AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಶೃಂಗಸಭೆಯಲ್ಲಿ ಪುಟಿನ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ಹೊರನಡೆದ ಯುರೋಪಿಯನ್ ಪ್ರತಿನಿಧಿಗಳು

"ರಷ್ಯಾ ಮತ್ತು ಚೀನಾ ಪ್ರಪಂಚದ ಹೆಚ್ಚಿನ ದೇಶಗಳಂತೆ, ನಾಗರಿಕತೆಯ ವೈವಿಧ್ಯತೆ ಮತ್ತು ಪ್ರತಿ ರಾಜ್ಯವು ತನ್ನದೇ ಆದ ಅಭಿವೃದ್ಧಿ ಮಾದರಿಯ ಹಕ್ಕನ್ನು ಗೌರವಿಸುತ್ತಾ, ಸಾರ್ವತ್ರಿಕ ಸುಸ್ಥಿರ ಮತ್ತು ದೀರ್ಘಕಾಲೀನ ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಸಾಧಿಸಲು ಸಮಾನ, ಪರಸ್ಪರ ಪ್ರಯೋಜನಕಾರಿ ಸಹಕಾರದ ಬಯಕೆಯನ್ನು ಹಂಚಿಕೊಳ್ಳುತ್ತವೆ ಎಂದು ರಷ್ಯಾದ ಅಧ್ಯಕ್ಷರು ಹೇಳಿದ್ದಾರೆ.

ಚೀನಾ ಶೃಂಗಸಭೆಯಲ್ಲಿ ಪುಟಿನ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ಹೊರನಡೆದ ಯುರೋಪಿಯನ್ ಪ್ರತಿನಿಧಿಗಳು
ವ್ಲಾಡಿಮಿರ್ ಪುಟಿನ್
ರಶ್ಮಿ ಕಲ್ಲಕಟ್ಟ
|

Updated on: Oct 19, 2023 | 8:00 PM

Share

ಬೀಜಿಂಗ್ ಅಕ್ಟೋಬರ್ 19: ಬಹುಕೋಟಿ ಡಾಲರ್ ಮೂಲಸೌಕರ್ಯ ಯೋಜನೆಯಾದ ಬೆಲ್ಟ್ ಮತ್ತು ರೋಡ್ (BRI) ಯೋಜನೆಯನ್ನು ಆಚರಿಸಲು ಚೀನಾ (China) ಶೃಂಗಸಭೆಯನ್ನು ಆಯೋಜಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಬುಧವಾರ ಬೀಜಿಂಗ್‌ನ (Beijing) ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ಹಲವಾರು ವಿಶ್ವ ನಾಯಕರು ಮತ್ತು 1,000 ಕ್ಕೂ ಹೆಚ್ಚು ಪ್ರತಿನಿಧಿಗಳ ಸಮ್ಮುಖದಲ್ಲಿ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಅಷ್ಟೇ ಅಲ್ಲ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ವೇದಿಕೆ ಹಂಚಿಕೊಂಡರು. ಈ ವರ್ಷ ಹೀಗೆ ವೇದಿಕೆ ಹಂಚಿಕೊಂಡಿದ್ದು ಇದೇ ಮೊದಲು. ಆದಾಗ್ಯೂ ಪುಟಿನ್ ಅವರ ಭಾಷಣದ ಮೊದಲು, ಯುರೋಪಿಯನ್ ಪ್ರತಿನಿಧಿಗಳು ಸೇರಿದಂತೆ ಹಲವಾರು ಜನರು ಶೃಂಗಸಭೆಯಿಂದ ಹೊರನಡೆದಿದ್ದಾರೆ.

ಯುರೋಪಿಯನ್ ಜೀನ್-ಪಿಯರೆ ರಾಫರಿನ್, ಫ್ರಾನ್ಸ್‌ನ ಮಾಜಿ ಪ್ರಧಾನಿ ಮೊದಲಾದವರು ಸಮಾರಂಭದಿಂದ ಹೊರ ನಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಪುಟಿನ್ ಅವರು ಷಿ ನಂತರ ತಮ್ಮ ಹೇಳಿಕೆಗಳನ್ನು ನೀಡಲು ಸಿದ್ಧರಾದಾಗ ರಾಫರಿನ್ ಮತ್ತು ಇತರ ಪ್ರತಿನಿಧಿಗಳು ಗ್ರೇಟ್ ಹಾಲ್‌ನಿಂದ ಹೊರಡುತ್ತಿರುವುದನ್ನು ಕಾರ್ಯಕ್ರಮದ ವಿಡಿಯೊದಲ್ಲಿ ಕಾಣುತ್ತದೆ.

ಭಾಷಣದಲ್ಲಿ ಪುಟಿನ್ ಚೀನಾದ ನಾಯಕರ ಆಹ್ವಾನಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಪ್ರಾಚೀನ ಸಿಲ್ಕ್ ರೋಡ್ ಚೀನಾದ ಆಧುನಿಕ ದಿನದ ಪುನರುಜ್ಜೀವನದಲ್ಲಿ ರಷ್ಯಾ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

“ರಷ್ಯಾ ಮತ್ತು ಚೀನಾ ಪ್ರಪಂಚದ ಹೆಚ್ಚಿನ ದೇಶಗಳಂತೆ, ನಾಗರಿಕತೆಯ ವೈವಿಧ್ಯತೆ ಮತ್ತು ಪ್ರತಿ ರಾಜ್ಯವು ತನ್ನದೇ ಆದ ಅಭಿವೃದ್ಧಿ ಮಾದರಿಯ ಹಕ್ಕನ್ನು ಗೌರವಿಸುತ್ತಾ, ಸಾರ್ವತ್ರಿಕ ಸುಸ್ಥಿರ ಮತ್ತು ದೀರ್ಘಕಾಲೀನ ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಸಾಧಿಸಲು ಸಮಾನ, ಪರಸ್ಪರ ಪ್ರಯೋಜನಕಾರಿ ಸಹಕಾರದ ಬಯಕೆಯನ್ನು ಹಂಚಿಕೊಳ್ಳುತ್ತವೆ ಎಂದು ರಷ್ಯಾದ ಅಧ್ಯಕ್ಷರು ಹೇಳಿದ್ದಾರೆ.

ಉಕ್ರೇನ್‌ನಿಂದ ರಷ್ಯಾಕ್ಕೆ ಮಕ್ಕಳನ್ನು ಅಕ್ರಮವಾಗಿ ಗಡೀಪಾರು ಮಾಡಿದ್ದಕ್ಕಾಗಿ ಮಾರ್ಚ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನಂತರ ಅವರು ವಿದೇಶದಲ್ಲಿ ತಿಳಿದಿರುವ ಎರಡನೇ ಪ್ರವಾಸದಲ್ಲಿ ಅವರು ಮಂಗಳವಾರ ಬೀಜಿಂಗ್‌ಗೆ ಆಗಮಿಸಿದರು.

ಪುಟಿನ್ ಅವರನ್ನು ಬಂಧಿಸಲಾಗದ ಕೆಲವೇ ಸ್ಥಳಗಳಲ್ಲಿ ಚೀನಾ ಕೂಡ ಒಂದು, ಏಕೆಂದರೆ ಅದು ಐಸಿಸಿ ರಾಜ್ಯವಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ