AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ

ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ
ಮೆಹುಲ್​ ಚೋಕ್ಸಿ
Lakshmi Hegde
|

Updated on: Jun 01, 2021 | 1:21 PM

Share

ಮೆಹುಲ್​ ಚೋಕ್ಸಿ ಈಗಲೂ ಭಾರತದ ಪ್ರಜೆ ಎಂದು ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಅವಕಾಶ ಕೊಡುವಂತೆ ಜಾರಿ ನಿರ್ದೇಶನಾಲಯ (ಇಡಿ) ಡೊಮಿನಿಕಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿದೆ. ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣ ಆರೋಪಿ ಮೆಹುಲ್ ಚೋಕ್ಸಿ 2018ರಲ್ಲಿ ಭಾರತವನ್ನು ತೊರೆದು ಆಂಟಿಗುವಾಕ್ಕೆ ಪರಾರಿಯಾಗಿದ್ದ. ಅಲ್ಲಿನ ಪೌರತ್ವ ಪಡೆದಿದ್ದ ಚೋಕ್ಸಿ, ತಮ್ಮ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಅಕ್ರಮವಾಗಿ ಡೊಮಿನಿಕಾ ದ್ವೀಪರಾಷ್ಟ್ರವನ್ನು ನುಸುಳಿ, ಅಲ್ಲಿನ ಪೊಲೀಸರಿಂದ ಬಂಧಿತರಾಗಿದ್ದರು.

ಬಂಧಿತ ಚೋಕ್ಸಿ ವಾಪಸ್​ ಬರಲು ಅವಕಾಶ ಕೊಡುವುದಿಲ್ಲ ಎಂದು ಆಂಟಿಗುವಾ ಪ್ರಧಾನಿ ಹೇಳಿದ್ದಾರೆ. ಇದೀಗ ಭಾರತದ ಜಾರಿ ನಿರ್ದೇಶನಾಲಯ ತನ್ನ ಪ್ರಕ್ರಿಯೆಗಳನ್ನು ಶುರು ಮಾಡಿದೆ. ಮೆಹುಲ್ ಚೋಕ್ಸಿ ಒಬ್ಬ ದೇಶಭ್ರಷ್ಟ ವ್ಯಾಪಾರಿ. ಆತ ಭಾರತದ ಪ್ರಜೆ ಎಂದು ಬುಧವಾರ ಡೊಮಿನಿಕಾ ಕೋರ್ಟ್​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಮುಂದಾಗಿದೆ. ಇದಕ್ಕಾಗಿ ಇಂದು ಸಂಜೆಯೊಳಗೆ ಡೊಮಿನಿಕಾ ಸರ್ಕಾರದ ಅನುಮತಿ ಪಡೆಯಲಿದೆ.

ಚೋಕ್ಸಿ ವಿಚಾರದಲ್ಲಿ ಭಾರತದ ಕೇಂದ್ರ ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸುವುದು ಕಡ್ಡಾಯವಾಗಿದೆ. ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ. ಡೊಮಿನಿಕಾದಲ್ಲಿ ಮೆಹುಲ್​ ಚೋಕ್ಸಿ ಜೈಲಿನಲ್ಲಿ ಇರುವ ಮತ್ತು ಅವರ ಮೈಮೇಲೆ ಹೊಡೆದ ಗಾಯಗಳಾದ ಫೋಟೋ ಕೂಡ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಈ ಮೆಹುಲ್​ ಚೋಕ್ಸಿ ನೀರವ್​ ಮೋದಿಯ ಸಂಬಂಧಿಯೇ ಆಗಿದ್ದಾರೆ. ಇವರಿಬ್ಬರೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಗಳಾಗಿದ್ದಾರೆ. ನೀರವ್​ ಮೋದಿ ಲಂಡನ್ ಜೈಲಿನಲ್ಲಿದ್ದರೆ, ಮೆಹುಲ್​ ಚೋಕ್ಸಿ ಆಂಟಿಗುವಾಕ್ಕೆ ತೆರಳಿ ಅಲ್ಲಿನ ಪೌರತ್ವ ಪಡೆದಿದ್ದರು. ಇವರಿಬ್ಬರ ವಿರುದ್ಧವೂ ಇಡಿ ತನಿಖೆ ನಡೆಸಿದೆ.

ಇದನ್ನೂ ಓದಿ: ಕೊರೊನಾದಿಂದ ಚೇತರಿಸಿಕೊಂಡಿದ್ದ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್​​ ಏಮ್ಸ್​ಗೆ ದಾಖಲು

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್