ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಗಮನಿಸುವಂತೆ ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ ಮತ್ತು ಪಿಪಿಪಿಯ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್
ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ
Follow us
| Updated By: Digi Tech Desk

Updated on:Jun 10, 2021 | 2:52 PM

ಸುದ್ದಿ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಆಪ್ತೆ, ಪಿಟಿಐ ಪಕ್ಷದ ಮಹಿಳಾ ನಾಯಕಿ ಫಿರ್ದೋಸ್​ ಅವರು ಪಿಪಿಪಿ ಪಕ್ಷದ ಸಂಸದ ಖಾದಿರ್​ ಖಾನ್​ ಮಂಡೋಖೇಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟಿವಿ ಕಾರ್ಯಕ್ರಮದಲ್ಲಿ ಫಿರ್ದೋಸ್​ ತುಂಬಾ ಕೋಪಗೊಂಡು ಸಂಸದರ ಕಾಲರ್​ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಸುದ್ದಿ ವಾಹಿನಿಯ ಆ್ಯಂಕರ್​ ಮುಂದೆಯೇ ನಡೆದಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಇಮ್ರಾನ್ ಖಾನ್ ಆಪ್ತೆ ಫಿರ್ದೋಸ್​ ಮತ್ತು ಪಿಪಿಪಿ ಪಕ್ಷದ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಘಟನೆ ವೈರಲ್​ ಆದ ಬಳಿಕ ಫಿರ್ದೋಸ್​ ಖಾನ್​ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಒಂದು ಭಾಗ ಮಾತ್ರ ಬಿಡುಗಡೆಯಾಗಿದೆ. ಸಂಪೂರ್ಣ ವಿಡಿಯೋವನ್ನೂ ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ನಾವಿಬ್ಬರೂ ಕುಳಿತಿದ್ದೆವು. ಪಿಪಿಪಿಯ ಖಾದಿರ್​ ಮಂಡೋಖೇಲ್​ ನನಗೆ ಬೆದರಿಕೆ ಹಾಕಿದರು. ನನ್ನ ತೀರಿಹೋದ ತಂದೆ ಮತ್ತು ನನ್ನ ಬಗ್ಗೆ ಕೆಟ್ಟ  ಭಾಷೆಗ ಬಳಸಿ ಅವಮಾನಿಸಿದರು. ನನ್ನ ರಕ್ಷಣೆಗಾಗಿ ನಾನು ಮುಂದಿನ ಹೆಜ್ಜೆ ಇಡಲೇಬೇಕಾಯಿತು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

Throwback! ಪಾಕಿಸ್ತಾನದ ವಿರುದ್ಧ ವೀರೂ ದಾದಾ ಎರಡೇ ಎರಡು ಬಾಲ್​ನಲ್ಲಿ 21 ರನ್ ಚಚ್ಚಿದ್ದು ಹೇಗೆ ಅಂತೀರಾ…?

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 1:42 pm, Thu, 10 June 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?