AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  

ಕಂಡೆಸ್ಟೆರ್​ ಸಿಚ್ವಾಲೆ ಪ್ಯಾಂಟ್​-ಶರ್ಟ್​ ಹಾಕಿ ಬಂದಿದ್ದನ್ನು ನೋಡಿದ ಇನ್ನೊಬ್ಬ ಸಂಸದ ಹುಸೇನ್​ ಅಮರ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  
ಸಂಸತ್ತಿನಿಂದ ಹೊರಹೋಗುತ್ತಿರುವ ಸಂಸದೆ
TV9 Web
| Edited By: |

Updated on:Jun 03, 2021 | 2:44 PM

Share

ಪೂರ್ವ ಆಫ್ರಿಕಾದ ಟಾಂಜಾನಿಯಾ ದೇಶದ ಸಂಸತ್ತಿಗೆ ಬಿಗಿಯಾದ ಪ್ಯಾಂಟ್​-ಶರ್ಟ್​ ಧರಿಸಿ ಬಂದ ಸಂಸದೆಯನ್ನು ಹೊರಗೆ ಕಳಿಸಿದ ಸ್ಪೀಕರ್​ ವಿರುದ್ಧ ಮಹಿಳಾ ಜನಪ್ರತಿನಿಧಿಗಳು ತಿರುಗಿಬಿದ್ದಿದ್ದಾರೆ. ಸ್ಪೀಕರ್​ ಕೂಡಲೇ ಸಂಸದೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದೆ ಕಂಡೆಸ್ಟೆರ್​ ಸಿಚ್ವಾಲೆ ಅವರು ಕಪ್ಪು ಬಣ್ಣದ ಜೀನ್ಸ್​ ಪ್ಯಾಂಟ್​ ಮತ್ತು ಹಳದಿ ಬಣ್ಣದ ಶಾರ್ಟ್​ ಟಾಪ್​ ಧರಿಸಿ ಸಂಸತ್ತಿಗೆ ಬಂದಿದ್ದರು. ಆದರೆ ಸ್ಪೀಕರ್​ ಅವರನ್ನು ಹೊರಗೆ ಕಳಿಸಿದ್ದು ಇದೀಗ ವಿವಾದ ಸೃಷ್ಟಿಸಿದೆ.

ಕಂಡೆಸ್ಟೆರ್​ ಸಿಚ್ವಾಲೆ ಪ್ಯಾಂಟ್​-ಶರ್ಟ್​ ಹಾಕಿ ಬಂದಿದ್ದನ್ನು ನೋಡಿದ ಇನ್ನೊಬ್ಬ ಸಂಸದ ಹುಸೇನ್​ ಅಮರ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಸತ್ತು ಈ ಸಮಾಜದ ಪ್ರತಿಬಿಂಬಕವಾಗಿದೆ. ಮಹಿಳಾ ಜನಪ್ರತಿನಿಧಿಗಳು ಬಿಗಿಯಾದ ಜೀನ್ಸ್​ ಧರಿಸಿ ಇಲ್ಲಿ ಬರುವುದನ್ನು ನಿಷೇಧಿಸಲಾಗಿದೆ. ಆ ನಿಯಮವನ್ನು ಕಂಡೆಸ್ಟೆರ್​ ಸಿಚ್ವಾಲೆ ಉಲ್ಲಂಘಿಸಿದ್ದಾರೆ ಎಂದು ಹುಸೇನ್​ ಅಮರ್​ ಹೇಳಿದ್ದರು. ಅದಾದ ಬಳಿಕ ಸ್ಪೀಕರ್​ ಜಾಬ್​ ಎನ್​ಡುಗೈ ಆ ಸಂಸದೆಯನ್ನು ಹೊರಕಳಿಸಿದ್ದಾರೆ. ‘ನೀವು ಮೊದಲು ಸಂಸತ್ತಿನಿಂದ ಹೊರ ಹೋಗಿ, ಬೇರೆ ಉಡುಪು ಧರಿಸಿ ಬನ್ನಿ’ ಎಂದು ಹೇಳಿ ಕಳಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಾಬ್​ ಎನ್​ಡುಗಾಯ್​, ಮಹಿಳಾ ಪ್ರತಿನಿಧಿಗಳ ಉಡುಪಿನ ಬಗ್ಗೆ ದೂರು ಕೇಳುತ್ತಿರುವುದು ಇದೇ ಮೊದಲಲ್ಲ. ಇನ್ನು ಮುಂದೆ ಇಂಥ ಉಡುಪು ಧರಿಸಿ ಬರುವವರನ್ನು ಒಳಗೆ ಬಿಡಬೇಡಿ ಎಂದು ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ. ಆದರೆ ಮಹಿಳಾ ಜನಪ್ರತಿನಿಧಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಕೂಡಲೇ ಸಂಸದೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Published On - 2:35 pm, Thu, 3 June 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ