AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಸೇನಾ ಮುಖ್ಯಸ್ಥರನ್ನು ಟೀಕಿಸಿದ್ದಕ್ಕಾಗಿ ಇಮ್ರಾನ್ ಖಾನ್ ಪಕ್ಷದ ಸಾಮಾಜಿಕ ಮಾಧ್ಯಮ ತಂಡದ 8 ಸದಸ್ಯರ ಬಂಧನ

ಎಫ್‌ಐಎ ಪ್ರಕಾರ, ಗುಪ್ತಚರ ಸಂಸ್ಥೆಗಳಿಂದ ಸೇನಾ ಮುಖ್ಯಸ್ಥ ಮತ್ತು ಉನ್ನತ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮ ಪ್ರಚಾರದಲ್ಲಿ ಭಾಗಿಯಾಗಿರುವ 50 ಶಂಕಿತರ ಪಟ್ಟಿಯನ್ನು ಅದು ಸ್ವೀಕರಿಸಿದೆ.

ಪಾಕ್ ಸೇನಾ ಮುಖ್ಯಸ್ಥರನ್ನು ಟೀಕಿಸಿದ್ದಕ್ಕಾಗಿ ಇಮ್ರಾನ್ ಖಾನ್ ಪಕ್ಷದ ಸಾಮಾಜಿಕ ಮಾಧ್ಯಮ ತಂಡದ 8 ಸದಸ್ಯರ ಬಂಧನ
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 13, 2022 | 9:42 PM

Share

ಇಸ್ಲಾಮಾಬಾದ್: ಇಮ್ರಾನ್ ಖಾನ್ (Imran Khan) ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಎಂಟು ಸಾಮಾಜಿಕ ಮಾಧ್ಯಮ ಕಾರ್ಯಕರ್ತರನ್ನು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ (Gen Qamar Javed Bajwa) ವಿರುದ್ಧ ಅಪಪ್ರಚಾರ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಸೇನಾ ಮುಖ್ಯಸ್ಥ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿದ್ದಕ್ಕಾಗಿ ಪಾಕಿಸ್ತಾನದ (Pakistan) ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (FIA) ಮಂಗಳವಾರ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಸಾಮಾಜಿಕ ಮಾಧ್ಯಮ ಕಾರ್ಯಕರ್ತರನ್ನು ಬಂಧಿಸಿದೆ. ಮಾರ್ಚ್ 8 ರಂದು  ಇಮ್ರಾನ್ ಖಾನ್  ವಿರುದ್ಧದ ಜಂಟಿ ವಿರೋಧ ಪಕ್ಷದ ಅವಿಶ್ವಾಸ ನಿರ್ಣಯವು ಯಶಸ್ವಿಯಾದ ನಂತರ ಖಾನ್ ಅವರನ್ನು ಪ್ರಧಾನಿ ಹುದ್ದೆಯಿಂದ ಹೊರಹಾಕಲಾಯಿತು. ನಂತರದ ದಿನಗಳಲ್ಲಿ ಜನರಲ್ ಬಾಜ್ವಾ ವಿರುದ್ಧದ ಪ್ರಚಾರವು ಟ್ವಿಟರ್‌ನಲ್ಲಿ ಟಾಪ್ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿತು.  ಎಫ್‌ಐಎ ಪ್ರಕಾರ, ಗುಪ್ತಚರ ಸಂಸ್ಥೆಗಳಿಂದ ಸೇನಾ ಮುಖ್ಯಸ್ಥ ಮತ್ತು ಉನ್ನತ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮ ಪ್ರಚಾರದಲ್ಲಿ ಭಾಗಿಯಾಗಿರುವ 50 ಶಂಕಿತರ ಪಟ್ಟಿಯನ್ನು ಅದು ಸ್ವೀಕರಿಸಿದೆ ಮತ್ತು ಅವರಲ್ಲಿ ಎಂಟು ಮಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ.  ನೂರಾರು ಟ್ವೀಟ್‌ಗಳು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಸೇನಾ ಮುಖ್ಯಸ್ಥರು ಖಾನ್ ಅವರನ್ನು ಹೊರಹಾಕಲು ಕಾರಣವಾಗಿದ್ದಾರೆ ಎಂದು ದೂಷಿಸಿವೆ.

ಖಾನ್ ಅವರ ಆಪ್ತ ಸಹಾಯಕ ಅಸಾದ್ ಉಮರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಪಿಟಿಐ ಸಾಮಾಜಿಕ ಮಾಧ್ಯಮ ಕಾರ್ಯಕರ್ತರ ಕಿರುಕುಳವನ್ನು ಪ್ರಶ್ನಿಸಿ ಅರ್ಜಿಯನ್ನು ಬುಧವಾರ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗುವುದು ಎಂದಿದ್ದಾರೆ. ಏತನ್ಮಧ್ಯೆ, ಮಂಗಳವಾರ ಪಾಕಿಸ್ತಾನ ಸೇನೆಯ ಅಧಿಕಾರಿಗಳ ಸಭೆಯು ಸಾಮಾಜಿಕ ಮಾಧ್ಯಮದಲ್ಲಿ ಸಂಸ್ಥೆಯ ವಿರುದ್ಧದ ಪ್ರಚಾರವನ್ನು ಗಮನಿಸಿತು. ನಾಯಕತ್ವದ “ಸಂವಿಧಾನ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುವ ಉತ್ತಮ-ಪರಿಗಣಿತ ನಿಲುವು” ನಲ್ಲಿ ಸಂಪೂರ್ಣ ವಿಶ್ವಾಸವನ್ನು ವ್ಯಕ್ತಪಡಿಸಿತು.

ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಹೊರಡಿಸಿದ ಹೇಳಿಕೆಯ ಪ್ರಕಾರ 79 ನೇ ಫಾರ್ಮೇಷನ್ ಕಮಾಂಡರ್‌ಗಳ ಸಮ್ಮೇಳನವನ್ನು ಜನರಲ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ನಡೆಸಲಾಯಿತು. ಇದರಲ್ಲಿ ಸೇನೆಯ ಕಾರ್ಪ್ಸ್ ಕಮಾಂಡರ್‌ಗಳು, ಪ್ರಧಾನ ಸಿಬ್ಬಂದಿ ಅಧಿಕಾರಿಗಳು ಮತ್ತು ಎಲ್ಲಾ ಫಾರ್ಮೇಷನ್ ಕಮಾಂಡರ್‌ಗಳು ಭಾಗವಹಿಸಿದ್ದರು. ಸೇನಾ ಸಿಬ್ಬಂದಿಗಳ ಮುಖ್ಯಸ್ಥರು (COAS) ಜನರಲ್ ಬಜ್ವಾ ಅಧ್ಯಕ್ಷತೆ ವಹಿಸಿದ್ದರು. “ಪಾಕಿಸ್ತಾನ ಸೇನೆಯನ್ನು ನಿಂದಿಸಲು ಮತ್ತು ಸಂಸ್ಥೆ ಮತ್ತು ಸಮಾಜದ ನಡುವೆ ಒಡಕು ಮೂಡಿಸಲು ಕೆಲವು ವಲಯಗಳಿಂದ ಇತ್ತೀಚಿನ ಪ್ರಚಾರವನ್ನು ವೇದಿಕೆ ಗಮನಿಸಿದೆ. ಪಾಕಿಸ್ತಾನದ ರಾಷ್ಟ್ರೀಯ ಭದ್ರತೆ ಮುಖ್ಯ. ಪಾಕಿಸ್ತಾನದ ಸೇನೆಯು ಯಾವಾಗಲೂ ಯಾವುದೇ ರಾಜಿ ಮಾಡಿಕೊಳ್ಳದೆ ರಾಜ್ಯ ಸಂಸ್ಥೆಗಳ ರಕ್ಷಣೆಗೆ ನಿಂತಿದೆ ಎಂದು ಐಎಸ್ ಪಿಆರ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ‘ಪಾಕಿಸ್ತಾನ ಶಾಂತಿಯುತ ಬಾಂಧವ್ಯವನ್ನು ಬಯಸುತ್ತದೆ’: ಪ್ರಧಾನಿ ಮೋದಿಗೆ ಪ್ರತಿಕ್ರಿಯಿಸಿದ ಪಾಕ್ ಪಿಎಂ ಶಹಬಾಜ್ ಷರೀಫ್

Published On - 9:40 pm, Wed, 13 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್