AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

Taiwan Fire Accident: 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ತೈವಾನ್​ನಲ್ಲಿ ನಡೆದ ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ
ತೈವಾನ್​ನಲ್ಲಿ ಅಗ್ನಿ ಅವಘಡ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 14, 2021 | 5:48 PM

Share

ತೈವಾನ್: ದಕ್ಷಿಣ ತೈವಾನ್‌ನ ನಗರವಾದ ಕಾಹೊಹ್‌ಸ್ಯುಂಗ್​ನಲ್ಲಿ ನಿನ್ನೆ ರಾತ್ರಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ್ದು, 46 ಜನರು ಸಾವನ್ನಪ್ಪಿದ್ದಾರೆ. 13 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಗ್ನಿ ದುರಂತದಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವ ಮುನ್ನ ಅನೇಕ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.

13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಬಹುತೇಕರು 7ನೇ ಮಹಡಿಯಲ್ಲಿ ವಾಸವಾಗಿದ್ದವರು. ಈ ಮಹಡಿಯಲ್ಲಿ ಸಾಕಷ್ಟು ಬಾಡಿಗೆ ಮನೆಗಳಿದ್ದು, ರಾತ್ರಿ ಎಲ್ಲರೂ ನಿದ್ರೆ ಮಾಡುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಉಳಿದ ಮಹಡಿಗಳಲ್ಲಿ ಕಮರ್ಷಿಯಲ್ ಅಂಗಡಿಗಳು ಕೂಡ ಇದ್ದು, ಹೆಚ್ಚೇನೂ ಅನಾಹುತಗಳು ಸಂಭವಿಸಿಲ್ಲ. ಮೊದಲ 5 ಮಹಡಿಗಳನ್ನು ಕಮರ್ಷಿಯಲ್ ಬಳಕೆಗೆ ನೀಡಲಾಗಿತ್ತು. ರಾತ್ರಿಯ ವೇಲೆ ಎಲ್ಲರೂ ಮನೆಗೆ ತೆರಳಿದ್ದರಿಂದ ಆ ಮಹಡಿಗಳಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿ ಆರ್ಥಿಕ ನಷ್ಟ ಮಾತ್ರ ಸಂಭವಿಸಿದೆ. ಅಲ್ಲಿ ಪ್ರಾಣಹಾನಿಯೇನೂ ಆಗಿಲ್ಲ.

ಇದನ್ನೂ ಓದಿ: ಮುಂಬೈನ ಕುರ್ಲಾದಲ್ಲಿ ಅಗ್ನಿ ಅವಘಡ: 20 ದ್ವಿಚಕ್ರವಾಹನಗಳು ಸುಟ್ಟು ಭಸ್ಮ

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

Published On - 5:46 pm, Thu, 14 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?