AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಕ್ವೇಡರ್: ಏಕಾಏಕಿ ಸುದ್ದಿವಾಹಿನಿಯ ಸ್ಟುಡಿಯೋಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು

ಬಂಧೂಕುಧಾರಿಗಳು ಏಕಾಏಕಿ ಟಿವಿ ಸ್ಟುಡಿಯೋದೊಳಗೆ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿರುವ ಘಟನೆ ಈಕ್ವೇಡರ್​ನಲ್ಲಿ ನಡೆದಿದೆ. ಕೆಲವು ಮುಸುಕುಧಾರಿ ಬಂದೂಕುಧಾರಿಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದ್ದಾರೆ. ವ್ಯಕ್ತಿಯೊಬ್ಬರು ಕೈಮುಗಿದು ಅವರಿಗೆ ಏನೋ ಹೇಳುತ್ತಿರುವುದನ್ನು ಕಾಣಬಹುದು.

ಈಕ್ವೇಡರ್: ಏಕಾಏಕಿ ಸುದ್ದಿವಾಹಿನಿಯ ಸ್ಟುಡಿಯೋಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು
ಈಕ್ವೇಡರ್
ನಯನಾ ರಾಜೀವ್
|

Updated on: Jan 10, 2024 | 7:57 AM

Share

ಬಂಧೂಕುಧಾರಿಗಳು ಏಕಾಏಕಿ ಟಿವಿ ಸ್ಟುಡಿಯೋದೊಳಗೆ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿರುವ ಘಟನೆ ಈಕ್ವೇಡರ್​ನಲ್ಲಿ ನಡೆದಿದೆ. ಕೆಲವು ಮುಸುಕುಧಾರಿ ಬಂದೂಕುಧಾರಿಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದ್ದಾರೆ. ವ್ಯಕ್ತಿಯೊಬ್ಬರು ಕೈಮುಗಿದು ಅವರಿಗೆ ಏನೋ ಹೇಳುತ್ತಿರುವುದನ್ನು ಕಾಣಬಹುದು.

ಸುದ್ದಿ ಸಂಸ್ಥೆ AFP ಪ್ರಕಾರ, ಈ ಘಟನೆ ಮಂಗಳವಾರ (ಜನವರಿ 9) ನಡೆದಿದೆ. ಅಲ್ಲಿ ಹಲವಾರು ಪತ್ರಕರ್ತರು ಮತ್ತು ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ ಇಡೀ ಘಟನೆಯು ಚಾನೆಲ್​ನ ಲೈವ್​ನಲ್ಲಿ ಪ್ರಸಾರವಾಗುತ್ತಿತ್ತು.

ಪ್ರಬಲ ಗ್ಯಾಂಗ್ ನಾಯಕನೊಬ್ಬ ಜೈಲಿನಿಂದ ತಪ್ಪಿಸಿಕೊಂಡಿದ್ದು ಸರ್ಕಾರವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ರ್ಕಾರ ತುರ್ತುಪರಿಸ್ಥಿತಿ ಹೇರಿದ ನಂತರ ದೇಶವು ಸರಣಿ ದಾಳಿಗೆ ತುತ್ತಾಗುತ್ತಿದೆ. ಇತರ ವರದಿಗಳಲ್ಲಿ, ಅತ್ಯಂತ ಅಪಾಯಕಾರಿ ಡ್ರಗ್ ಲಾರ್ಡ್ ಜೋಸ್ ಅಡಾಲ್ಫೊ ಮಾಕಿಯಾಸ್ (ಫಿಟೊ ಎಂದೂ ಕರೆಯುತ್ತಾರೆ) ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ:Gangster Tillu Tajpuriya Murder: ತಿಹಾರ್ ಜೈಲಿನಲ್ಲಿ ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಹತ್ಯೆ

ಸಿಗ್ನಲ್ ಕಡಿತಗೊಳ್ಳುವ ಮೊದಲು ಚಾನಲ್ ಕನಿಷ್ಠ 15 ನಿಮಿಷಗಳ ಕಾಲ ನೇರ ಪ್ರಸಾರ ಮಾಡಿದೆ. ಗುಂಡು ಹಾರಿಸಬೇಡಿ ಎನ್ನುವ ಕೂಗು, ನೆಲದ ಮೇಲೆ ಬಿದ್ದಿರುವ ಸಿಬ್ಬಂದಿ ಎಲ್ಲವೂ ಲೈವ್​ನಲ್ಲಿ ಪ್ರಸಾರವಾಗಿದೆ.

ಈಗಾಗಲೇ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ, ಎರಡು ಸಿಬ್ಬಂದಿ ಗಾಯಗೊಂಡಿದ್ದಾರೆ. ಅಧ್ಯಕ್ಷ 60 ದಿನಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.ಜೈಲುಗಳಲ್ಲಿ ಸೇರಿದಂತೆ ಮಿಲಿಟರಿ ಗಸ್ತುಗಳನ್ನು ಸಕ್ರಿಯಗೊಳಿಸಲಾಗಿದೆ. ಕ್ರಿಮಿನಲ್​ ಗ್ಯಾಂಗ್​ನ ನಾಯಕ ಅಡಾಲ್ಪೊ ಭದ್ರತಾ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿಕೊಂಡು ಜೈಲಿನಿಂದ ಓಡಿ ಹೋಗಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ