AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ

ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ
ಮೆಹುಲ್​ ಚೋಕ್ಸಿ
Lakshmi Hegde
|

Updated on: Jun 01, 2021 | 1:21 PM

Share

ಮೆಹುಲ್​ ಚೋಕ್ಸಿ ಈಗಲೂ ಭಾರತದ ಪ್ರಜೆ ಎಂದು ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಅವಕಾಶ ಕೊಡುವಂತೆ ಜಾರಿ ನಿರ್ದೇಶನಾಲಯ (ಇಡಿ) ಡೊಮಿನಿಕಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿದೆ. ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣ ಆರೋಪಿ ಮೆಹುಲ್ ಚೋಕ್ಸಿ 2018ರಲ್ಲಿ ಭಾರತವನ್ನು ತೊರೆದು ಆಂಟಿಗುವಾಕ್ಕೆ ಪರಾರಿಯಾಗಿದ್ದ. ಅಲ್ಲಿನ ಪೌರತ್ವ ಪಡೆದಿದ್ದ ಚೋಕ್ಸಿ, ತಮ್ಮ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಅಕ್ರಮವಾಗಿ ಡೊಮಿನಿಕಾ ದ್ವೀಪರಾಷ್ಟ್ರವನ್ನು ನುಸುಳಿ, ಅಲ್ಲಿನ ಪೊಲೀಸರಿಂದ ಬಂಧಿತರಾಗಿದ್ದರು.

ಬಂಧಿತ ಚೋಕ್ಸಿ ವಾಪಸ್​ ಬರಲು ಅವಕಾಶ ಕೊಡುವುದಿಲ್ಲ ಎಂದು ಆಂಟಿಗುವಾ ಪ್ರಧಾನಿ ಹೇಳಿದ್ದಾರೆ. ಇದೀಗ ಭಾರತದ ಜಾರಿ ನಿರ್ದೇಶನಾಲಯ ತನ್ನ ಪ್ರಕ್ರಿಯೆಗಳನ್ನು ಶುರು ಮಾಡಿದೆ. ಮೆಹುಲ್ ಚೋಕ್ಸಿ ಒಬ್ಬ ದೇಶಭ್ರಷ್ಟ ವ್ಯಾಪಾರಿ. ಆತ ಭಾರತದ ಪ್ರಜೆ ಎಂದು ಬುಧವಾರ ಡೊಮಿನಿಕಾ ಕೋರ್ಟ್​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಮುಂದಾಗಿದೆ. ಇದಕ್ಕಾಗಿ ಇಂದು ಸಂಜೆಯೊಳಗೆ ಡೊಮಿನಿಕಾ ಸರ್ಕಾರದ ಅನುಮತಿ ಪಡೆಯಲಿದೆ.

ಚೋಕ್ಸಿ ವಿಚಾರದಲ್ಲಿ ಭಾರತದ ಕೇಂದ್ರ ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸುವುದು ಕಡ್ಡಾಯವಾಗಿದೆ. ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ. ಡೊಮಿನಿಕಾದಲ್ಲಿ ಮೆಹುಲ್​ ಚೋಕ್ಸಿ ಜೈಲಿನಲ್ಲಿ ಇರುವ ಮತ್ತು ಅವರ ಮೈಮೇಲೆ ಹೊಡೆದ ಗಾಯಗಳಾದ ಫೋಟೋ ಕೂಡ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಈ ಮೆಹುಲ್​ ಚೋಕ್ಸಿ ನೀರವ್​ ಮೋದಿಯ ಸಂಬಂಧಿಯೇ ಆಗಿದ್ದಾರೆ. ಇವರಿಬ್ಬರೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಗಳಾಗಿದ್ದಾರೆ. ನೀರವ್​ ಮೋದಿ ಲಂಡನ್ ಜೈಲಿನಲ್ಲಿದ್ದರೆ, ಮೆಹುಲ್​ ಚೋಕ್ಸಿ ಆಂಟಿಗುವಾಕ್ಕೆ ತೆರಳಿ ಅಲ್ಲಿನ ಪೌರತ್ವ ಪಡೆದಿದ್ದರು. ಇವರಿಬ್ಬರ ವಿರುದ್ಧವೂ ಇಡಿ ತನಿಖೆ ನಡೆಸಿದೆ.

ಇದನ್ನೂ ಓದಿ: ಕೊರೊನಾದಿಂದ ಚೇತರಿಸಿಕೊಂಡಿದ್ದ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್​​ ಏಮ್ಸ್​ಗೆ ದಾಖಲು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್