AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ
ಅಡೆನ್​ ಏರ್​ಪೋರ್ಟ್​ ಬಳಿ ಸ್ಫೋಟ
TV9 Web
| Edited By: |

Updated on: Oct 31, 2021 | 4:42 PM

Share

ಯೆಮೆನ್​​ನ ದಕ್ಷಿಣ ಬಂದರು ನಗರ ಅಡೆನ್​​ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸ್ಫೋಟವುಂಟಾಗಿ ಆರು ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಇದು ಬಾಂಬ್​ /ಇನ್ಯಾವುದೇ ಸ್ಫೋಟಕಗಳಿಂದ ದಾಳಿ ನಡೆಸಿದ್ದಾ? ಅಥವಾ ಸ್ಥಳೀಯವಾಗಿ ಯಾವುದಾದೂ ವಸ್ತು ಪ್ರಬಲ ಸ್ಫೋಟವಾಯಿತಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.  

ಏರ್​ಪೋರ್ಟ್​ ಗೇಟ್​ ಬಳಿ ಒಂದು ಸಣ್ಣ ಟ್ರಕ್​​ ಪೆಟ್ರೋಲಿಯಂ ಉತ್ಪನ್ನಗಳನ್ನು ಒಯ್ಯುತ್ತಿತ್ತು. ಇದೇ ಟ್ರಕ್​​ನಲ್ಲಿ ಸ್ಫೋಟವುಂಟಾಗಿದೆ. ಸ್ಥಳದಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಅದೆಷ್ಟರ ಮಟ್ಟಿಗೆ ಪ್ರಬಲವಾಗಿತ್ತು ಎಂದರೆ ಆ ಶಬ್ದ ನಗರಾದ್ಯಂತ ಕೇಳಿದೆ. ಹತ್ತಿರದ ಮನೆಗಳ ಬಾಗಿಲು, ಕಿಟಕಿಗಳೆಲ್ಲ ಒಡೆದುಹೋಗಿವೆ.  ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಯೆಮೆನ್​ ಸರ್ಕಾರದ ತಾತ್ಕಾಲಿಕ ನೆಲೆ ಇದೇ ಅಡೆನ್​ ನಗರ. ಆದರೆ ಕಳೆದ 7 ವರ್ಷಗಳಿಂದಲೂ ಇಲ್ಲಿ ಹೌತಿ ಪ್ರತ್ಯೇಕತಾ ಗುಂಪಿನ ದಾಳಿ ನಡೆಯುತ್ತಲೇ ಇದೆ. ಅದರೊಂದಿಗೆ ಈಗ ಒಂದು ವರ್ಷದಿಂದ ಅಡೆನ್​​ನಲ್ಲಿಯೇ ಸರ್ಕಾರ ಮತ್ತು ದಕ್ಷಿಣ ಪ್ರತ್ಯೇಕತಾ ಗುಂಪಿನ ನಡುವೆ ಸಂಘರ್ಷ ಏರ್ಪಟ್ಟಿದೆ.

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಅದೃಷ್ಟವಶಾತ್ ಗವರ್ನರ್​ ಅಪಾಯದಿಂದ ಪಾರಾಗಿದ್ದರು. 2020ರ ಡಿಸೆಂಬರ್​​ನಲ್ಲಿ ಅಡೆನ್​ ಏರ್​ಪೋರ್ಟ್​​ನಲ್ಲಿ ನಡೆದ ಬಾಂಬ್​ ದಾಳಿಯಿಂದ ಸುಮಾರು 22 ಮಂದಿ ಮೃತಪಟ್ಟಿದ್ದರು. ಆ ದಾಳಿಯ ಹೊಣೆಯನ್ನು ಹೌತಿ ಗುಂಪು ಹೊತ್ತುಕೊಂಡಿತ್ತು. ಹಾಗೇ ಕ್ಷಿಪಣಿ ಪ್ರಯೋಗಿಸಿ ದಾಳಿ ಮಾಡಿದ್ದಾಗಿಯೂ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೇರಿ ದೊಡ್ಡ ದೊಡ್ಡ ತಪ್ಪು ಮಾಡಿದೆ ಎನ್ನುತ್ತ ಮರಳಿ ಟಿಎಂಸಿಗೆ ಬಂದ ರಾಜೀವ್ ಬ್ಯಾನರ್ಜಿ

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ