ಉಕ್ರೇನ್​ನಲ್ಲಿ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ

ಉಕ್ರೇನ್ ನಗರವಾದ ಡ್ನಿಪ್ರೊದಲ್ಲಿ ಬಸ್ ಮೇಲೆ ರಷ್ಯಾದ ಡ್ರೋನ್ ದಾಳಿಯಲ್ಲಿ 15 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ತುರ್ತು ಸೇವೆಗಳು ವರದಿ ಮಾಡಿವೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ ಮುಂದಿನ ಸುತ್ತಿನ ಶಾಂತಿ ಮಾತುಕತೆ ಬುಧವಾರ ಮತ್ತು ಗುರುವಾರ ನಡೆಯಲಿದೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ.ಉಕ್ರೇನ್‌ನ ಅತಿದೊಡ್ಡ ಖಾಸಗಿ ಇಂಧನ ಕಂಪನಿ ಡಿಟಿಇಕೆ, ಬಸ್ ತಮ್ಮ ಸಂಸ್ಥೆಗೆ ಸೇರಿದ್ದು ಎಂದು ಹೇಳಿಕೊಂಡಿದೆ.

ಉಕ್ರೇನ್​ನಲ್ಲಿ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Image Credit source: Moneycontrol

Updated on: Feb 02, 2026 | 9:39 AM

ಕೈವ್, ಫೆಬ್ರವರಿ 02: ರಷ್ಯಾ ಉಕ್ರೇನ್​(Ukraine) ಮೇಲೆ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ.

ಡ್ರೋನ್ ದಾಳಿಯ ನಂತರ ಬಸ್ ಬೆಂಕಿಗೆ ಹೊತ್ತಿಕೊಂಡಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ ಸಾವಿನ ಸಂಖ್ಯೆ 12 ಎಂದು ವರದಿಯಾಗಿತ್ತು, ಆದರೆ ನಂತರ ಅಧಿಕಾರಿಗಳು ಸಾವಿನ ಸಂಖ್ಯೆ 15 ಕ್ಕೆ ಏರಿದೆ ಎಂದು ದೃಢಪಡಿಸಿದರು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾವ್ಲೋಹ್ರಾದ್ ಜಿಲ್ಲೆಯ ಡಿಟಿಇಕೆ ಕಲ್ಲಿದ್ದಲು ಸ್ಥಾವರದ ಬಳಿ ಈ ದಾಳಿ ನಡೆದಿದೆ. ಬಸ್ ಗಣಿಗಾರರನ್ನು ತಮ್ಮ ಕರ್ತವ್ಯಕ್ಕೆ ಕರೆದೊಯ್ಯುತ್ತಿತ್ತು.ಆಗ ದಾಳಿ ನಡೆದಿದೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ದಾಳಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡ್ನಿಪ್ರೊ ಪ್ರದೇಶದ ಟೆರ್ನಿವ್ಕಾ ಪ್ರದೇಶದಲ್ಲಿ ನಾಗರಿಕರನ್ನು ಸಾಗಿಸುತ್ತಿದ್ದ ಬಸ್ ಮೇಲೆ ರಷ್ಯಾದ ಡ್ರೋನ್ ಡಿಕ್ಕಿ ಹೊಡೆದು ಅನೇಕ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ದುರಂತ ಘಟನೆಯ ಮಧ್ಯೆ, ಅಧ್ಯಕ್ಷ ಝೆಲೆನ್ಸ್ಕಿ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳ ಕುರಿತು ಮಾಹಿತಿ ನೀಡಿದ್ದಾರೆ. ಉಕ್ರೇನ್, ರಷ್ಯಾ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಮುಂದಿನ ತ್ರಿಪಕ್ಷೀಯ ಸಭೆ ಫೆಬ್ರವರಿ 4 ಮತ್ತು 5 ರಂದು ಅಬುಧಾಬಿಯಲ್ಲಿ ನಡೆಯಲಿದೆ ಎಂದು ಅವರು ಘೋಷಿಸಿದರು.

ಮತ್ತಷ್ಟು ಓದಿ: ಉಕ್ರೇನ್​​ ಮೇಲಿನ ಯುದ್ಧಕ್ಕೆ ಭಾರತ-ಚೀನಾ ಮುಖ್ಯ ಹೂಡಿಕೆದಾರರು; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಉಕ್ರೇನ್ ಅರ್ಥಪೂರ್ಣ ಮಾತುಕತೆಗಳಿಗೆ ಸಂಪೂರ್ಣವಾಗಿ ಸಿದ್ಧವಾಗಿದೆ , ಈ ದಾಳಿಯು ಮತ್ತೊಮ್ಮೆ ಈ ಯುದ್ಧದಲ್ಲಿ ನಾಗರಿಕರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಮತ್ತು ಶಾಂತಿ ಪ್ರಯತ್ನಗಳ ಅಗತ್ಯವು ಎಂದಿಗಿಂತಲೂ ಹೆಚ್ಚಾಗಿದೆ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ನೆನಪಿಸುತ್ತದೆ.

ರಷ್ಯಾ ತನ್ನ ನೆರೆಯವರ ಮೇಲೆ ನಡೆಸಿದ ಸಂಪೂರ್ಣ ಆಕ್ರಮಣವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಮಾತುಕತೆಗಳನ್ನು ಮುಂದುವರಿಸಲು ರಷ್ಯಾ, ಉಕ್ರೇನ್ ಮತ್ತು ಅಮೆರಿಕದ ರಾಯಭಾರಿಗಳು ಅಬುಧಾಬಿಯಲ್ಲಿ ಭೇಟಿಯಾಗುವ ನಿರೀಕ್ಷೆಯಿತ್ತು. ಝೆಲೆನ್ಸ್ಕಿ ಮುಂದಿನ ವಾರ ಅವು ನಡೆಯುವುದಾಗಿ ಘೋಷಿಸಿದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:34 am, Mon, 2 February 26

Loading...
Unable to load recommendations.
Follow Us