AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​ಗೆ ಪ್ರತಿ ದಿನ 40 ಲಕ್ಷ ಡಾಲರ್ ನಷ್ಟ; ಸಿಬ್ಬಂದಿ ವಜಾ ಸಮರ್ಥಿಸಿದ ಎಲಾನ್​ ಮಸ್ಕ್

ಕಂಪನಿಯು ಪ್ರತಿ ದಿನ 40 ಲಕ್ಷ ಡಾಲರ್​ಗಿಂತಲೂ ಹೆಚ್ಚಿನ ಮೊತ್ತವನ್ನು ಕಳೆದುಕೊಳ್ಳುತ್ತಿರುವುದರಿಂದ ದುರದೃಷ್ಟವಶಾತ್, ಉದ್ಯೋಗ ಕಡಿತ ಬಿಟ್ಟು ಬೇರೆ ಆಯ್ಕೆಯೇ ಇಲ್ಲದಾಗಿದೆ ಟ್ವಿಟರ್ ನೂತನ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ಟ್ವಿಟರ್​ಗೆ ಪ್ರತಿ ದಿನ 40 ಲಕ್ಷ ಡಾಲರ್ ನಷ್ಟ; ಸಿಬ್ಬಂದಿ ವಜಾ ಸಮರ್ಥಿಸಿದ ಎಲಾನ್​ ಮಸ್ಕ್
ಎಲಾನ್ ಮಸ್ಕ್
TV9 Web
| Updated By: Ganapathi Sharma|

Updated on: Nov 05, 2022 | 11:28 AM

Share

ನವದೆಹಲಿ: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್​​(Twitter) ಸಿಬ್ಬಂದಿಯ ವಜಾ ಪ್ರಕ್ರಿಯೆ (layoffs) ಆರಂಭಿಸಿರುವುದನ್ನು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ (Elon Musk) ಸಮರ್ಥಿಸಿಕೊಂಡಿದ್ದಾರೆ. ಕಂಪನಿಯು ಪ್ರತಿ ದಿನ 40 ಲಕ್ಷ ಡಾಲರ್​ಗಿಂತಲೂ ಹೆಚ್ಚಿನ ಮೊತ್ತವನ್ನು ಕಳೆದುಕೊಳ್ಳುತ್ತಿದೆ. ಹೀಗಾಗಿ ಉದ್ಯೋಗ ಕಡಿತದ ಹೊರತು ಬೇರೆ ಆಯ್ಕೆಯೇ ಇಲ್ಲ ಎಂದು ಅವರು ಹೇಳಿದ್ದಾರೆ. ಜಗತ್ತಿನ ಶ್ರೀಮಂತ ಉದ್ಯಮಿ, ಟೆಸ್ಲಾ ಕಂಪನಿಯ ಮಾಲೀಕರಾಗಿರುವ ಮಸ್ಕ್ ಕಳೆದ ವಾರವಷ್ಟೇ ಟ್ವಿಟರ್​ ಅನ್ನು ಸಂಪೂರ್ಣವಾಗಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಸ್ಕ್, ‘ಕಂಪನಿಯು ಪ್ರತಿ ದಿನ 40 ಲಕ್ಷ ಡಾಲರ್​ಗಿಂತಲೂ ಹೆಚ್ಚಿನ ಮೊತ್ತವನ್ನು ಕಳೆದುಕೊಳ್ಳುತ್ತಿರುವುದರಿಂದ ದುರದೃಷ್ಟವಶಾತ್, ಉದ್ಯೋಗ ಕಡಿತ ಬಿಟ್ಟು ಬೇರೆ ಆಯ್ಕೆಯೇ ಇಲ್ಲದಾಗಿದೆ. ಉದ್ಯೋಗದಿಂದ ವಜಾಗೊಳ್ಳುವ ಸಿಬ್ಬಂದಿಗೆ 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಇದು ಕಾನೂನುಬದ್ಧವಾಗಿ ನೀಡಬೇಕಾದ ಅವಕಾಶಕ್ಕಿಂತಲೂ ಶೇಕಡಾ 50ರಷ್ಟು ಹೆಚ್ಚಿನ ಸೌಲಭ್ಯವಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
Personal Loan: ವೈಯಕ್ತಿಕ ಸಾಲದ ಅರ್ಹತೆ ಹೆಚ್ಚಿಸಿಕೊಳ್ಳಲು ಇಲ್ಲಿವೆ 4 ಸರಳ ವಿಧಾನ
Image
Amazon Hiring: ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆ; ನೇಮಕಾತಿ ಮುಂದೂಡಿಕೆ ಘೋಷಿಸಿದ ಅಮೆಜಾನ್
Image
EPFO Amendment: ಇಪಿಎಫ್​ಒ 2014ರ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಹೆಚ್ಚು ಪಿಂಚಣಿ ಬಯಸಿದ್ದವರಿಗೆ ನಿರಾಸೆ
Image
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಬಾಕಿ ಇರುವ ತುಟ್ಟಿಭತ್ಯೆ 3 ಕಂತಿನಲ್ಲಿ ನೀಡುವ ನಿರೀಕ್ಷೆ

ಉಳಿದಂತೆ ಟ್ವಿಟರ್​ನ ಕಂಟೆಂಟ್ ಮಾಡರೇಷನ್ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದ್ವೇಷ ಹರಡುವಿಕೆಗೆ ಸಂಬಂಧಿಸಿದ ಸಂದೇಶಗಳು ಈ ವಾರ ಕಡಿಮೆಯಾಗಿರುವುದನ್ನು ಗಮನಿಸಿದ್ದೇವೆ ಎಂದೂ ಮಸ್ಕ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಟ್ವಿಟರ್ ಉದ್ಯೋಗಿಗಳ ವಜಾ ಆರಂಭಿಸಿದ ಎಲಾನ್ ಮಸ್ಕ್

ಮಸ್ಕ್ ಅವರು ಟ್ವಿಟರ್​ನ ಮಾಲೀಕತ್ವ ವಹಿಸಿಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್​ವಾಲ್ ಸೇರಿದಂತೆ ಪ್ರಮುಖ ಹುದ್ದೆಯಲ್ಲಿದ್ದವರನ್ನು ವಜಾಗೊಳಿಸಲಾಗಿತ್ತು. ಇದರ ಬೆನ್ನಲ್ಲೇ, ಕಂಪನಿಯ ಒಟ್ಟು 7,500 ಸಿಬ್ಬಂದಿಯ ಪೈಕಿ ಅರ್ಧದಷ್ಟು ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ವರದಿಯಾಗಿದೆ.

ಭಾರತದಲ್ಲಿ ವಜಾ ಪ್ರಕ್ರಿಯೆ ಆರಂಭಿಸಿದ ಟ್ವಿಟರ್

ಭಾರತದಲ್ಲಿ ಟ್ವಿಟರ್ ಸಿಬ್ಬಂದಿ ವಜಾ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿದೆ ಎಂದು ವರದಿಯಾಗಿದೆ. ಆದರೆ, ಎಷ್ಟು ಮಂದಿಯನ್ನು ವಜಾಗೊಳಿಸಲಾಗಿದೆ ಎಂಬ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಈ ಮಧ್ಯೆ, ಶುಕ್ರವಾರ ಬೆಳಿಗ್ಗೆ ಕೆಲವು ಗಂಟೆಗಳ ಕಾಲ ಟ್ವಿಟರ್​ ಕಾರ್ಯಾಚರಣೆ ಸ್ತಬ್ಧವಾಗಿ ಬಳಕೆದಾರರು ತೊಂದರೆ ಅನುಭವಿಸಿದ್ದರು.

ಉದ್ಯೋಗ ಕಡಿತದ ಭೀತಿಯಲ್ಲಿರುವ ಟ್ವಿಟರ್​ ಸಿಬ್ಬಂದಿ ಹೆಚ್ಚುವರಿ ಸಮಯ ಕೆಲಸ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿರುವ ಬಗ್ಗೆ ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಟ್ವಿಟರ್​​ ಮ್ಯಾನೇಜರ್​ಗಳಿಗೆ ದಿನಕ್ಕೆ 12 ಗಂಟೆ ಹಾಗೂ ವಾರದ ಎಲ್ಲ ದಿನಗಳಲ್ಲಿಯೂ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎನ್ನಲಾಗಿತ್ತು. ಕೆಲವರು ಶುಕ್ರವಾರ ಮತ್ತು ಶನಿವಾರಗಳಂದು ಕೆಲಸದ ಅವಧಿ ಮುಗಿದ ಬಳಿಕ ಮನೆಗೆ ತೆರಳದೆ ಕಚೇರಿಯಲ್ಲಿಯೇ ಮಲಗಿದ್ದಾರೆ ಎಂದೂ ವರದಿಯಾಗಿತ್ತು. ಟ್ವಿಟರ್ ಸಿಬ್ಬಂದಿ ಕಚೇರಿಯಲ್ಲೇ ಮಲಗಿರುವುದು ಎನ್ನಲಾದ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?