AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ
ಅಡೆನ್​ ಏರ್​ಪೋರ್ಟ್​ ಬಳಿ ಸ್ಫೋಟ
TV9 Web
| Edited By: |

Updated on: Oct 31, 2021 | 4:42 PM

Share

ಯೆಮೆನ್​​ನ ದಕ್ಷಿಣ ಬಂದರು ನಗರ ಅಡೆನ್​​ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸ್ಫೋಟವುಂಟಾಗಿ ಆರು ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಇದು ಬಾಂಬ್​ /ಇನ್ಯಾವುದೇ ಸ್ಫೋಟಕಗಳಿಂದ ದಾಳಿ ನಡೆಸಿದ್ದಾ? ಅಥವಾ ಸ್ಥಳೀಯವಾಗಿ ಯಾವುದಾದೂ ವಸ್ತು ಪ್ರಬಲ ಸ್ಫೋಟವಾಯಿತಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.  

ಏರ್​ಪೋರ್ಟ್​ ಗೇಟ್​ ಬಳಿ ಒಂದು ಸಣ್ಣ ಟ್ರಕ್​​ ಪೆಟ್ರೋಲಿಯಂ ಉತ್ಪನ್ನಗಳನ್ನು ಒಯ್ಯುತ್ತಿತ್ತು. ಇದೇ ಟ್ರಕ್​​ನಲ್ಲಿ ಸ್ಫೋಟವುಂಟಾಗಿದೆ. ಸ್ಥಳದಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಅದೆಷ್ಟರ ಮಟ್ಟಿಗೆ ಪ್ರಬಲವಾಗಿತ್ತು ಎಂದರೆ ಆ ಶಬ್ದ ನಗರಾದ್ಯಂತ ಕೇಳಿದೆ. ಹತ್ತಿರದ ಮನೆಗಳ ಬಾಗಿಲು, ಕಿಟಕಿಗಳೆಲ್ಲ ಒಡೆದುಹೋಗಿವೆ.  ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಯೆಮೆನ್​ ಸರ್ಕಾರದ ತಾತ್ಕಾಲಿಕ ನೆಲೆ ಇದೇ ಅಡೆನ್​ ನಗರ. ಆದರೆ ಕಳೆದ 7 ವರ್ಷಗಳಿಂದಲೂ ಇಲ್ಲಿ ಹೌತಿ ಪ್ರತ್ಯೇಕತಾ ಗುಂಪಿನ ದಾಳಿ ನಡೆಯುತ್ತಲೇ ಇದೆ. ಅದರೊಂದಿಗೆ ಈಗ ಒಂದು ವರ್ಷದಿಂದ ಅಡೆನ್​​ನಲ್ಲಿಯೇ ಸರ್ಕಾರ ಮತ್ತು ದಕ್ಷಿಣ ಪ್ರತ್ಯೇಕತಾ ಗುಂಪಿನ ನಡುವೆ ಸಂಘರ್ಷ ಏರ್ಪಟ್ಟಿದೆ.

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಅದೃಷ್ಟವಶಾತ್ ಗವರ್ನರ್​ ಅಪಾಯದಿಂದ ಪಾರಾಗಿದ್ದರು. 2020ರ ಡಿಸೆಂಬರ್​​ನಲ್ಲಿ ಅಡೆನ್​ ಏರ್​ಪೋರ್ಟ್​​ನಲ್ಲಿ ನಡೆದ ಬಾಂಬ್​ ದಾಳಿಯಿಂದ ಸುಮಾರು 22 ಮಂದಿ ಮೃತಪಟ್ಟಿದ್ದರು. ಆ ದಾಳಿಯ ಹೊಣೆಯನ್ನು ಹೌತಿ ಗುಂಪು ಹೊತ್ತುಕೊಂಡಿತ್ತು. ಹಾಗೇ ಕ್ಷಿಪಣಿ ಪ್ರಯೋಗಿಸಿ ದಾಳಿ ಮಾಡಿದ್ದಾಗಿಯೂ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೇರಿ ದೊಡ್ಡ ದೊಡ್ಡ ತಪ್ಪು ಮಾಡಿದೆ ಎನ್ನುತ್ತ ಮರಳಿ ಟಿಎಂಸಿಗೆ ಬಂದ ರಾಜೀವ್ ಬ್ಯಾನರ್ಜಿ

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ