AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  

ಕಂಡೆಸ್ಟೆರ್​ ಸಿಚ್ವಾಲೆ ಪ್ಯಾಂಟ್​-ಶರ್ಟ್​ ಹಾಕಿ ಬಂದಿದ್ದನ್ನು ನೋಡಿದ ಇನ್ನೊಬ್ಬ ಸಂಸದ ಹುಸೇನ್​ ಅಮರ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  
ಸಂಸತ್ತಿನಿಂದ ಹೊರಹೋಗುತ್ತಿರುವ ಸಂಸದೆ
TV9 Web
| Edited By: |

Updated on:Jun 03, 2021 | 2:44 PM

Share

ಪೂರ್ವ ಆಫ್ರಿಕಾದ ಟಾಂಜಾನಿಯಾ ದೇಶದ ಸಂಸತ್ತಿಗೆ ಬಿಗಿಯಾದ ಪ್ಯಾಂಟ್​-ಶರ್ಟ್​ ಧರಿಸಿ ಬಂದ ಸಂಸದೆಯನ್ನು ಹೊರಗೆ ಕಳಿಸಿದ ಸ್ಪೀಕರ್​ ವಿರುದ್ಧ ಮಹಿಳಾ ಜನಪ್ರತಿನಿಧಿಗಳು ತಿರುಗಿಬಿದ್ದಿದ್ದಾರೆ. ಸ್ಪೀಕರ್​ ಕೂಡಲೇ ಸಂಸದೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದೆ ಕಂಡೆಸ್ಟೆರ್​ ಸಿಚ್ವಾಲೆ ಅವರು ಕಪ್ಪು ಬಣ್ಣದ ಜೀನ್ಸ್​ ಪ್ಯಾಂಟ್​ ಮತ್ತು ಹಳದಿ ಬಣ್ಣದ ಶಾರ್ಟ್​ ಟಾಪ್​ ಧರಿಸಿ ಸಂಸತ್ತಿಗೆ ಬಂದಿದ್ದರು. ಆದರೆ ಸ್ಪೀಕರ್​ ಅವರನ್ನು ಹೊರಗೆ ಕಳಿಸಿದ್ದು ಇದೀಗ ವಿವಾದ ಸೃಷ್ಟಿಸಿದೆ.

ಕಂಡೆಸ್ಟೆರ್​ ಸಿಚ್ವಾಲೆ ಪ್ಯಾಂಟ್​-ಶರ್ಟ್​ ಹಾಕಿ ಬಂದಿದ್ದನ್ನು ನೋಡಿದ ಇನ್ನೊಬ್ಬ ಸಂಸದ ಹುಸೇನ್​ ಅಮರ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಸತ್ತು ಈ ಸಮಾಜದ ಪ್ರತಿಬಿಂಬಕವಾಗಿದೆ. ಮಹಿಳಾ ಜನಪ್ರತಿನಿಧಿಗಳು ಬಿಗಿಯಾದ ಜೀನ್ಸ್​ ಧರಿಸಿ ಇಲ್ಲಿ ಬರುವುದನ್ನು ನಿಷೇಧಿಸಲಾಗಿದೆ. ಆ ನಿಯಮವನ್ನು ಕಂಡೆಸ್ಟೆರ್​ ಸಿಚ್ವಾಲೆ ಉಲ್ಲಂಘಿಸಿದ್ದಾರೆ ಎಂದು ಹುಸೇನ್​ ಅಮರ್​ ಹೇಳಿದ್ದರು. ಅದಾದ ಬಳಿಕ ಸ್ಪೀಕರ್​ ಜಾಬ್​ ಎನ್​ಡುಗೈ ಆ ಸಂಸದೆಯನ್ನು ಹೊರಕಳಿಸಿದ್ದಾರೆ. ‘ನೀವು ಮೊದಲು ಸಂಸತ್ತಿನಿಂದ ಹೊರ ಹೋಗಿ, ಬೇರೆ ಉಡುಪು ಧರಿಸಿ ಬನ್ನಿ’ ಎಂದು ಹೇಳಿ ಕಳಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಾಬ್​ ಎನ್​ಡುಗಾಯ್​, ಮಹಿಳಾ ಪ್ರತಿನಿಧಿಗಳ ಉಡುಪಿನ ಬಗ್ಗೆ ದೂರು ಕೇಳುತ್ತಿರುವುದು ಇದೇ ಮೊದಲಲ್ಲ. ಇನ್ನು ಮುಂದೆ ಇಂಥ ಉಡುಪು ಧರಿಸಿ ಬರುವವರನ್ನು ಒಳಗೆ ಬಿಡಬೇಡಿ ಎಂದು ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ. ಆದರೆ ಮಹಿಳಾ ಜನಪ್ರತಿನಿಧಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಕೂಡಲೇ ಸಂಸದೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Published On - 2:35 pm, Thu, 3 June 21

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ