AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ

ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ.

ಮೆಹುಲ್ ಚೋಕ್ಸಿ ವಿರುದ್ಧ ಕಾನೂನು ಪ್ರಕ್ರಿಯೆ ಶುರು ಮಾಡಿದ ಇಡಿ; ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಸಿದ್ಧತೆ
ಮೆಹುಲ್​ ಚೋಕ್ಸಿ
Lakshmi Hegde
|

Updated on: Jun 01, 2021 | 1:21 PM

Share

ಮೆಹುಲ್​ ಚೋಕ್ಸಿ ಈಗಲೂ ಭಾರತದ ಪ್ರಜೆ ಎಂದು ಡೊಮಿನಿಕಾ ಕೋರ್ಟ್​​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಅವಕಾಶ ಕೊಡುವಂತೆ ಜಾರಿ ನಿರ್ದೇಶನಾಲಯ (ಇಡಿ) ಡೊಮಿನಿಕಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿದೆ. ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣ ಆರೋಪಿ ಮೆಹುಲ್ ಚೋಕ್ಸಿ 2018ರಲ್ಲಿ ಭಾರತವನ್ನು ತೊರೆದು ಆಂಟಿಗುವಾಕ್ಕೆ ಪರಾರಿಯಾಗಿದ್ದ. ಅಲ್ಲಿನ ಪೌರತ್ವ ಪಡೆದಿದ್ದ ಚೋಕ್ಸಿ, ತಮ್ಮ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಅಕ್ರಮವಾಗಿ ಡೊಮಿನಿಕಾ ದ್ವೀಪರಾಷ್ಟ್ರವನ್ನು ನುಸುಳಿ, ಅಲ್ಲಿನ ಪೊಲೀಸರಿಂದ ಬಂಧಿತರಾಗಿದ್ದರು.

ಬಂಧಿತ ಚೋಕ್ಸಿ ವಾಪಸ್​ ಬರಲು ಅವಕಾಶ ಕೊಡುವುದಿಲ್ಲ ಎಂದು ಆಂಟಿಗುವಾ ಪ್ರಧಾನಿ ಹೇಳಿದ್ದಾರೆ. ಇದೀಗ ಭಾರತದ ಜಾರಿ ನಿರ್ದೇಶನಾಲಯ ತನ್ನ ಪ್ರಕ್ರಿಯೆಗಳನ್ನು ಶುರು ಮಾಡಿದೆ. ಮೆಹುಲ್ ಚೋಕ್ಸಿ ಒಬ್ಬ ದೇಶಭ್ರಷ್ಟ ವ್ಯಾಪಾರಿ. ಆತ ಭಾರತದ ಪ್ರಜೆ ಎಂದು ಬುಧವಾರ ಡೊಮಿನಿಕಾ ಕೋರ್ಟ್​ನಲ್ಲಿ ಅಫಿಡಿವಿಟ್​ ಸಲ್ಲಿಸಲು ಮುಂದಾಗಿದೆ. ಇದಕ್ಕಾಗಿ ಇಂದು ಸಂಜೆಯೊಳಗೆ ಡೊಮಿನಿಕಾ ಸರ್ಕಾರದ ಅನುಮತಿ ಪಡೆಯಲಿದೆ.

ಚೋಕ್ಸಿ ವಿಚಾರದಲ್ಲಿ ಭಾರತದ ಕೇಂದ್ರ ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸುವುದು ಕಡ್ಡಾಯವಾಗಿದೆ. ಚೋಕ್ಸಿ ಭಾರತದ ಪ್ರಜೆ ಮತ್ತು ಅಪರಾಧಿ. ಹೀಗಾಗಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಾವು ಡೊಮಿನಿಕಾ ಕೋರ್ಟ್​​ನಲ್ಲಿ ಮನವಿ ಮಾಡುತ್ತೇವೆ ಎಂದು ಇಡಿ ತಿಳಿಸಿದೆ. ಡೊಮಿನಿಕಾದಲ್ಲಿ ಮೆಹುಲ್​ ಚೋಕ್ಸಿ ಜೈಲಿನಲ್ಲಿ ಇರುವ ಮತ್ತು ಅವರ ಮೈಮೇಲೆ ಹೊಡೆದ ಗಾಯಗಳಾದ ಫೋಟೋ ಕೂಡ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಈ ಮೆಹುಲ್​ ಚೋಕ್ಸಿ ನೀರವ್​ ಮೋದಿಯ ಸಂಬಂಧಿಯೇ ಆಗಿದ್ದಾರೆ. ಇವರಿಬ್ಬರೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಗಳಾಗಿದ್ದಾರೆ. ನೀರವ್​ ಮೋದಿ ಲಂಡನ್ ಜೈಲಿನಲ್ಲಿದ್ದರೆ, ಮೆಹುಲ್​ ಚೋಕ್ಸಿ ಆಂಟಿಗುವಾಕ್ಕೆ ತೆರಳಿ ಅಲ್ಲಿನ ಪೌರತ್ವ ಪಡೆದಿದ್ದರು. ಇವರಿಬ್ಬರ ವಿರುದ್ಧವೂ ಇಡಿ ತನಿಖೆ ನಡೆಸಿದೆ.

ಇದನ್ನೂ ಓದಿ: ಕೊರೊನಾದಿಂದ ಚೇತರಿಸಿಕೊಂಡಿದ್ದ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್​​ ಏಮ್ಸ್​ಗೆ ದಾಖಲು

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ