ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ ಎಂದು ಹೇಳಿದ್ದರು.

ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ
ಅಫ್ಘಾನಿಸ್ತಾನದ ಪ್ರಾಂತ್ಯವೊಂದರ ಗವರ್ನರ್ ಆಗಿದ್ದ ಸಲೀಮಾ ಮಝಾರಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 18, 2021 | 10:44 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿದ್ದ ಮೂವರು ಮಹಿಳಾ ಗವರ್ನರ್​ಗಳ ಪೈಕಿ ಒಬ್ಬರಾದ ಸಲಿಮಾ ಮಝಾರಿ ಅವರನ್ನು ತಾಲಿಬಾನ್ ಹೋರಾಟಗಾರರು ಬಂಧಿಸಿದ್ದಾರೆ. ಮಝಾರಿ ಅವರು ಹಝಾರಾ ಜಿಲ್ಲೆಯ ಗವರ್ನರ್ ಆಗಿದ್ದರು.

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ. ತಾಲಿಬಾನ್ ಆಡಳಿತದಲ್ಲಿರುವ ನಗರ ಅಥವಾ ಹಳ್ಳಿಗಳಲ್ಲಿ ಮಹಿಳೆಯರು ಮನೆಗಳಲ್ಲಿ ಬಂಧಿಗಳಾಗಿರುತ್ತಾರೆ. ಅವರಿಗೆ ಅಸ್ತಿತ್ವವೇ ಇರುವುದಿಲ್ಲ ಎಂದು ಹೇಳಿದ್ದರು.

ಹಝಾರಾ ಸಮುದಾಯಕ್ಕೆ ಸೇರಿರುವ ಮಝಾರಿ ಅವರ ಸುರಕ್ಷೆ ಬಗ್ಗೆ ಇದೀಗ ಅಂತರರಾಷ್ಟ್ರೀಯ ಸಮುದಾಯದಲ್ಲಿ ಆತಂಕ ವ್ಯಕ್ತವಾಗಿದೆ. ಶಿಯಾ ಮುಸ್ಲಿಮರ ಉಪಪಂಗಡ ಎನಿಸಿರುವ ಹಝಾರಾ ಸಮುದಾಯವನ್ನು ಸುನ್ನಿ ಮುಸ್ಲಿಮರ ಸಂಘಟನೆ ತಾಲಿಬಾನ್ ತಮಗಿಂತ ಕೀಳು ಎಂದು ಪರಿಗಣಿಸುತ್ತದೆ.

ಈ ಹಿಂದೆಯೂ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ಹೋರಾಟಗಾರರು ಹಝಾರಾ ಸಮುದಾಯದ ಮೇಲೆ ದಾಳಿ ನಡೆಸಿದ್ದರು. ಕಾಬೂಲ್​ನಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ದಾಳಿಯಲ್ಲಿ 80 ಬಾಲಕಿಯರು ಮೃತಪಟ್ಟಿದ್ದರು.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮುನ್ನಡೆ ಸಾಧಿಸುತ್ತಿದ್ದಾಗ ಮಝಾರಿ ತಾಲಿಬಾನಿಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸರ್ಕಾರಿ ಭದ್ರತಾ ಸಿಬ್ಬಂದಿಯ ಜೊತೆಗೆ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದರು.

(Female governor in Afghanistan who took up arms against Taliban is now in custody)

ಇದನ್ನೂ ಓದಿ: ನಮಗೆ ಸಹಾಯ ಮಾಡಿದವರನ್ನು ತಾಲಿಬಾನಿಗಳ ಮರ್ಜಿಗೆ ಬಿಡಲು ಆಗದು: ಅಫ್ಘಾನಿಸ್ತಾನದ 20 ಸಾವಿರ ಮಂದಿಯ ಪುನರ್ವಸತಿಗೆ ಬ್ರಿಟನ್ ನಿರ್ಧಾರ

ಇದನ್ನೂ ಓದಿ: Taliban In Afghanistan: ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಇದ್ದರೆ ಇಡೀ ಜಗತ್ತಿಗೆ ಕೊರೊನಾ ಇದ್ದಂತೆ ಏಕೆ?

Published On - 10:42 pm, Wed, 18 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ