AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ ವಿಡಿಯೋ ತೆಗೆದುಹಾಕಿದ ಫೇಸ್​ಬುಕ್ ಮತ್ತು ಟ್ವಿಟ್ಟರ್

ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾಗಲು ಇನ್ನಿಲ್ಲದ ಕಸರತ್ತುಗಳನ್ನು ನಡೆಸಿರುವ ಡೊನಾಲ್ಡ್ ಟ್ರಂಪ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಕೊವಿಡ್ ಸೋಂಕಿಗೆ ಸಂಬಂಧಿಸಿದಂತೆ ಮಕ್ಕಳ ರೋಗ ನಿರೋಧಕ ಶಕ್ತಿಯ ಬಗ್ಗೆ ಅವರು ನೀಡಿದ ತಪ್ಪು ಮಾಹಿತಿಯನ್ನು ಫೇಸ್​ಬುಕ್ ಅಳಿಸಿ ಹಾಕಿದೆ. ಫೇಸ್​ಬುಕ್​ನೊಂದಿಗೆ ಮತ್ತೊಂದು ಪ್ರಮುಖ ಜಾಲತಾಣವಾದ ಟ್ವಿಟ್ಟರ್ ಸಹ ಅಧ್ಯಕ್ಷ ಟ್ರಂಪ್ ಅವರ ಅಧಿಕೃತ ಮರು-ಆಯ್ಕೆ ಅಭಿಯಾನದ ವಿಡಿಯೋವನ್ನು ತಡೆಹಿಡಿದಿದೆ. ಆದರೆ, ಟ್ರಂಪ್ ಅವರ ಇತರ ಖಾತೆಗಳನ್ನು ಟ್ವಿಟ್ಟರ್ ತಡೆಹಿಡಿದಿಲ್ಲ. ಫೇಸ್​ಬುಕ್ ಮತ್ತು ಟ್ವಿಟ್ಟರ್ ತಾಣಗಳಲ್ಲಿ […]

ಟ್ರಂಪ್​ ವಿಡಿಯೋ ತೆಗೆದುಹಾಕಿದ ಫೇಸ್​ಬುಕ್ ಮತ್ತು ಟ್ವಿಟ್ಟರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 06, 2020 | 6:11 PM

Share

ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾಗಲು ಇನ್ನಿಲ್ಲದ ಕಸರತ್ತುಗಳನ್ನು ನಡೆಸಿರುವ ಡೊನಾಲ್ಡ್ ಟ್ರಂಪ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಕೊವಿಡ್ ಸೋಂಕಿಗೆ ಸಂಬಂಧಿಸಿದಂತೆ ಮಕ್ಕಳ ರೋಗ ನಿರೋಧಕ ಶಕ್ತಿಯ ಬಗ್ಗೆ ಅವರು ನೀಡಿದ ತಪ್ಪು ಮಾಹಿತಿಯನ್ನು ಫೇಸ್​ಬುಕ್ ಅಳಿಸಿ ಹಾಕಿದೆ.

ಫೇಸ್​ಬುಕ್​ನೊಂದಿಗೆ ಮತ್ತೊಂದು ಪ್ರಮುಖ ಜಾಲತಾಣವಾದ ಟ್ವಿಟ್ಟರ್ ಸಹ ಅಧ್ಯಕ್ಷ ಟ್ರಂಪ್ ಅವರ ಅಧಿಕೃತ ಮರು-ಆಯ್ಕೆ ಅಭಿಯಾನದ ವಿಡಿಯೋವನ್ನು ತಡೆಹಿಡಿದಿದೆ. ಆದರೆ, ಟ್ರಂಪ್ ಅವರ ಇತರ ಖಾತೆಗಳನ್ನು ಟ್ವಿಟ್ಟರ್ ತಡೆಹಿಡಿದಿಲ್ಲ.

ಫೇಸ್​ಬುಕ್ ಮತ್ತು ಟ್ವಿಟ್ಟರ್ ತಾಣಗಳಲ್ಲಿ ಬಿಡುಗಡೆಯಾದ ವಿಡಿಯೋಗಳಲ್ಲಿ ಟ್ರಂಪ್, “ಕೊವಿಡ್ ಸೋಂಕು ಮಕ್ಕಳ ಮೇಲೆ ಪರಿಣಾಮ ಬೀರದು, ಅವರಲ್ಲಿ ರೋಗ ನಿರೋಧಕ ಶಕ್ತಿ ಅತ್ಯುತ್ತಮವಾಗಿರುತ್ತದೆ, ಹಾಗಾಗಿ ಶಾಲೆಗಳನ್ನು ಪುನರಾರಂಭಿಸಬಹುದು,” ಎಂದು ಹೇಳಿದ್ದರು.

ಸದರಿ ವಿಡಿಯೋಗೆ ಸಂಬಂಧಿಸಿದ ಒಂದು ಲಿಂಕ್, “ದಯವಿಟ್ಟು ಕ್ಷಮಿಸಿ, ಈ ಪೋಸ್ಟ್ ಈಗ ಲಭ್ಯವಿಲ್ಲ,” ಎಂದು ಸೂಚಿಸುತ್ತದೆ. “ಈ ವಿಡಿಯೋನಲ್ಲಿ, ಒಂದು ನಿರ್ದಿಷ್ಟ ಗುಂಪಿಗೆ ಸೇರಿದವರು ಕೊವಿಡ್ ಸೋಂಕಿನ ವಿರುದ್ಧ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂಬ ತಪ್ಪು ಮಾಹಿತಿ ನೀಡಲಾಗಿದೆ. ಅಪಾಯಕಾರಿ ಕೊವಿಡ್ ಬಗ್ಗೆ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುವುದು ನಮ್ಮ ಪಾಲಿಸಿಗಳ ಉಲ್ಲಂಘನೆಯಾಗಿದೆ,” ಎಂದು ಫೇಸ್​ಬುಕ್ ಬಾತ್ಮೀದಾರನರೊಬ್ಬರು ಹೇಳಿದ್ದಾರೆ.

ಆಧ್ಯಕ್ಷ ಟ್ರಂಪ್ ಅವರ ಪೋಸ್ಟ್​ಗಳನ್ನು ಫೇಸ್​ಬುಕ್ ತೆಗೆದುಹಾಕುತ್ತಿರುವುದು ಇದೇ ಮೊದಲೇನಲ್ಲ.

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ