AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಕುಡ್ದಿದ್ದೀರಾ ಹಾಗಾದ್ರೆ ಟೆನ್ಷನ್ ಬೇಡ, ಸರ್ಕಾರವೇ ಟ್ಯಾಕ್ಸಿಯಲ್ಲಿ ನಿಮ್ಮನ್ನು ಮನೆಗೆ ಬಿಡುತ್ತೆ

ವಿಪರೀತ ಕುಡಿದಿದ್ದರೆ ನಿಮಗೆ ವಾಹನ ಚಲಾಯಿಸಲು ಸಾಧ್ಯವಾಗದಿದ್ದರೆ ಚಿಂತೆ ಬೇಡ ಸರ್ಕಾರವೇ ನಿಮ್ಮನ್ನು ಟ್ಯಾಕ್ಸಿ ಮೂಲಕ ಮನೆಗೆ ಕಳುಹಿಸಲಿದೆ. ಹೌದು ಈ ಯೋಜನೆ ಜಾರಿಗೆ ತಂದಿರುವುದು ಭಾರತ ಸರ್ಕಾರವಲ್ಲ ಬದಲಾಗಿ ಇಟಲಿ ಸರ್ಕಾರ.

ಅತಿಯಾಗಿ ಕುಡ್ದಿದ್ದೀರಾ ಹಾಗಾದ್ರೆ ಟೆನ್ಷನ್ ಬೇಡ, ಸರ್ಕಾರವೇ ಟ್ಯಾಕ್ಸಿಯಲ್ಲಿ ನಿಮ್ಮನ್ನು ಮನೆಗೆ ಬಿಡುತ್ತೆ
ಟ್ಯಾಕ್ಸಿ
Follow us
ನಯನಾ ರಾಜೀವ್
|

Updated on: Aug 08, 2023 | 11:31 AM

ವಿಪರೀತ ಕುಡಿದಿದ್ದರೆ ನಿಮಗೆ ವಾಹನ ಚಲಾಯಿಸಲು ಸಾಧ್ಯವಾಗದಿದ್ದರೆ ಚಿಂತೆ ಬೇಡ ಸರ್ಕಾರವೇ ನಿಮ್ಮನ್ನು ಟ್ಯಾಕ್ಸಿ ಮೂಲಕ ಮನೆಗೆ ಕಳುಹಿಸಲಿದೆ. ಹೌದು ಈ ಯೋಜನೆ ಜಾರಿಗೆ ತಂದಿರುವುದು ಭಾರತ ಸರ್ಕಾರವಲ್ಲ ಬದಲಾಗಿ ಇಟಲಿ ಸರ್ಕಾರ. ಜನರು ಹೆಚ್ಚು ಕುಡೀಲಿ ಎನ್ನುವ ಉದ್ದೇಶವಲ್ಲ ಆದರೆ ಕುಡಿದವರು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಬಾರದು ಎನ್ನುವ ಉದ್ದೇಶದಿಂದ ಪೈಲಟ್ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

ನೀವೆಲ್ಲೋ ಪಾರ್ಟಿಗೆ ಹೋಗಿರುತ್ತೀರಿ ವಾಪಸ್ ಮನೆಗೆ ಕಾರು ಚಲಾಯಿಸಿಕೊಂಡು ಬರುವುದು ಕಷ್ಟ ಎನಿಸಿದಲ್ಲಿ ಈ ಟ್ಯಾಕ್ಸಿ ಸಹಾಯ ಪಡೆಯಬಹುದು. ದೇಶದ 6 ನೈಟ್‌ಕ್ಲಬ್‌ಗಳಲ್ಲಿ ಸೆಪ್ಟೆಂಬರ್ ಮಧ್ಯದ ಒಳಗೆ ಪ್ರಾಯೋಗಿಕ ಯೋಜನೆ ಜಾರಿಯಾಗಲಿದೆ.

ಪಾರ್ಟಿ ಸ್ಥಳದಿಂದ ಹೊರಡುವಾಗ ಹೆಚ್ಚು ಕುಡಿದು ವಾಹನ ಚಲಾಯಿಸುವುದನ್ನು ಕಂಡರೆ, ಅವರನ್ನು ಮದ್ಯಪಾನ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮಿತಿ ಮೀರಿ ಮದ್ಯಪಾನ ಮಾಡಿದವರಿಗೆ ಟ್ಯಾಕ್ಸಿ ವ್ಯವಸ್ಥೆ ಮಾಡಲಾಗುತ್ತದೆ. ಈ ಯೋಜನೆಗೆ ಸಾರಿಗೆ ಸಚಿವಾಲಯ ಹಣ ನೀಡುತ್ತಿದೆ.

ರಸ್ತೆ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಪಘಾತವನ್ನು ತಡೆಯಲು ದಂಡ ಹಾಗೂ ಕಾನೂನು ಸಾಕಾಗುವುದಿಲ್ಲ. ಯುರೋಪಿಯನ್ ಟ್ರಾನ್ಸ್‌ಪೋರ್ಟ್ ಸೇಫ್ಟಿ ಕೌನ್ಸಿಲ್ (ಇಟಿಎಸ್‌ಸಿ) 2020 ರ ವರದಿಯ ಪ್ರಕಾರ, ಇಟಲಿಯಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಗಂಭೀರ ಸಮಸ್ಯೆಯಾಗಿದೆ.

ಅದೇ ಸಮಯದಲ್ಲಿ, ಇಟಲಿಯಲ್ಲಿ ಮದ್ಯಪಾನ ಮತ್ತು ಚಾಲನೆಯ ಸ್ವೀಕಾರಾರ್ಹತೆಯ ಮಟ್ಟವು ಇತರ EU ದೇಶಗಳಿಗಿಂತ ಹೆಚ್ಚಾಗಿದೆ ಎಂದು ಸಮೀಕ್ಷೆಯು ತೋರಿಸಿದೆ.

ಮತ್ತಷ್ಟು ಓದಿ: Lifestyle Hack: ಮದ್ಯಪಾನ ಮಾಡುವಾಗ ಅಪ್ಪಿತಪ್ಪಿಯೂ ಈ ಆಹಾರ ಪದಾರ್ಥಗಳನ್ನು ಸೇವಿಸಬೇಡಿ, ಯಾಕೆ ಗೊತ್ತಾ?

ಈ ಯೋಜನೆ ಅನುಷ್ಠಾನವಾದ ಮೊದಲ ದಿನ ರಾತ್ರಿ 21 ಮಂದಿಯನ್ನು ಟ್ಯಾಕ್ಸಿಯಲ್ಲಿ ಕರೆದೊಯ್ಯಲಾಯಿತು. ಸಮಸ್ಯೆಗಳನ್ನು ಸ್ವಲ್ಪ ಸಮಯಗಳ ಕಾಲ ಮರೆಯಬಹುದು ಎಂದು ಕೆಲವರು ಖುಷಿಯನ್ನು ಎಂಜಾಯ್ ಮಾಡಲು ಬಯಸುತ್ತಾರೆ, ಆದರೆ ಅವರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚನೆಯೇ ಇರುವುದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್