AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಗಮನಿಸುವಂತೆ ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ ಮತ್ತು ಪಿಪಿಪಿಯ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್
ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ
TV9 Web
| Edited By: |

Updated on:Jun 10, 2021 | 2:52 PM

Share

ಸುದ್ದಿ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಆಪ್ತೆ, ಪಿಟಿಐ ಪಕ್ಷದ ಮಹಿಳಾ ನಾಯಕಿ ಫಿರ್ದೋಸ್​ ಅವರು ಪಿಪಿಪಿ ಪಕ್ಷದ ಸಂಸದ ಖಾದಿರ್​ ಖಾನ್​ ಮಂಡೋಖೇಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟಿವಿ ಕಾರ್ಯಕ್ರಮದಲ್ಲಿ ಫಿರ್ದೋಸ್​ ತುಂಬಾ ಕೋಪಗೊಂಡು ಸಂಸದರ ಕಾಲರ್​ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಸುದ್ದಿ ವಾಹಿನಿಯ ಆ್ಯಂಕರ್​ ಮುಂದೆಯೇ ನಡೆದಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಇಮ್ರಾನ್ ಖಾನ್ ಆಪ್ತೆ ಫಿರ್ದೋಸ್​ ಮತ್ತು ಪಿಪಿಪಿ ಪಕ್ಷದ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಘಟನೆ ವೈರಲ್​ ಆದ ಬಳಿಕ ಫಿರ್ದೋಸ್​ ಖಾನ್​ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಒಂದು ಭಾಗ ಮಾತ್ರ ಬಿಡುಗಡೆಯಾಗಿದೆ. ಸಂಪೂರ್ಣ ವಿಡಿಯೋವನ್ನೂ ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ನಾವಿಬ್ಬರೂ ಕುಳಿತಿದ್ದೆವು. ಪಿಪಿಪಿಯ ಖಾದಿರ್​ ಮಂಡೋಖೇಲ್​ ನನಗೆ ಬೆದರಿಕೆ ಹಾಕಿದರು. ನನ್ನ ತೀರಿಹೋದ ತಂದೆ ಮತ್ತು ನನ್ನ ಬಗ್ಗೆ ಕೆಟ್ಟ  ಭಾಷೆಗ ಬಳಸಿ ಅವಮಾನಿಸಿದರು. ನನ್ನ ರಕ್ಷಣೆಗಾಗಿ ನಾನು ಮುಂದಿನ ಹೆಜ್ಜೆ ಇಡಲೇಬೇಕಾಯಿತು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

Throwback! ಪಾಕಿಸ್ತಾನದ ವಿರುದ್ಧ ವೀರೂ ದಾದಾ ಎರಡೇ ಎರಡು ಬಾಲ್​ನಲ್ಲಿ 21 ರನ್ ಚಚ್ಚಿದ್ದು ಹೇಗೆ ಅಂತೀರಾ…?

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 1:42 pm, Thu, 10 June 21

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​