AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಯುದ್ಧದ ನಡುವೆ ರಷ್ಯಾಕ್ಕೆ ಭೇಟಿ ನೀಡಿದ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್ ಜೈಶಂಕರ್

ವಿದೇಶಾಂಗ ವ್ಯವಹಾರಗಳ ಸಚಿವರ ಭೇಟಿ ಸಂದರ್ಭದಲ್ಲಿ ಎರಡೂ ದೇಶಗಳ ನಡುವೆ ಹಲವು ವಿಚಾರಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.

ಉಕ್ರೇನ್ ಯುದ್ಧದ ನಡುವೆ ರಷ್ಯಾಕ್ಕೆ ಭೇಟಿ ನೀಡಿದ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 08, 2022 | 7:27 AM

Share

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧ (Russia Ukraine War) ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಒಮ್ಮೆ ರಷ್ಯಾ ಮತ್ತೊಮ್ಮೆ ಉಕ್ರೇನ್ ಕೈ ಮೇಲಾಗುತ್ತಿದೆ. ಭಾರತವು ಯುದ್ಧ ನಿಲ್ಲಿಸಲು ತನ್ನದೇ ಆದ ರೀತಿಯಲ್ಲಿ ಪ್ರಯತ್ನಗಳನ್ನು ಮುಂದುವರಿಸಿದೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S Jaishankar) ಎರಡು ದಿನಗಳ ಭೇಟಿಗೆಂದು ರಷ್ಯಾಕ್ಕೆ ಭೇಟಿ ನೀಡಿದ್ದು, ರಷ್ಯಾದ ವಿದೇಶಾಂಗ ಸಚಿವ ಸರ್ಗೆ ಲಾವ್​ರೊವ್ (Russian Foreign Minister Sergey Lavrov) ಅವರನ್ನು ಭೇಟಿಯಾಗಲಿದ್ದಾರೆ. ಇದು ಎರಡೂ ದೇಶಗಳ ನಡುವೆ ನಡೆಯುತ್ತಿರುವ ಉನ್ನತ ಮಟ್ಟದ ಮಾತುಕತೆಯ ಮುಂದುವರಿದ ಭಾಗವಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವರ ಭೇಟಿ ಸಂದರ್ಭದಲ್ಲಿ ಎರಡೂ ದೇಶಗಳ ನಡುವೆ ಹಲವು ವಿಚಾರಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಹಲವು ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಲಿದ್ದಾರೆ. ಜೈಶಂಕರ್ ಅವರು ಜುಲೈ 2021ರಂದು ಕೊನೆಯ ಬಾರಿಗೆ ರಷ್ಯಾಕ್ಕೆ ಭೇಟಿ ನೀಡಿದ್ದರು. ನಂತರ ಏಪ್ರಿಲ್ 2022ರಲ್ಲಿ ರಷ್ಯಾದ ವಿದೇಶಾಂಗ ವ್ಯವಹಾರ ಸಚಿವರು ದೆಹಲಿಗೆ ಭೇಟಿ ನೀಡಿದ್ದರು. ಆಗಷ್ಟೇ ಉಕ್ರೇನ್ ಯುದ್ಧದ ಬಿಸಿ ಜಗತ್ತಿಗೆ ತಾಗುತ್ತಿತ್ತು.

ಜೈಶಂಕರ್ ಮಾಸ್ಕೋ ಭೇಟಿಗೂ ಮೊದಲು ಪ್ರತಿಕ್ರಿಯಿಸಿದ್ದ ರಷ್ಯಾ ವಿದೇಶಾಂಗ ಸಚಿವಾಲಯ, ಭಾರತ ಮತ್ತು ರಷ್ಯಾ ದೇಶಗಳು ವಿಶ್ವದಲ್ಲಿ ಸಮಾನತೆ ಹಾಗೂ ಭ್ರಾತೃತ್ವ ಇರಬೇಕೆಂದು ಪ್ರತಿಪಾದಿಸುತ್ತವೆ ಎಂದು ಹೇಳಿತ್ತು. ‘ವಿಶ್ವದಲ್ಲಿ ತಮ್ಮ ಇಚ್ಛೆಯೇ ನಡೆಯಬೇಕು, ತಮ್ಮ ನೀತಿಗೆ ಎಲ್ಲರೂ ತಲೆಬಾಗಬೇಕು ಎನ್ನುವ ಕೆಲ ದೇಶಗಳ ವಾದವನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ’ ಎಂದು ರಷ್ಯಾ ವಿದೇಶಾಂಗ ವ್ಯವಹಾರಗಳ ಇಲಾಖೆಯ ಹೇಳಿಕೆಯು ತಿಳಿಸಿತ್ತು.

ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧಗಳು ಅತ್ಯಗತ್ಯವಾಗಿವೆ. ‘ದ್ವಿಪಕ್ಷೀಯ ಮಾತುಕತೆ ಮೂಲಕ ಜಾಗತಿಕ ಆರ್ಥಿಕತೆ, ಹಣಕಾಸು, ಇಂಧನ, ಸೇನಾ ತಾಂತ್ರಿಕತೆ, ಮಾನವೀಯ, ವೈಜ್ಞಾನಿಕ ಮತ್ತು ತಾಂತ್ರಿಕ ಸಹಕಾರಗಳ ಕ್ಷೇತ್ರದಲ್ಲಿ ಸಹಕಾರಕ್ಕೆ ಹೊಸ ವೇಗ ಸಿಗಲಿದೆ’ ಎಂದು ರಷ್ಯಾ ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಲ್ಯಾವ್​ರೊವ್​ ಮತ್ತು ಜಯಶಂಕರ್​ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಹೇಗೆ ಎರಡೂ ದೇಶಗಳು ಪರಸ್ಪರ ಸಹಕಾರದೊಂದಿಗೆ ಮುನ್ನಡೆಯಬಹುದು ಎಂಬ ಬಗ್ಗೆಯೂ ತಮ್ಮ ಮಾತುಕತೆಯ ವೇಳೆ ಚರ್ಚಿಸಲಿದ್ದಾರೆ.

‘ವ್ಯಾಪಾರ ಮತ್ತು ಹೂಡಿಕೆ, ಸಾರಿಗೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ವಹಿವಾಟುಗಳನ್ನು ತಮ್ಮದೇ ಕರೆನ್ಸಿಗಳಲ್ಲಿ ನಡೆಸಲು ಅವಕಾಶ ಮಾಡಿಕೊಡುವ ಬಗ್ಗೆಯೂ ದ್ವಿಪಕ್ಷೀಯ ಮಾತುಕತೆಗಳಲ್ಲಿ ಚರ್ಚೆ ನಡೆಯಲಿದೆ. ಮುಖ್ಯವಾಗಿ ರಷ್ಯಾದ ಪೂರ್ವದಲ್ಲಿರುವ ಆರ್ಟಿಕ್ ಶೆಲ್ಫ್ ಪ್ರದೇಶದಲ್ಲಿ ಭಾರತದ ಚಟುವಟಿಕೆಗಳ ಬಗ್ಗೆಯೂ ಇಬ್ಬರೂ ಸಚಿವರ ನಡುವೆ ಚರ್ಚೆ ನಡೆಯಲಿದೆ’ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ.

ವಿಶ್ವಸಂಸ್ಥೆ (United Nationa – UN), ಶಾಂಘೈ ಸಹಕಾರ ಒಕ್ಕೂಟ (Shanghai Cooperation Organisation – SCO), 20 ದೇಶಗಳ ಒಕ್ಕೂಟ (Group of Twenty – G20) ಮತ್ತು ಆರ್​ಐಸಿ (Russia, India, China – RIC) ಒಕ್ಕೂಟಗಳ ಬಗ್ಗೆಯೂ ಎರಡೂ ದೇಶಗಳ ನಡುವೆ ಚರ್ಚೆ ನಡೆಯಲಿದೆ.

ರಕ್ಷಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಭಾರತ ಮತ್ತು ರಷ್ಯಾ ನಡುವೆ ಬಹುಕಾಲದಿಂದ ಬಾಂಧವ್ಯವಿದೆ. ಉಕ್ರೇನ್ ಮೇಲಿನ ರಷ್ಯಾದ ದಾಳಿಯನ್ನು ಭಾರತವು ಈವರೆಗೆ ಬಹಿರಂಗವಾಗಿ ಖಂಡಿಸಿಲ್ಲ. ಆದರೆ ವಿಶ್ವಸಂಸ್ಥೆಯ ಹಲವು ವೇದಿಕೆಗಳಲ್ಲಿ ಭಾರತವು ರಷ್ಯಾ-ಉಕ್ರೇನ್ ನಡುವೆ ಶಾಂತಿ ನೆಲೆಸಬೇಕು ಎಂದು ಒತ್ತಾಯಿಸಿದೆ. ಇದೀಗ ಎರಡೂ ದೇಶಗಳ ನಡುವೆ ಭಾರತವೇ ಮಧ್ಯಸ್ಥಿಕೆ ವಹಿಸಬೇಕು ಎಂಬ ಮಾತುಗಳು ಅಂತರರಾಷ್ಟ್ರೀಯ ಸಮುದಾಯದಲ್ಲಿ ಕೇಳಿ ಬರುತ್ತಿದೆ.

Published On - 7:27 am, Tue, 8 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ