AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emirates Plane: 13 ಗಂಟೆಗಳ ಕಾಲ ಹಾರಾಟ ನಡೆಸಿ ಮತ್ತೆ ಅದೇ ಏರ್​ಪೋರ್ಟ್​ಗೆ ಬಂದಿಳಿದ ಎಮಿರೇಟ್ಸ್ ವಿಮಾನ

ದುಬೈನಿಂದ ಪ್ರಯಾಣಿಕರನ್ನು ಹೊತ್ತು ನ್ಯೂಜಿಲೆಂಡ್​ಗೆ ಹೊರಟಿದ್ದ ಎಮಿರೇಟ್ಸ್​ ವಿಮಾನವು 13 ಗಂಟೆಗಳ ಕಾಲ ಹಾರಾಟ ನಡೆಸಿ ಮತ್ತದೇ ಏರ್​ಪೋರ್ಟ್​ಗೆ ಬಂದಿಳಿದ ಘಟನೆ ವರದಿಯಾಗಿದೆ.

Emirates Plane: 13 ಗಂಟೆಗಳ ಕಾಲ ಹಾರಾಟ ನಡೆಸಿ ಮತ್ತೆ ಅದೇ ಏರ್​ಪೋರ್ಟ್​ಗೆ ಬಂದಿಳಿದ ಎಮಿರೇಟ್ಸ್ ವಿಮಾನ
ಎಮಿರೇಟ್ಸ್​ ವಿಮಾನImage Credit source: NDTV
ನಯನಾ ರಾಜೀವ್
|

Updated on: Jan 31, 2023 | 10:05 AM

Share

ದುಬೈನಿಂದ ಪ್ರಯಾಣಿಕರನ್ನು ಹೊತ್ತು ನ್ಯೂಜಿಲೆಂಡ್​ಗೆ ಹೊರಟಿದ್ದ ಎಮಿರೇಟ್ಸ್​ ವಿಮಾನವು 13 ಗಂಟೆಗಳ ಕಾಲ ಹಾರಾಟ ನಡೆಸಿ ಮತ್ತದೇ ಏರ್​ಪೋರ್ಟ್​ಗೆ ಬಂದಿಳಿದ ಘಟನೆ ವರದಿಯಾಗಿದೆ. ಫಾಕ್ಸ್ ನ್ಯೂಸ್​ ಈ ವರದಿ ಮಾಡಿದ್ದು, ಎಮಿರೇಟ್ಸ್​ ವಿಮಾನ EK448 ಸ್ಥಳೀಯ ಕಾಲಮಾನ ಸುಮಾರು 10.30ರ ಸುಮಾರಿಗೆ ಟೇಕ್​ಆಫ್ ಆಗಿತ್ತು. ಪೈಲಟ್ 9 ಸಾವಿರ ಮೈಲಿ ಕ್ರಮಿಸಿದ ನಂತರ ಅರ್ಧದಾರಿಯಲ್ಲೇ ಯೂ ಟರ್ನ್ ಮಾಡಿ, ಮತ್ತೆ ದುಬೈ ಏರ್​ಪೋರ್ಟ್​ಗೆ ಬಂದಿಳಿಯಿತು.

ಮತ್ತಷ್ಟು ಓದಿ: Air Asia: ಲಕ್ನೋದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್​ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ವಿಮಾನ ತುರ್ತು ಭೂಸ್ಪರ್ಶ

ಆಕ್ಲೆಂಡ್ ವಿಮಾನ ನಿಲ್ದಾಣದಲ್ಲಿ ತೀವ್ರ ಪ್ರವಾಹ ಸಂಭವಿಸಿದ್ದು, ವಾರಾಂತ್ಯದಲ್ಲಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು. ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಯಾವುದೇ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಏರ್​ಪೋರ್ಟ್​ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಜನವರಿ 29ರ ಬೆಳಗ್ಗೆ 5 ಗಂಟೆಯವರೆಗೆ ಯಾವುದೇ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸಿರಲಿಲ್ಲ. ನಿಲ್ದಾಣವು ಚಲಾವೃತವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಆಕ್ಲೆಂಡ್ ಶುಕ್ರವಾರ ದಾಖಲೆಯ ಮಳೆಯೊಂದಿಗೆ ಅತ್ಯಂತ ಕೆಟ್ಟ ಪ್ರವಾಹವನ್ನು ಕಂಡಿದೆ. ನ್ಯೂಜಿಲೆಂಡ್‌ನ ಅತಿದೊಡ್ಡ ನಗರದಲ್ಲಿ ತುರ್ತು ಪರಿಸ್ಥಿತಿ ಮುಂದುವರಿದಿದೆ ಏಕೆಂದರೆ ಈ ವಾರ ಹೆಚ್ಚು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಭೀಕರ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವಾಗ ಸೊಂಟದವರೆಗೂ ಬರುವ ನೀರಿನಲ್ಲಿ ನಿವಾಸಿಗಳು ಸಿಲುಕಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ