AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on:Mar 17, 2021 | 8:27 AM

Share

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರಿಂದ ಮೂರು ಪ್ರತೇಕ ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿದ್ದು 8 ಜನರು ಮೃತಪಟ್ಟಿದ್ದಾರೆ. ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ ಅಪರಿಚಿತರು ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಚೆರೋಕೀ ಕೌಂಟಿ ಮಸಾಜ್ ಪಾರ್ಲರ್​ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಸಿಕ್ಕಿಬಿದ್ದಿದ್ದಾನೆ.

ಸುದ್ದಿಗೋಷ್ಠಿಯಲ್ಲಿ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂದು ನಮಗೆ ಕರೆ ಬಂದಿತ್ತು ಎಂದು ಬ್ರ್ಯಾಂಟ್ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಮತ್ತೊಂದು ಕರೆ ಬಂತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿದ್ರು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ.

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು

Published On - 8:26 am, Wed, 17 March 21

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ