AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರು ಹಂಗೇರಿ ತಲುಪಿ: ಭಾರತೀಯ ರಾಯಭಾರ ಕಚೇರಿ ಸಲಹೆ

ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡಿರುವ ಎರಡು ಪ್ರತ್ಯೇಕ ಹೇಳಿಕೆಗಳಲ್ಲಿ, ಹಂಗೇರಿ ಮತ್ತು ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಗಳು ಭಾರತೀಯರನ್ನು ಹಂಗೇರಿ ನಗರ ಕೇಂದ್ರವನ್ನು ಸಂಪರ್ಕಿಸಲು ಮತ್ತು "ತುರ್ತಾಗಿ" ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಿಕೊಂಡಿವೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರು ಹಂಗೇರಿ ತಲುಪಿ: ಭಾರತೀಯ ರಾಯಭಾರ ಕಚೇರಿ ಸಲಹೆ
ಆಪರೇಷನ್ ಗಂಗಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 06, 2022 | 4:15 PM

Share

ದೆಹಲಿ: ಭಾರತೀಯ ರಾಯಭಾರ ಕಚೇರಿಯು (Indian embassy) ಭಾನುವಾರದಂದು ಯುದ್ಧ ಪೀಡಿತ ಉಕ್ರೇನ್‌ನಲ್ಲಿ (Ukraine) ಸಿಲುಕಿರುವ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಹೊಸ ಸಲಹೆಗಳನ್ನು ನೀಡಿದೆ. ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡಿರುವ ಎರಡು ಪ್ರತ್ಯೇಕ ಹೇಳಿಕೆಗಳಲ್ಲಿ, ಹಂಗೇರಿ ಮತ್ತು ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಗಳು ಭಾರತೀಯರನ್ನು ಹಂಗೇರಿ ಸಿಟಿ ಸೆಂಟರ್‌ ಸಂಪರ್ಕಿಸಲು ಮತ್ತು “ತುರ್ತಾಗಿ” ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಿಕೊಂಡಿವೆ. ಹಂಗೇರಿಯಲ್ಲಿರುವ ರಾಯಭಾರ ಕಚೇರಿಯು ಭಾರತವು ತನ್ನ ಕೊನೆಯ ಹಂತವಾದ ‘ಆಪರೇಷನ್ ಗಂಗಾ’ ಅನ್ನು ಪ್ರಾರಂಭಿಸಿದೆ. ಇದು ನೆರೆಯ ರಾಷ್ಟ್ರಗಳ ಮೂಲಕ ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ರಾಯಭಾರ ಕಚೇರಿಯಿಂದ ವ್ಯವಸ್ಥೆ ಮಾಡಲಾದ ವಸತಿಗಳನ್ನು ಹೊರತುಪಡಿಸಿ ತಮ್ಮದೇ ಆದ ವಸತಿಗಳಲ್ಲಿ ವಾಸಿಸುವ ವಿದ್ಯಾರ್ಥಿಗಳನ್ನು ಬುಡಾಪೆಸ್ಟ್‌ನಲ್ಲಿರುವ ಹಂಗೇರಿ ಸಿಟಿ ಸೆಂಟರ್‌ಗೆ ಸ್ಥಳೀಯ ಸಮಯ ಬೆಳಿಗ್ಗೆ 10 ಮತ್ತು ಮಧ್ಯಾಹ್ನ 12 ರ ನಡುವೆ (2.30 ಮತ್ತು ಸಂಜೆ 4.30 IST) ತಲುಪಲು ಅದು ಕೇಳಿದೆ. ಯುಕ್ರೇನ್‌ನಲ್ಲಿರುವ ರಾಯಭಾರ ಕಚೇರಿಯು ಸಂಘರ್ಷದ ವಲಯಗಳನ್ನು ತೊರೆಯುವವರು ಪೂರ್ವ-ಯುರೋಪಿಯನ್ ರಾಷ್ಟ್ರದಿಂದ ಸ್ಥಳಾಂತರಕ್ಕಾಗಿ ತುರ್ತಾಗಿ ಗೂಗಲ್ ಫಾರ್ಮ್ ಅನ್ನು ತುಂಬಲು ಕೇಳಿದೆ.

ಈ ಫಾರ್ಮ್‌ನಲ್ಲಿ ಭಾರತೀಯರು ಪಾಸ್‌ಪೋರ್ಟ್ ನಲ್ಲಿ ನಮೂದಿಸಿರುವಂತೆ ತಮ್ಮ ಪೂರ್ಣ ಹೆಸರು, ಇಮೇಲ್ ಐಡಿ, ವಯಸ್ಸು, ಲಿಂಗ, ಪಾಸ್‌ಪೋರ್ಟ್ ಸಂಖ್ಯೆ, ಪ್ರಸ್ತುತ ಸ್ಥಳ ಮತ್ತು ಉಕ್ರೇನ್‌ನಲ್ಲಿರುವ ನಿಖರವಾದ ವಿಳಾಸ, ಉಕ್ರೇನ್‌ನಲ್ಲಿ ಮತ್ತು ಭಾರತದಲ್ಲಿನ ಸಂಪರ್ಕ ಸಂಖ್ಯೆಗಳು ಮತ್ತು ಹೆಚ್ಚುವರಿಯಾಗಿ ಅವರೊಂದಿಗೆ ಇರುವ ಭಾರತೀಯರ ಸಂಖ್ಯೆ ಒದಗಿಸಬೇಕಾಗಿದೆ.

ಒಂದು ವಾರದ ಹಿಂದೆ ಪೂರ್ವ ಯೂರೋಪಿಯನ್ ರಾಷ್ಟ್ರವನ್ನು ರಷ್ಯಾ ಆಕ್ರಮಿಸಿದ ಕೂಡಲೇ ಪ್ರಾರಂಭವಾದ ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನಗಳಲ್ಲಿ ಭಾರತವು ಉಕ್ರೇನ್‌ನಿಂದ ಸುಮಾರು 13,700 ನಾಗರಿಕರನ್ನು ಮರಳಿ ಕರೆತಂದಿದೆ.

ಮಿಷನ್‌ಗಾಗಿ ಸರ್ಕಾರವು ಭಾರತೀಯ ವಾಯುಪಡೆಯನ್ನು (ಐಎಎಫ್) ಸಹ ಸಂಪರ್ಕಿಸಿದೆ. ಮಾಸ್ಕೊದ ಸೇನಾ ದಾಳಿಯ ನಂತರ ನಾಗರಿಕ ವಿಮಾನಗಳಿಗಾಗಿ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಲಾಗಿದ್ದು ಇದು ಭಾನುವಾರ 11 ನೇ ದಿನಕ್ಕೆ ಕಾಲಿಟ್ಟಿದೆ. ಭಾರತವು ಮೊಲ್ಡೊವಾ, ಸ್ಲೋವಾಕಿಯಾ, ರೊಮೇನಿಯಾ, ಪೋಲೆಂಡ್ ಮತ್ತು ಹಂಗೇರಿಯ ಭೂ ಮಾರ್ಗಗಳ ಮೂಲಕ ಉಕ್ರೇನ್ ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸುತ್ತಿದೆ

ಭಾನುವಾರ ಪುಣೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ “ಬೆಳೆಯುತ್ತಿರುವ ಪ್ರಭಾವ” ದಿಂದಾಗಿ “ಸಾವಿರಾರು ವಿದ್ಯಾರ್ಥಿಗಳನ್ನು” ಉಕ್ರೇನ್‌ನ ಯುದ್ಧ ವಲಯದಿಂದ ಮನೆಗೆ ಕರೆತರಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪುಣೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ, ಮೆಟ್ರೊ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

Published On - 4:14 pm, Sun, 6 March 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ