಪ್ರಧಾನಿಗಳ ಮನೆಗೆ ಬೆಂಕಿ ಹಚ್ಚಿದ್ದರು, ಮಾಜಿ ಪ್ರಧಾನಿಯೊಬ್ಬರು ಪತ್ನಿಯನ್ನು ಸಜೀವ ದಹನ ಮಾಡಿದ್ದಾರೆ.

ಸಂಸತ್ತಿನ ಕಟ್ಟಡಕ್ಕೆ ಬೆಂಕಿ ಹಚ್ಚಲಾಯಿತು.ವಿಮಾನ ನಿಲ್ದಾಣದಲ್ಲಿ ಕೂಡ ಬೆಂಕಿ ಹಚ್ಚಲಾಗಿತ್ತು.ಕರ್ಫ್ಯೂ ವಿಧಿಸಲಾಯಿತು, ಆದರೆ ಪ್ರತಿಭಟನಾಕಾರರ ಕೋಪ ಕಡಿಮೆಯಾಗಲಿಲ್ಲ.ಅಂತಿಮವಾಗಿ, ಸೇನೆಯು ಕಠ್ಮಂಡುವಿನ ಮೇಲೆ ಹಿಡಿತ ಸಾಧಿಸಿತು, ಸೇನಾ ಮುಖ್ಯಸ್ಥರು ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ನೇಪಾಳದ ಬೆಂಕಿ ಭಾರತದ ಮೇಲೂ ಪರಿಣಾಮ ಬೀರಬಹುದು

ನೇಪಾಳದಲ್ಲಿನ ಈ ರಾಜಕೀಯ ಬಿಕ್ಕಟ್ಟಿನ ಪರಿಣಾಮವು ನೇಪಾಳಕ್ಕೆ ಮಾತ್ರ ಸೀಮಿತವಾಗಿರದೆ, ನೆರೆಯ ಭಾರತಕ್ಕೂ ಕಳವಳಕಾರಿ ವಿಷಯವಾಗಬಹುದು.ಭಾರತವು ನೇಪಾಳದ ಅತಿದೊಡ್ಡ ವ್ಯಾಪಾರ ಪಾಲುದಾರ.ನೇಪಾಳದ ವ್ಯಾಪಾರದ ಸುಮಾರು ಮೂರನೇ ಎರಡರಷ್ಟು ಭಾಗ ಭಾರತದೊಂದಿಗೆ ಇದೆ, ಆದರೆ ವ್ಯಾಪಾರದಲ್ಲಿ ಭಾರಿ ಅಸಮತೋಲನವಿದೆ.

ನೇಪಾಳವು ಭಾರತದಿಂದ ಹಲವು ಪಟ್ಟು ಹೆಚ್ಚು ಸರಕುಗಳನ್ನು ಆಮದು ಮಾಡಿಕೊಳ್ಳುತ್ತದೆ, ಆದರೆ ಅದರ ರಫ್ತು ಕಡಿಮೆಯಾಗಿದೆ. ಇದು ನೇಪಾಳದ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತಿದೆ. 

ಮತ್ತಷ್ಟು ಓದಿ:  ನೇಪಾಳದಲ್ಲಿ ಮಿತಿ ಮೀರಿದ ಹಿಂಸಾಚಾರ; ಪ್ರತಿಭಟನಾಕಾರರಿಂದ ಮಾಜಿ ಪ್ರಧಾನಿಯ ಪತ್ನಿಯ ಸಜೀವ ದಹನ!

2024-25ರಲ್ಲಿ ನೇಪಾಳ 164 ದೇಶಗಳೊಂದಿಗೆ ವ್ಯಾಪಾರ ಮಾಡಿತು, ಆದರೆ ಹೆಚ್ಚಿನ ದೇಶಗಳೊಂದಿಗೆ ವ್ಯಾಪಾರ ಕೊರತೆ ದಾಖಲಾಗಿತ್ತು. ನೇಪಾಳವು ಭಾರತದೊಂದಿಗೆ ಅತಿದೊಡ್ಡ ವ್ಯಾಪಾರ ಕೊರತೆಯನ್ನು ಹೊಂದಿದೆ. ನೇಪಾಳವು ಭಾರತಕ್ಕೆ ಸುಮಾರು 225 ಬಿಲಿಯನ್ ರೂ. ಮೌಲ್ಯದ ಸರಕುಗಳನ್ನು ಮಾರಾಟ ಮಾಡಿತ್ತು.

ಆದರೆ ಭಾರತದಿಂದ 1,071 ಬಿಲಿಯನ್ ರೂ. ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿತು. ಅದೇ ರೀತಿ, ನೇಪಾಳವು ಚೀನಾದೊಂದಿಗೆ ಸಹ ದೊಡ್ಡ ವ್ಯಾಪಾರ ಕೊರತೆಯನ್ನು ಹೊಂದಿದೆ. ಅಂತಹ ಪರಿಸ್ಥಿತಿಯಲ್ಲಿ, ನೇಪಾಳದಲ್ಲಿನ ರಾಜಕೀಯ ಅಸ್ಥಿರತೆಯು ಆರ್ಥಿಕ ದೌರ್ಬಲ್ಯವನ್ನು ಮತ್ತಷ್ಟು ಹೆಚ್ಚಿಸಬಹುದು, ಇದು ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ.

ಅಮೆರಿಕ ಜೊತೆಗಿನ ಉದ್ವಿಗ್ನತೆ ನಡುವೆ ಭಾರತಕ್ಕೆ ದೊಡ್ಡ ಸವಾಲು

ಪ್ರಸ್ತುತ, ಅಮೆರಿಕದೊಂದಿಗಿನ ಸಂಬಂಧಗಳು ಉದ್ವಿಗ್ನವಾಗಿವೆ ಮತ್ತು ಅಂತಹ ಸಮಯದಲ್ಲಿ ಭಾರತವು ತನ್ನ ರಫ್ತು ಸಾಮರ್ಥ್ಯವನ್ನು ಹೆಚ್ಚಿಸಲು ಅಂದರೆ ವಿದೇಶಗಳಿಗೆ ಸರಕುಗಳನ್ನು ಕಳುಹಿಸಲು ಬಯಸುತ್ತದೆ. ಆದರೆ ನೇಪಾಳದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯು ಈ ಪ್ರಯತ್ನದಲ್ಲಿ ದೊಡ್ಡ ಅಡಚಣೆಯಾಗಬಹುದು. ಈ ಪ್ರದೇಶದಲ್ಲಿನ ಅಸ್ಥಿರತೆಯು ಹೂಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ವ್ಯಾಪಾರದ ಮೇಲೂ ಪರಿಣಾಮ ಬೀರುತ್ತದೆ. ನೇಪಾಳದ ಆರ್ಥಿಕತೆಯು ಈಗಾಗಲೇ ದುರ್ಬಲವಾಗಿದೆ ಮತ್ತು ಈ ರಾಜಕೀಯ ಬಿಕ್ಕಟ್ಟು ಅದನ್ನು ಮತ್ತಷ್ಟು ದುರ್ಬಲಗೊಳಿಸಬಹುದು ಎನ್ನಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:30 pm, Wed, 10 September 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!