AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ

ಜೈಶ್ ಉಗ್ರ ಮಸೂದ್ ಅಜರ್ ತಲೆಗೆ ಇನಾಮು ಮೊತ್ತವನ್ನು ಪಾಕಿಸ್ತಾನ 70 ಲಕ್ಷ ಪಾಕಿಸ್ತಾನಿ ರೂಪಾಯಿಗಳಿಗೆ ಹೆಚ್ಚಿಸಿದ್ದು, ಹಣಕಾಸು ಕಾರ್ಯಪಡೆ ಸಭೆಗೆ ಕೆಲವೇ ವಾರಗಳಿರುವಾಗ ಈ ಬೆಳವಣಿಗೆ ನಡೆದಿದೆ. 2021ರಲ್ಲಿ ಮಸೂದ್ ಅಜರ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ 50 ಲಕ್ಷ ಪಾಕಿಸ್ತಾನಿ ರೂಪಾಯಿ ಬಹುಮಾನ ಘೋಷಿಸಿತ್ತು.

ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ
ಉಗ್ರ ಮಸೂದ್ ಅಜರ್‌ Image Credit source: PTI
ಪ್ರಸನ್ನ ಹೆಗಡೆ
|

Updated on: Sep 14, 2026 | 6:57 PM

Share

ಇಸ್ಲಾಮಾಬಾದ್, ಸೆಪ್ಟೆಂಬರ್​​ 14: ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನಿಸಿದ್ದು, ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಸುಳಿವು ನೀಡುವವರಿಗೆ ಘೋಷಿಸಿದ್ದ ಬಹುಮಾನವನ್ನು 20 ಲಕ್ಷ ಪಾಕಿಸ್ತಾನಿ ರೂಪಾಯಿಗಳಷ್ಟು ಹೆಚ್ಚಿಸಿ 70 ಲಕ್ಷ ರೂಪಾಯಿಗೆ ನಿಗದಿಪಡಿಸಿದೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಹಣಕಾಸು ಕಾರ್ಯಪಡೆ ಸಭೆಗೆ ಕೆಲವೇ ವಾರಗಳಿರುವಾಗ ಈ ಬೆಳವಣಿಗೆ ನಡೆದಿದೆ.

ಮಸೂದ್ ಅಜರ್‌ ಈಗ ಎಲ್ಲಿದ್ದಾನೆ?

2021ರಲ್ಲಿ ಮಸೂದ್ ಅಜರ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ 50 ಲಕ್ಷ ಪಾಕಿಸ್ತಾನಿ ರೂಪಾಯಿ ಬಹುಮಾನ ಘೋಷಿಸಿತ್ತು. ಬಳಿಕ ಅಜರ್ ಪಾಕಿಸ್ತಾನದಲ್ಲಿಲ್ಲ, ಅಫ್ಘಾನಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಪಾಕಿಸ್ತಾನ ನಿರಂತರವಾಗಿ ಹೇಳಿಕೊಂಡಿದೆ. ಆದರೆ, ಭಾರತೀಯ ಗುಪ್ತಚರ ಸಂಸ್ಥೆಗಳ ಪ್ರಕಾರ ಅಜರ್ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ನವಾಬ್‌ಶಾದಲ್ಲಿದ್ದಾನೆ. ಕಳೆದ ಆರು ತಿಂಗಳಲ್ಲಿ ನಡೆಸಿದ ತಾಂತ್ರಿಕ ವಿಶ್ಲೇಷಣೆಯ ಆಧಾರದ ಮೇಲೆ ಈ ಮಾಹಿತಿ ಲಭಿಸಿದೆ ಎಂದು ಮೂಲಗಳು ತಿಳಿಸಿವೆ.

LIVE TV

ಇದನ್ನೂ ಓದಿ: ಒಡೆದು ಆಳಿದ ಬ್ರಿಟನ್‌ಗೆ ಈಗ ಒಡೆಯುವ ಭೀತಿ: ಯುಕೆ 4 ಭಾಗವಾಗುವುದು ನಿಜವೇ? ಇಲ್ಲಿದೆ ಮಾಹಿತಿ

ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿಯ 2026ರ ‘ರೆಡ್ ಬುಕ್’ನಲ್ಲಿ ಅಜರ್‌ನ ಹೆಸರನ್ನು ಸೇರಿಸಿರುವುದು ಮತ್ತು ಬಹುಮಾನ ಮೊತ್ತ ಹೆಚ್ಚಿಸಿರುವುದು ಹಣಕಾಸು ಕಾರ್ಯಪಡೆ ಸಭೆಗೂ ಮುನ್ನ ಉಗ್ರ ಜಾಲಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದಾಗಿ ತೋರಿಸಿಕೊಳ್ಳುವ ಪಾಕಿಸ್ತಾನದ ಪ್ರಯತ್ನವಾಗಿದೆ ಎಂದು ಮೂಲಗಳು ವಿಶ್ಲೇಷಿಸಿವೆ. 2019ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯೂ ಸೇರಿದಂತೆ ಭಾರತದಲ್ಲಿ ನಡೆದ ಹಲವು ದಾಳಿಗಳ ಪ್ರಕರಣಗಳಲ್ಲಿ ಅಜರ್‌ ಬೇಕಾಗಿದ್ದಾನೆ. ಪುಲ್ವಾಮಾ ದಾಳಿಯಲ್ಲಿ 40 CRPF ಸಿಬ್ಬಂದಿ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ