AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆದೇಶ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಭಾರತಕ್ಕೆ ಬರುತ್ತಿರುವ ನಿರಾಶ್ರಿತರ ಹಿಂಡು: ಇಲ್ಲಿದೆ ನೀವು ತಿಳಿಯಬೇಕಾದ 10 ಬೆಳವಣಿಗೆಗಳು

ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು ಭಾರತದ ಮೇಲೆಯೂ ಪರಿಣಾಮ ಬೀರಲು ಆರಂಭಿಸಿದೆ. ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ನೀವು ತಿಳಿಯಬೇಕಾದ 10 ಅಂಶಗಳಿವು.

ನೆರೆದೇಶ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಭಾರತಕ್ಕೆ ಬರುತ್ತಿರುವ ನಿರಾಶ್ರಿತರ ಹಿಂಡು: ಇಲ್ಲಿದೆ ನೀವು ತಿಳಿಯಬೇಕಾದ 10 ಬೆಳವಣಿಗೆಗಳು
ಭಾರತಕ್ಕೆ ಬರುತ್ತಿರುವ ಶ್ರೀಲಂಕಾದ ನಿರಾಶ್ರಿತರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 24, 2022 | 8:35 AM

ದೆಹಲಿ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಬಿಗಡಾಯಿಸಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಹಣ ಕೊಡುತ್ತೇವೆ ಎಂದರೂ ಪೆಟ್ರೋಲ್-ಡೀಸೆಲ್ ಸಿಗುತ್ತಿಲ್ಲ. ಅತ್ಯಗತ್ಯ ವಸ್ತುಗಳ ಕೊರತೆಯಿಂದಾಗಿ ಜನರು ಹಲವು ದಿನಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಿಂದ ದೊಡ್ಡ ಸಂಖ್ಯೆಯ ಜನರು ನಿರಾಶ್ರಿತರಾಗಿ ಭಾರತಕ್ಕೆ ವಲಸೆ ಬರುತ್ತಿದ್ದಾರೆ. ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು ಭಾರತದ ಮೇಲೆಯೂ ಪರಿಣಾಮ ಬೀರಲು ಆರಂಭಿಸಿದೆ. ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ನೀವು ತಿಳಿಯಬೇಕಾದ 10 ಅಂಶಗಳಿವು.

  1. ಭಾರತದ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಶ್ರೀಲಂಕಾದಿಂದ ಬಂದಿದ್ದ 6 ನಿರಾಶ್ರಿತರನ್ನು ರಕ್ಷಿಸಿದ್ದರು. ಮೂವರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಇವರು ಶ್ರೀಲಂಕಾದ ಉತ್ತರ ಪ್ರಾಂತ್ಯದಲ್ಲಿರುವ ಜಾಫ್ನಾ ಮೂಲದವರು. ನಿರುದ್ಯೋಗ ಮತ್ತು ಹಸಿವಿನಿಂದ ಕಂಗೆಟ್ಟು ಭಾರತದ ಆಶ್ರಯ ಕೋರಿದ್ದಾರೆ. ತಮಿಳುನಾಡಿನ ರಾಮೇಶ್ವರಂ ಸಮೀಪದ ದ್ವೀಪವೊಂದಕ್ಕೆ ಬಂದಿದ್ದ ಇವರನ್ನು ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ರಕ್ಷಿಸಿದ್ದರು.
  2. ಪೆಟ್ರೋಲ್ ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಶ್ರೀಲಂಕಾ ಸರ್ಕಾರವು ಸೇನೆಗೆ ಆದೇಶಿಸಿದೆ. ಪೆಟ್ರೋಲ್ ಬಂಕ್​ಗಳಿಗೆ ಸೇನೆಯನ್ನು ನಿಯೋಜಿಸಲಾಗಿದೆ. ಪೆಟ್ರೋಲ್ ಬಂಕ್​ಗಳ ಎದುರು ಸಾವಿರಾರು ಬೈಕ್ ಸವಾರರು ಸರದಿಯಲ್ಲಿ ನಿಂತಿದ್ದಾರೆ.
  3. ಪೆಟ್ರೋಲ್ ಖರೀದಿಗೆಂದು ಸರದಿಯಲ್ಲಿ ನಿಂತಿದ್ದ ಮೂವರು ಹಿರಿಯ ನಾಗರಿಕರು ಶನಿವಾರ ಮೃತಪಟ್ಟಿದ್ದರು. ದೇಶದ ವಿದೇಶ ಮೀಸಲು ನಿಧಿ ನಿರ್ವಹಣೆಯಲ್ಲಿ ಗಂಭೀರ ಲೋಪಗಳಾದ ಕಾರಣ ಪೆಟ್ರೋಲಿಯಂ ದರಗಳು ಆಗಸಕ್ಕೇರಿವೆ. ಹಣದುಬ್ಬರ ಮತ್ತು ಅತ್ಯಗತ್ಯ ವಸ್ತುಗಳ ಬೆಲೆಗಳೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.
  4. ಕಾಗದಗಳ ಕೊರತೆಯಿಂದಾಗಿ ಎಲ್ಲ ಪರೀಕ್ಷೆಗಳನ್ನೂ ದ್ವೀಪರಾಷ್ಟ್ರ ಶ್ರೀಲಂಕಾ ಅನಿರ್ದಿಷ್ಟಾವಧಿಗೆ ರದ್ದುಪಡಿಸಿದೆ. ಇದು ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗಿದೆ.
  5. ವಿದೇಶಿ ಮೀಸಲು ನಿಧಿಯು ಅಪಾಯಕಾರಿ ಮಟ್ಟಕ್ಕೆ ಕುಸಿದಿರುವುದೇ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ಮುಖ್ಯ ಕಾರಣ. ಇದರಿಂದಾಗಿ ವ್ಯಾಪಾರಿಗಳು ಇತರ ದೇಶಗಳಿಂದ ಆಮದು ಮಾಡಿಕೊಂಡ ಉತ್ಪನ್ನಗಳಿಗೆ ಹಣ ಪಾವತಿ ಮಾಡಲು ಆಗುತ್ತಿಲ್ಲ. ದೇಶದ ಪ್ರಮುಖ ಆರ್ಥಿಕ ಮೂಲವಾಗಿರುವ ಪ್ರವಾಸೋದ್ಯಮ ವಲಯವು ಕೊವಿಡ್ ಕಾರಣದಿಂದ ತೀವ್ರ ಹಿನ್ನಡೆ ಅನುಭವಿಸಿತ್ತು. ಮೂಲಸೌಕರ್ಯ ಯೋಜನೆಗಳಿಗೆ ಹಣ ಹೊಂದಿಸಲು ಚೀನಾದಿಂದ ದೊಡ್ಡಮಟ್ಟದಲ್ಲಿ ಸಾಲ ಪಡೆದುಕೊಂಡಿದ್ದು ಸಹ ಶ್ರೀಲಂಕಾದ ಇಂದಿನ ಬಿಕ್ಕಟ್ಟಿಗೆ ಮುಖ್ಯ ಕಾರಣವಾಗಿದೆ.
  6. ಈಸ್ಟರ್ ಹಬ್ಬದ ವೇಳೆ 2019ರಲ್ಲಿ ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಸರಣಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಅಲ್ಲಿಂದಾಚೆಗೆ ಶ್ರೀಲಂಕಾಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಯಿತು. ಕೊವಿಡ್ ಪಿಡುಗು ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿತು.
  7. ಅತ್ಯಗತ್ಯ ವಸ್ತುಗಳಿಗಾಗಿ ಶ್ರೀಲಂಕಾ ವಿದೇಶಗಳನ್ನು ಅವಲಂಬಿಸಿದೆ. ಸ್ವಾವಲಂಬನೆಗೆ ಕ್ರಮ ತೆಗೆದುಕೊಳ್ಳದಿರುವುದೂ ಸಹ ಇಂದಿನ ಬಿಕ್ಕಟ್ಟಿಗೆ ಕಾರಣ. ಸಕ್ಕರೆ, ಧಾನ್ಯಗಳು, ಬೇಳೆಕಾಳುಗಳು ಮತ್ತು ಔಷಧಿಗಳನ್ನೂ ಶ್ರೀಲಂಕಾ ಇತರ ದೇಶಗಳಿಂದ ತರಿಸಿಕೊಳ್ಳುತ್ತಿದೆ. ವಿದೇಶಿ ಮೀಸಲು ನಿಧಿಯ ಮೇಲಿನ ಒತ್ತಡ ಹೆಚ್ಚಾಗಲು ಈ ಅಂಶವೂ ಮುಖ್ಯ ಕಾರಣ ಎನಿಸಿದೆ.
  8. ಚೀನಾದಿಂದ ಶ್ರೀಲಂಕಾ ದೊಡ್ಡಮಟ್ಟದಲ್ಲಿ ಸಾಲ ಪಡೆದುಕೊಂಡಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಂಭವಿಸಿದ ಆರ್ಥಿಕ ಹಿಂಜರಿತದಿಂದಾಗಿ ದೇಶ ಬಿಕ್ಕಟ್ಟಿಲ್ಲಿದೆ. ಈ ಸಾಲದ ಮರುಪಾವತಿ ಅವಧಿಯನ್ನು ಮರುಹೊಂದಾಣಿಕೆ ಮಾಡಿಕೊಡುವಂತೆ ಶ್ರೀಲಂಕಾ ಸರ್ಕಾರ ಚೀನಾ ಸರ್ಕಾರವನ್ನು ವಿನಂತಿಸಿತ್ತು. ಆದರೆ ಈ ಬೇಡಿಕೆಗೆ ಚೀನಾ ಒಪ್ಪಿರಲಿಲ್ಲ.
  9. ಭಾರತ ಸರ್ಕಾರವು ಶ್ರೀಲಂಕಾಕ್ಕೆ 1 ಶತಕೋಟಿ ಅಮೆರಿಕನ್ ಡಾಲರ್ ಮೊತ್ತದ ಸಾಲದ ನೆರವು ಘೋಷಿಸಿತ್ತು. ಈ ಹಣವನ್ನು ಆಹಾರ, ಔಷಧ ಮತ್ತು ಇತರ ಅತ್ಯಗತ್ಯ ವಸ್ತುಗಳ ಖರೀದಿಗೆ ಬಳಸಬೇಕು ಎಂದು ಸೂಚಿಸಿತ್ತು. ಶ್ರೀಲಂಕಾದ ಹಣಕಾಸು ಸಚಿವರ ವಿನಂತಿ ಮೇಲೆಗೆ 5 ಕೋಟಿ ಅಮೆರಿಕನ್ ಡಾಲರ್ ಸಾಲವನ್ನು ಪೆಟ್ರೋಲಿಯಂ ಉತ್ಪನ್ನಗಳ ಖರೀದಿಗಾಗಿ ಹೆಚ್ಚುವರಿಯಾಗಿ ನೀಡಿತು.
  10. ಬಿಕ್ಕಟ್ಟಿನಿಂದ ಹೊರಬರಲು ವಿಶ್ವ ಹಣಕಾಸು ನಿಧಿಯ ಸಹಾಯ ಕೋರುವುದಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಹೇಳಿದ್ದಾರೆ. ಸಾಲ ಮರುಪಾವತಿಗಾಗಿ ಶ್ರೀಲಂಕಾಕ್ಕೆ ಈ ವರ್ಷ 6.9 ಶತಕೋಟಿ ರೂಪಾಯಿ ಮೊತ್ತದಷ್ಟು ಹಣ ಬೇಕಿದೆ. ಈ ಮೊತ್ತವನ್ನು ಮರುಹೊಂದಾಣಿಕೆ ಮಾಡಿಕೊಡಲು ಅಧ್ಯಕ್ಷ ಗೊಟಬಯ ರಾಜಪಕ್ಸ ವಿನಂತಿಸಿದ್ದಾರೆ.

ಇದನ್ನೂ ಓದಿ: ಮುದ್ರಣ ಕಾಗದದ ಕೊರತೆ: ಲಕ್ಷಾಂತರ ಶಾಲಾ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ

ಇದನ್ನೂ ಓದಿ: State Bank Of India: ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದಿಂದ ಶ್ರೀಲಂಕಾಗೆ 7613 ಕೋಟಿ ರೂಪಾಯಿ ಸಾಲ

16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!