AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ಗೆ ಹೃದಯಾಘಾತವಾಗಿರುವ ವಿಡಿಯೋ ಎಲ್ಲೆಡೆ ವೈರಲ್, ಸತ್ಯವೇನು?

ತಮ್ಮ ಫಿಟ್​ನೆಸ್​ನಿಂದಲೇ ವಿಶ್ವಾದ್ಯಂತ ಪ್ರಸಿದ್ಧರಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹೃದಯಾಘಾತವಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

Fact Check: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ಗೆ ಹೃದಯಾಘಾತವಾಗಿರುವ ವಿಡಿಯೋ ಎಲ್ಲೆಡೆ ವೈರಲ್, ಸತ್ಯವೇನು?
ವ್ಲಾಡಿಮಿರ್ ಪುಟಿನ್
ನಯನಾ ರಾಜೀವ್
|

Updated on: May 14, 2023 | 11:48 AM

Share

ತಮ್ಮ ಫಿಟ್​ನೆಸ್​ನಿಂದಲೇ ವಿಶ್ವಾದ್ಯಂತ ಪ್ರಸಿದ್ಧರಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹೃದಯಾಘಾತವಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕೈಗಳು ನಡುಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ ವ್ಲಾಡಿಮಿರ್ ಪುಟಿನ್ ಅವರ ಕೈ ತೀವ್ರವಾಗಿ ನಡುಗುತ್ತಿರುವುದು ಬಳಿಕ ನೆಲದ ಮೇಲೆ ಕುಸಿದು ಬೀಳುವುದನ್ನೂ ಗಮನಿಸಬಹುದು.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ಕೆಟ್ಟಿದೆ ಹೃದಯಾಘಾತವಾಗಿದೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಆದರೆ ಆ ವಿಡಿಯೋ ಸತ್ಯವಲ್ಲ, ಅದನ್ನು ಎಐ ಟೆಕ್ನಾಲಜಿಯನ್ನು ಬಳಸಿ ಕ್ರಿಯೇಟ್​ ಮಾಡಿರುವಂಥದ್ದು ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರೊಂದಿಗಿನ ಭೇಟಿಯ ಸಮಯದಲ್ಲಿ ಟೇಬಲ್​ನ್ನು ಹಿಡಿದುಕೊಂಡೇ ಇರುವುದು ಕಂಡುಬಂದಿತ್ತು, ಅವರ ಬಲಗೈ ಹೆಬ್ಬೆರಳು ಮಾತ್ರ ಸ್ವಲ್ಪ ಚಲಿಸುತ್ತಿತ್ತು. ಮುಖವು ಊದಿಕೊಂಡಂತೆ ಗೋಚರಿಸುತ್ತಿತ್ತು.

ರಾತ್ರಿ ನಡೆದಿದ್ದ ಸಭೆಯೊಂದರಲ್ಲಿ ಪುಟಿನ್ ಕುಸಿದುಬಿದ್ದಿದ್ದರು ಎಂದು ಕೆಲವರು ಹೇಳಿದ್ದಾರೆ ಆದರೆ ಇದೆಲ್ಲವನ್ನೂ ಕೃತಕ ಬುದ್ಧಿಮತ್ತೆಯಿಂದ ರಚಿಸಲಾಗಿದೆ. ಈ ಹಿಂದೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಎಐ ರಚಿತ ಫೋಟೊಗಳು ವೈರಲ್ ಆಗಿದ್ದವು ಅದರಲ್ಲಿ ಪೊಲೀಸ್​ ಡೊನಾಲ್ಡ್​ ಟ್ರಂಪ್ ಅವರನ್ನು ಬಂಧಿಸುತ್ತಿರುವಂತೆ ಬಿಂಬಿಸುವ ಚಿತ್ರವೂ ಇತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು