AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ ಎಂದು ಹೇಳಿದ್ದರು.

ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ
ಅಫ್ಘಾನಿಸ್ತಾನದ ಪ್ರಾಂತ್ಯವೊಂದರ ಗವರ್ನರ್ ಆಗಿದ್ದ ಸಲೀಮಾ ಮಝಾರಿ
TV9 Web
| Edited By: |

Updated on:Aug 18, 2021 | 10:44 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿದ್ದ ಮೂವರು ಮಹಿಳಾ ಗವರ್ನರ್​ಗಳ ಪೈಕಿ ಒಬ್ಬರಾದ ಸಲಿಮಾ ಮಝಾರಿ ಅವರನ್ನು ತಾಲಿಬಾನ್ ಹೋರಾಟಗಾರರು ಬಂಧಿಸಿದ್ದಾರೆ. ಮಝಾರಿ ಅವರು ಹಝಾರಾ ಜಿಲ್ಲೆಯ ಗವರ್ನರ್ ಆಗಿದ್ದರು.

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ. ತಾಲಿಬಾನ್ ಆಡಳಿತದಲ್ಲಿರುವ ನಗರ ಅಥವಾ ಹಳ್ಳಿಗಳಲ್ಲಿ ಮಹಿಳೆಯರು ಮನೆಗಳಲ್ಲಿ ಬಂಧಿಗಳಾಗಿರುತ್ತಾರೆ. ಅವರಿಗೆ ಅಸ್ತಿತ್ವವೇ ಇರುವುದಿಲ್ಲ ಎಂದು ಹೇಳಿದ್ದರು.

ಹಝಾರಾ ಸಮುದಾಯಕ್ಕೆ ಸೇರಿರುವ ಮಝಾರಿ ಅವರ ಸುರಕ್ಷೆ ಬಗ್ಗೆ ಇದೀಗ ಅಂತರರಾಷ್ಟ್ರೀಯ ಸಮುದಾಯದಲ್ಲಿ ಆತಂಕ ವ್ಯಕ್ತವಾಗಿದೆ. ಶಿಯಾ ಮುಸ್ಲಿಮರ ಉಪಪಂಗಡ ಎನಿಸಿರುವ ಹಝಾರಾ ಸಮುದಾಯವನ್ನು ಸುನ್ನಿ ಮುಸ್ಲಿಮರ ಸಂಘಟನೆ ತಾಲಿಬಾನ್ ತಮಗಿಂತ ಕೀಳು ಎಂದು ಪರಿಗಣಿಸುತ್ತದೆ.

ಈ ಹಿಂದೆಯೂ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ಹೋರಾಟಗಾರರು ಹಝಾರಾ ಸಮುದಾಯದ ಮೇಲೆ ದಾಳಿ ನಡೆಸಿದ್ದರು. ಕಾಬೂಲ್​ನಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ದಾಳಿಯಲ್ಲಿ 80 ಬಾಲಕಿಯರು ಮೃತಪಟ್ಟಿದ್ದರು.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮುನ್ನಡೆ ಸಾಧಿಸುತ್ತಿದ್ದಾಗ ಮಝಾರಿ ತಾಲಿಬಾನಿಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸರ್ಕಾರಿ ಭದ್ರತಾ ಸಿಬ್ಬಂದಿಯ ಜೊತೆಗೆ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದರು.

(Female governor in Afghanistan who took up arms against Taliban is now in custody)

ಇದನ್ನೂ ಓದಿ: ನಮಗೆ ಸಹಾಯ ಮಾಡಿದವರನ್ನು ತಾಲಿಬಾನಿಗಳ ಮರ್ಜಿಗೆ ಬಿಡಲು ಆಗದು: ಅಫ್ಘಾನಿಸ್ತಾನದ 20 ಸಾವಿರ ಮಂದಿಯ ಪುನರ್ವಸತಿಗೆ ಬ್ರಿಟನ್ ನಿರ್ಧಾರ

ಇದನ್ನೂ ಓದಿ: Taliban In Afghanistan: ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಇದ್ದರೆ ಇಡೀ ಜಗತ್ತಿಗೆ ಕೊರೊನಾ ಇದ್ದಂತೆ ಏಕೆ?

Published On - 10:42 pm, Wed, 18 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ