AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು.

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ
ಅಡೆನ್​ ಏರ್​ಪೋರ್ಟ್​ ಬಳಿ ಸ್ಫೋಟ
TV9 Web
| Edited By: |

Updated on: Oct 31, 2021 | 4:42 PM

Share

ಯೆಮೆನ್​​ನ ದಕ್ಷಿಣ ಬಂದರು ನಗರ ಅಡೆನ್​​ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸ್ಫೋಟವುಂಟಾಗಿ ಆರು ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಇದು ಬಾಂಬ್​ /ಇನ್ಯಾವುದೇ ಸ್ಫೋಟಕಗಳಿಂದ ದಾಳಿ ನಡೆಸಿದ್ದಾ? ಅಥವಾ ಸ್ಥಳೀಯವಾಗಿ ಯಾವುದಾದೂ ವಸ್ತು ಪ್ರಬಲ ಸ್ಫೋಟವಾಯಿತಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.  

ಏರ್​ಪೋರ್ಟ್​ ಗೇಟ್​ ಬಳಿ ಒಂದು ಸಣ್ಣ ಟ್ರಕ್​​ ಪೆಟ್ರೋಲಿಯಂ ಉತ್ಪನ್ನಗಳನ್ನು ಒಯ್ಯುತ್ತಿತ್ತು. ಇದೇ ಟ್ರಕ್​​ನಲ್ಲಿ ಸ್ಫೋಟವುಂಟಾಗಿದೆ. ಸ್ಥಳದಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಅದೆಷ್ಟರ ಮಟ್ಟಿಗೆ ಪ್ರಬಲವಾಗಿತ್ತು ಎಂದರೆ ಆ ಶಬ್ದ ನಗರಾದ್ಯಂತ ಕೇಳಿದೆ. ಹತ್ತಿರದ ಮನೆಗಳ ಬಾಗಿಲು, ಕಿಟಕಿಗಳೆಲ್ಲ ಒಡೆದುಹೋಗಿವೆ.  ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಯೆಮೆನ್​ ಸರ್ಕಾರದ ತಾತ್ಕಾಲಿಕ ನೆಲೆ ಇದೇ ಅಡೆನ್​ ನಗರ. ಆದರೆ ಕಳೆದ 7 ವರ್ಷಗಳಿಂದಲೂ ಇಲ್ಲಿ ಹೌತಿ ಪ್ರತ್ಯೇಕತಾ ಗುಂಪಿನ ದಾಳಿ ನಡೆಯುತ್ತಲೇ ಇದೆ. ಅದರೊಂದಿಗೆ ಈಗ ಒಂದು ವರ್ಷದಿಂದ ಅಡೆನ್​​ನಲ್ಲಿಯೇ ಸರ್ಕಾರ ಮತ್ತು ದಕ್ಷಿಣ ಪ್ರತ್ಯೇಕತಾ ಗುಂಪಿನ ನಡುವೆ ಸಂಘರ್ಷ ಏರ್ಪಟ್ಟಿದೆ.

ಈ ತಿಂಗಳ ಪ್ರಾರಂಭದಲ್ಲಿ ಅಡೆನ್​ ನಗರದಲ್ಲಿ ಇಲ್ಲಿನ ಗವರ್ನರ್​​​ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆದಿತ್ತು. ಆಗಲೂ ಕೂಡ ಆರು ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಅದೃಷ್ಟವಶಾತ್ ಗವರ್ನರ್​ ಅಪಾಯದಿಂದ ಪಾರಾಗಿದ್ದರು. 2020ರ ಡಿಸೆಂಬರ್​​ನಲ್ಲಿ ಅಡೆನ್​ ಏರ್​ಪೋರ್ಟ್​​ನಲ್ಲಿ ನಡೆದ ಬಾಂಬ್​ ದಾಳಿಯಿಂದ ಸುಮಾರು 22 ಮಂದಿ ಮೃತಪಟ್ಟಿದ್ದರು. ಆ ದಾಳಿಯ ಹೊಣೆಯನ್ನು ಹೌತಿ ಗುಂಪು ಹೊತ್ತುಕೊಂಡಿತ್ತು. ಹಾಗೇ ಕ್ಷಿಪಣಿ ಪ್ರಯೋಗಿಸಿ ದಾಳಿ ಮಾಡಿದ್ದಾಗಿಯೂ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೇರಿ ದೊಡ್ಡ ದೊಡ್ಡ ತಪ್ಪು ಮಾಡಿದೆ ಎನ್ನುತ್ತ ಮರಳಿ ಟಿಎಂಸಿಗೆ ಬಂದ ರಾಜೀವ್ ಬ್ಯಾನರ್ಜಿ

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ