AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ಯಾರಿಗೂ ಬೇಕಾಗಿಲ್ಲ ಎಂಬುದನ್ನು ವ್ಲಾದಿಮಿರ್​ ಪುಟಿನ್​ಗೆ ಅರ್ಥ ಮಾಡಿಸಿ; ಪ್ರಧಾನಿ ಮೋದಿಗೆ ಉಕ್ರೇನ್​ ವಿದೇಶಾಂಗ ಸಚಿವರ ಮನವಿ

ಈ ಯುದ್ಧದಲ್ಲಿ ಆಸಕ್ತಿ ಹೊಂದಿರುವ ಇಡೀ ಭೂಮಿಯಲ್ಲಿರುವ ಏಕೈಕ ವ್ಯಕ್ತಿಯೆಂದರೆ ಅದು ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಮಾತ್ರ. ಉಳಿದಂತೆ ಯಾರಿಗೂ ಯುದ್ಧ ಬೇಕಾಗಿಲ್ಲ. ರಷ್ಯಾದ ಜನರಿಗೂ ಈ ಯುದ್ಧ ನಡೆಸುವುದು ಇಷ್ಟವಿಲ್ಲ ಎಂದು ಕುಲೆಬಾ ಹೇಳಿದ್ದಾರೆ.

ಯುದ್ಧ ಯಾರಿಗೂ ಬೇಕಾಗಿಲ್ಲ ಎಂಬುದನ್ನು ವ್ಲಾದಿಮಿರ್​ ಪುಟಿನ್​ಗೆ ಅರ್ಥ ಮಾಡಿಸಿ; ಪ್ರಧಾನಿ ಮೋದಿಗೆ ಉಕ್ರೇನ್​ ವಿದೇಶಾಂಗ ಸಚಿವರ ಮನವಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:Mar 06, 2022 | 11:16 AM

Share

ರಷ್ಯಾ-ಉಕ್ರೇನ್​ ಯುದ್ಧ(Russia-Ukraine War) ಶುರುವಾಗಿ ಎರಡು ವಾರ ಸಮೀಪಿಸುತ್ತಿದೆ. ಯುದ್ಧ ನಿಲ್ಲಲಿ ಎಂಬುದು ಅನೇಕರ ಪ್ರಾರ್ಥನೆ. ವಿಶ್ವದ ಹಲವು ರಾಷ್ಟ್ರಗಳ ಒತ್ತಾಯ. ಏನೇ ಆದರೂ ಯುದ್ಧ ನಿಲ್ಲಿಸುವುದು ರಷ್ಯಾ ಅಧ್ಯಕ್ಷ ಪುಟಿನ್​ ಕೈಯಲ್ಲೇ ಇದೆ ಎಂಬುದು ಪ್ರತಿಯೊಬ್ಬರಿಗೂ ಅರ್ಥವಾದ ಸತ್ಯ. ಈ ಮಧ್ಯೆ, ಹೇಗಾದರೂ ಸರಿ ರಷ್ಯಾ-ಉಕ್ರೇನ್​ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಮನವಿ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಆ ಸಾಲಿಗೆ ಈಗ ಉಕ್ರೇನ್​ ವಿದೇಶಾಂಗ ವ್ಯವಹಾರಗಳ ಸಚಿವ ಡಿಮಿಟ್ರೋ ಕುಲೆಬಾ ಸೇರ್ಪಡೆಯಾಗಿದ್ದಾರೆ. ‘ಪುಟಿನ್​​ ಅವರಿಗೆ ಹೇಗಾದರೂ ಅರ್ಥ ಮಾಡಿಸಿ, ಈ ಯುದ್ಧ ಎಲ್ಲರ ಹಿತಾಸಕ್ತಿಗೆ ವಿರುದ್ದವಾಗಿ ನಡೆಯುತ್ತಿದೆ ಎಂಬುದನ್ನು ಅವರಿಗೆ ಮನದಟ್ಟು ಮಾಡಿಸಿ’ ಎಂದು ಹೇಳಿದ್ದಾರೆ. ದೂರದರ್ಶನದ ಮೂಲಕ ಭಾಷಣ ಮಾಡಿದ ಅವರು, ಪ್ರಧಾನಿ ಮೋದಿಗೆ ಮಾತ್ರವಲ್ಲದೆ ಇಡೀ ಭಾರತೀಯರಿಗೆ ಈ ನನ್ನ ಸಂದೇಶ ಎಂದೂ ಹೇಳಿದ್ದಾರೆ. ಹಾಗೇ, ಉಳಿದ ಕೆಲವು ದೇಶಗಳನ್ನೂ ಉಲ್ಲೇಖಿಸಿದ್ದಾರೆ.

ಈ ಯುದ್ಧದಲ್ಲಿ ಆಸಕ್ತಿ ಹೊಂದಿರುವ ಇಡೀ ಭೂಮಿಯಲ್ಲಿರುವ ಏಕೈಕ ವ್ಯಕ್ತಿಯೆಂದರೆ ಅದು ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಮಾತ್ರ. ಉಳಿದಂತೆ ಯಾರಿಗೂ ಯುದ್ಧ ಬೇಕಾಗಿಲ್ಲ. ರಷ್ಯಾದ ಜನರಿಗೂ ಈ ಯುದ್ಧ ನಡೆಸುವುದು ಇಷ್ಟವಿಲ್ಲ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ದಯವಿಟ್ಟು ಪುಟಿನ್​ ಜತೆ ಮಾತನಾಡಿ ಯುದ್ಧ ನಿಲ್ಲುವಂತೆ ಮಾಡಬೇಕು ಎಂದು ನಾವು ಮನವಿ ಮಾಡುತ್ತೇವೆ ಎಂದು ಹೇಳಿದ ಕುಲೆಬಾ, ಉಕ್ರೇನಿಯನ್​ ಕೃಷಿ ಉತ್ಪನ್ನಗಳಿಗೆ ಭಾರತವೂ ಕೂಡ ಬಹುದೊಡ್ಡಮಟ್ಟದ ಗ್ರಾಹಕ. ಆದರೆ ಹೀಗೆ ಯುದ್ಧ ನಡೆಯುತ್ತಿದ್ದರೆ ನಮಗೆ ಹೊಸ ಬೆಳೆ ತೆಗೆಯುವುದು ತುಂಬ ಕಷ್ಟ. ಭಾರತದೊಂದಿಗೆ ಇನ್ನೂ ಹಲವು ದೇಶಗಳು ನಮ್ಮ ಗ್ರಾಹಕರಾಗಿವೆ. ಹೀಗಾಗಿ ಭಾರತ ಮತ್ತು ಜಾಗತಿಕ ಆಹಾರ ಸುರಕ್ಷತೆ ದೃಷ್ಟಿಯಿಂದಲೂ ಈ ಯುದ್ಧ ಕೂಡಲೇ ನಿಲ್ಲಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ರಷ್ಯಾ ಅಧ್ಯಕ್ಷನೊಂದಿಗೆ ಉತ್ತಮ ಸಂಬಂಧಹೊಂದಿರುವ ಭಾರತ, ಚೀನಾ, ನೈಜೀರಿಯಾ ಸೇರಿ ಇನ್ನಿತರ ರಾಷ್ಟ್ರಗಳಿಗೆ ಯುದ್ಧ ನಿಲ್ಲಿಸಲು ಸಹಾಯ ಮಾಡುವಂತೆ ಕೇಳಿಕೊಂಡಿರುವ ಉಕ್ರೇನ್​ ಸಚಿವ ಕುಲೆಬಾ, ರಷ್ಯಾ ಮೇಲಿನ ನಿರ್ಬಂಧಗಳನ್ನು ಹೆಚ್ಚಿಸಿ. ಆ ದೇಶ ಯುದ್ಧದ ನಿಯಮ ಉಲ್ಲಂಘಿಸುತ್ತಿದೆ. ಈಗ ಕದನ ವಿರಾಮವನ್ನೂ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ. ಉಕ್ರೇನ್​ನಲ್ಲಿರುವ ಇತರ ದೇಶಗಳ ನಾಗರಿಕರು, ನಮ್ಮ ನಾಗರಿಕರನ್ನು ಇಲ್ಲಿಂದ ಸ್ಥಳಾಂತರ ಮಾಡಲು ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯುದ್ಧದಿಂದ ಬಸವಳಿದ ವನ್ಯಜೀವಿಗಳು; ಉಕ್ರೇನ್​ ಬಿಟ್ಟು ಎರಡು ದಿನ ಪ್ರಯಾಣಿಸಿ ಪೋಲ್ಯಾಂಡ್ ಸೇರಿಕೊಂಡು ಸಿಂಹ, ಹುಲಿಗಳು​

Published On - 11:16 am, Sun, 6 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್