AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ

ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರಿಗೆ ಏನೂ ಆಗಿಲ್ಲ. ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಇರಾನ್ ಸುಪ್ರೀಂ ನಾಯಕನ ಪ್ರಮುಖ ಸಹಾಯಕ ಮಾಹಿತಿ ನೀಡಿದ್ದಾರೆ. ವಿನಾಕಾರಣ ಶತ್ರುಗಳು ವದಂತಿಗಳನ್ನು ಹರಡುತ್ತಿದ್ದಾರೆ, ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ಅವರೇ ಇರಾನ್​ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ತಿಂಗಳುಗಳ ಕಾಲದ ಸಸ್ಪೆನ್ಸ್ ನಂತರ ಈ ಸ್ಪಷ್ಟನೆ ಹೊರಬಿದ್ದಿದೆ.

ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ
Mojtaba KhameneiImage Credit source: x
ಸುಷ್ಮಾ ಚಕ್ರೆ
|

Updated on: May 01, 2026 | 6:01 PM

Share

ಟೆಹ್ರಾನ್, ಮೇ 1: ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಅಮೆರಿಕ ಆಗಾಗ ಆರೋಪ ಮಾಡುತ್ತಲೇ ಇತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ನೀಡಿದೆ. ಇರಾನ್​ನ (Iran) ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆಪ್ತ ಅಯತೊಲ್ಲಾ ಮೊಹ್ಸೆನ್ ಕೋಮಿ ಇಂದು ಅಮೆರಿಕದ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಸುಪ್ರೀಂ ನಾಯಕ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶತ್ರು ದೇಶಗಳು ವದಂತಿಗಳನ್ನು ಹರಡಲು ಇಂತಹ ತಂತ್ರಗಳನ್ನು ಬಳಸುತ್ತದೆ ಎಂದು ಕೋಮಿ ಹೇಳಿದ್ದಾರೆ.

ಮೊಜ್ತಾಬಾ ಖಮೇನಿ ಅಮೆರಿಕದಿಂದ ಬಾಂಬ್ ದಾಳಿಗೊಳಗಾದ ಕಟ್ಟಡದಲ್ಲಿದ್ದರು. ಆದರೆ ಅವರನ್ನು ರಕ್ಷಿಸಲಾಯಿತು ಎಂದು ಕೋಮಿ ದೃಢಪಡಿಸಿದ್ದಾರೆ. “ಅವರು ಬಾಂಬ್ ದಾಳಿಗೊಳಗಾದ ಕಟ್ಟಡದಲ್ಲೇ ಇದ್ದರು ಎಂಬುದು ನಿಜ. ಅಲ್ಲಿದ್ದ ಇತರರು ಹುತಾತ್ಮರಾದರು. ಸ್ಫೋಟಕ್ಕೆ ಕೆಲವೇ ನಿಮಿಷಗಳ ಮೊದಲು ದೇವರ ಇಚ್ಛೆಯಿಂದ ಅವರು ಅಂಗಳಕ್ಕೆ ಹೋಗಿದ್ದರು. ದೇವರು ಅವರನ್ನು ರಕ್ಷಿಸಬೇಕೆಂದು ಬಯಸಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

“ಸದ್ಯಕ್ಕೆ ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಅವರೇ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ, ವಿವಿಧ ಪರಿಸ್ಥಿತಿಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಅವರು ನಿರ್ದಿಷ್ಟ ಸೂಚನೆಗಳನ್ನು ಸಹ ನೀಡಿದ್ದಾರೆ. ಅವರು ಪರಿಸ್ಥಿತಿಯ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದಾರೆ” ಎಂದು ಕೋಮಿ ಹೇಳಿದ್ದಾರೆ ಎಂದು ಫಾರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ