FIFA World Cup 2022: ಬಂಧನವಾಗಿದ್ದ ಯುಎಸ್ ಪತ್ರಕರ್ತ ಗ್ರಾಂಟ್ ವಾಲ್ ಕತಾರ್‌ನಲ್ಲಿ ನಿಧನ

LGBTQ ಸಮುದಾಯವನ್ನು ಬೆಂಬಲಿಸಲು ಮಳೆಬಿಲ್ಲು ಬಣ್ಣದ ಶರ್ಟ್ ಧರಿಸಿದ್ದಕ್ಕಾಗಿ ಕತಾರ್‌ನಲ್ಲಿ ಬಂಧನಕ್ಕೊಳಗಾದ US ಪತ್ರಕರ್ತ ಗ್ರಾಂಟ್ ವಾಲ್ ಅವರು FIFA ವಿಶ್ವಕಪ್ ವರದಿ ಮಾಡುವಾಗ ನಿಧನರಾದರು ಎಂದು ಅವರ ಸಹೋದರ ತಿಳಿಸಿದ್ದಾರೆ

FIFA World Cup 2022: ಬಂಧನವಾಗಿದ್ದ ಯುಎಸ್ ಪತ್ರಕರ್ತ ಗ್ರಾಂಟ್ ವಾಲ್ ಕತಾರ್‌ನಲ್ಲಿ ನಿಧನ
journalist Grant Wall
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 10, 2022 | 10:51 AM

ಕತಾರ್‌: LGBTQ ಸಮುದಾಯವನ್ನು ಬೆಂಬಲಿಸಲು ಕಾಮನಬಿಲ್ಲು ಬಣ್ಣದ ಶರ್ಟ್ ಧರಿಸಿದ್ದಕ್ಕಾಗಿ ಕತಾರ್‌ನಲ್ಲಿ ಬಂಧನಕ್ಕೊಳಗಾದ US ಪತ್ರಕರ್ತ ಗ್ರಾಂಟ್ ವಾಲ್ ಅವರು FIFA ವಿಶ್ವಕಪ್ ವರದಿ ಮಾಡುವಾಗ ನಿಧನರಾದರು ಎಂದು ಅವರ ಸಹೋದರ ತಿಳಿಸಿದ್ದಾರೆ. ಲುಸೈಲ್ ಐಕಾನಿಕ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಅರ್ಜೆಂಟೀನಾ ಮತ್ತು ನೆದರ್ಲೆಂಡ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ಕವರ್ ಮಾಡುವಾಗ 48 ವರ್ಷದ ಗ್ರಾಂಟ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಮಾಜಿ ಸ್ಪೋರ್ಟ್ಸ್ ಇಲ್ಲಸ್ಟ್ರೇಟೆಡ್ ಪತ್ರಕರ್ತನ ಸಾವಿನಲ್ಲಿ ಕತಾರ್ ಸರ್ಕಾರವು ಭಾಗಿಯಾಗಿದೆ ಎಂದು ಗ್ರಾಂಟ್ ಅವರ ಸಹೋದರ ಎರಿಕ್ ಆರೋಪಿಸಿದ್ದಾರೆ. ನನ್ನ ಹೆಸರು ಎರಿಕ್ ವಾಲ್. ನಾನು ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ವಾಸಿಸುತ್ತಿದ್ದೇನೆ. ನಾನು ಗ್ರಾಂಟ್ ವಾಲ್ ಅವರ ಸಹೋದರ. ನಾನು ಸಲಿಂಗಕಾಮಿ ಎಂದು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ. ನನ್ನ ಸಹೋದರ ವಿಶ್ವಕಪ್‌ಗೆ ಮಳೆಬಿಲ್ಲು ಶರ್ಟ್ ಧರಿಸಲು ನಾನು ಕಾರಣ. ನನ್ನ ಸಹೋದರ ಆರೋಗ್ಯವಾಗಿದ್ದ. ಅವನಿಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಅವನು ನನಗೆ ಹೇಳಿದನು. ನನ್ನ ಸಹೋದರ ಆಕಸ್ಮಿಕವಾಗಿ ಸತ್ತಿದ್ದಾನೆ ಎಂದು ನಾನು ನಂಬುವುದಿಲ್ಲ, ಅವನು ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಿದ್ದಾರೆ.

ವಿಶ್ವಕಪ್‌ನ ಆರಂಭದಲ್ಲಿ, ಅಲ್ ರಯಾನ್‌ನಲ್ಲಿರುವ ಅಹ್ಮದ್ ಬಿನ್ ಅಲಿ ಕ್ರೀಡಾಂಗಣದಲ್ಲಿ ವೇಲ್ಸ್ ವಿರುದ್ಧದ ಯುನೈಟೆಡ್ ಸ್ಟೇಟ್ಸ್‌ನ ಆರಂಭಿಕ ಪಂದ್ಯಕ್ಕೆ ವಿಶ್ವಕಪ್ ಭದ್ರತೆಯು ತನಗೆ ಪ್ರವೇಶವನ್ನು ನಿರಾಕರಿಸಿತು ಮತ್ತು ತನ್ನ ರೇನ್‌ಬೋ ಶರ್ಟ್ ಅನ್ನು ತೆಗೆಯುವಂತೆ ಕೇಳಿಕೊಂಡಿದ್ದಾರೆ ಎಂದು ಗ್ರಾಂಟ್ ಹೇಳಿದ್ದರು. ಘಟನೆಯ ಬಗ್ಗೆ ಟ್ವೀಟ್ ಮಾಡಿದಕ್ಕೆ ಅವರ ಫೋನ್ ವಶಪಡಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ:  ಫಿಫಾ ವಿಶ್ವಕಪ್​ನಿಂದ ಹೊರಬಿದ್ದ ಬ್ರೆಜಿಲ್, ನೆದರ್ಲೆಂಡ್ಸ್: ಸೆಮಿ ಫೈನಲ್​ಗೇರಿದ ಕ್ರೊವೇಷ್ಯಾ, ಅರ್ಜೆಂಟೀನಾ

ಸ್ಥಳದಲ್ಲಿದ್ದ ಭದ್ರತಾ ಅಧಿಕಾರಿಯೊಬ್ಬರು ಕ್ಷಮೆಯಾಚಿಸಿದ ನಂತರ ಅವರನ್ನು ಕ್ರೀಡಾಂಗಣಕ್ಕೆ ಹೋಗಲು ಅವಕಾಶ ನೀಡಿದ್ದಾರೆ. ಗ್ರಾಂಟ್ ಆಸ್ಪತ್ರೆಯಲ್ಲಿ ಅಥವಾ ದಾರಿಯಲ್ಲಿಯೇ ಸಾವನ್ನಪ್ಪಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾವು ಈ ಬಗ್ಗೆ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಎರಿಕ್ ಹೇಳಿದರು. ಗ್ರಾಂಟ್ ವಾಲ್ ಕ್ರೀಡಾಂಗಣದಲ್ಲಿ ಕುಸಿದುಬಿದ್ದಾಗ ಸಿಪಿಆರ್ ನೀಡಲಾಯಿತು, ನಂತರ ಉಬರ್ ಆಸ್ಪತ್ರೆಗೆ ಕರೆದೊಯ್ದರು ಎಂದು ಹೇಳಲಾಗಿದೆ. ಸೆಲೀನ್ ಪ್ರಕಾರ ಆಸ್ಪತ್ರೆಗೆ ಸಾಗಿಸುವಾಗ ಮರಣ ಹೊಂದಿದ್ದಾರೆ ಎಂದು ಹೇಳಿದ್ದಾರೆ. ನಾವು ಸರ್ಕಾರದೊಂದಿಗೆ ಮಾತನಾಡಿದ್ದೇವೆ ಮತ್ತು ಸೆಲಿನ್ ರಾನ್ ಕ್ಲೇನ್ ಶ್ವೇತಭವನದೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ

US ಫುಟ್‌ಬಾಲ್ ಸಂಸ್ಥೆಯು ಹೇಳಿಕೆಯೊಂದರಲ್ಲಿ ಗ್ರಾಂಟ್‌ನ ಸಾವಿನ ಬಗ್ಗೆ ತಿಳಿದು ತುಂಬಾ ನೋವಾಗಿದೆ ಎಂದು ಹೇಳಿದೆ, ಅವರು ಮನಸ್ಸಿನಲ್ಲಿ ಶ್ವಾಶತವಾಗಿ ಉಳಿಯುತ್ತಾರೆ ಎಂದು ಹೇಳಿದರು. ನಾವು ಗ್ರಾಂಟ್ ವಾಲ್ ಅನ್ನು ಕಳೆದುಕೊಂಡಿದ್ದೇವೆ ಎಂದು ತಿಳಿದು ಇಡೀ ಯುಎಸ್ ಎದೆಗುಂದಿದೆ ಎಂದು ಯುಎಸ್ ಸಾಕರ್ ಫೆಡರೇಶನ್ ಹೇಳಿದೆ. ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸಾಕರ್‌ಗಾಗಿ ಗ್ರಾಂಟ್‌ರ ಉತ್ಸಾಹಕತೆ ಮತ್ತು ನಮ್ಮ ಕ್ರೀಡಾ ಬಗ್ಗೆ ಅವರಲ್ಲಿದ್ದ ಅಭಿಮಾನ ಅವರ ಬದ್ಧತೆ, ಆಟದ ಬಗ್ಗೆ ಅವರಲ್ಲಿದ್ದ ಆಸಕ್ತಿ ಮತ್ತು ಗೌರವ ಹೆಚ್ಚು ಪಾತ್ರವನ್ನು ವಹಿಸಿದೆ. ಪ್ರಮುಖವಾಗಿ, ಆಟದ ಶಕ್ತಿಯಲ್ಲಿ ಗ್ರಾಂಟ್ ಅವರ ನಂಬಿಕೆ ಮಾನವ ಹಕ್ಕುಗಳ ಪ್ರಗತಿಯು ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದೆ.

ವಿಶ್ವದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 am, Sat, 10 December 22

ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ