AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

Taiwan Fire Accident: 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ತೈವಾನ್​ನಲ್ಲಿ ನಡೆದ ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ
ತೈವಾನ್​ನಲ್ಲಿ ಅಗ್ನಿ ಅವಘಡ
TV9 Web
| Edited By: |

Updated on:Oct 14, 2021 | 5:48 PM

Share

ತೈವಾನ್: ದಕ್ಷಿಣ ತೈವಾನ್‌ನ ನಗರವಾದ ಕಾಹೊಹ್‌ಸ್ಯುಂಗ್​ನಲ್ಲಿ ನಿನ್ನೆ ರಾತ್ರಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ್ದು, 46 ಜನರು ಸಾವನ್ನಪ್ಪಿದ್ದಾರೆ. 13 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಗ್ನಿ ದುರಂತದಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವ ಮುನ್ನ ಅನೇಕ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.

13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಬಹುತೇಕರು 7ನೇ ಮಹಡಿಯಲ್ಲಿ ವಾಸವಾಗಿದ್ದವರು. ಈ ಮಹಡಿಯಲ್ಲಿ ಸಾಕಷ್ಟು ಬಾಡಿಗೆ ಮನೆಗಳಿದ್ದು, ರಾತ್ರಿ ಎಲ್ಲರೂ ನಿದ್ರೆ ಮಾಡುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಉಳಿದ ಮಹಡಿಗಳಲ್ಲಿ ಕಮರ್ಷಿಯಲ್ ಅಂಗಡಿಗಳು ಕೂಡ ಇದ್ದು, ಹೆಚ್ಚೇನೂ ಅನಾಹುತಗಳು ಸಂಭವಿಸಿಲ್ಲ. ಮೊದಲ 5 ಮಹಡಿಗಳನ್ನು ಕಮರ್ಷಿಯಲ್ ಬಳಕೆಗೆ ನೀಡಲಾಗಿತ್ತು. ರಾತ್ರಿಯ ವೇಲೆ ಎಲ್ಲರೂ ಮನೆಗೆ ತೆರಳಿದ್ದರಿಂದ ಆ ಮಹಡಿಗಳಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿ ಆರ್ಥಿಕ ನಷ್ಟ ಮಾತ್ರ ಸಂಭವಿಸಿದೆ. ಅಲ್ಲಿ ಪ್ರಾಣಹಾನಿಯೇನೂ ಆಗಿಲ್ಲ.

ಇದನ್ನೂ ಓದಿ: ಮುಂಬೈನ ಕುರ್ಲಾದಲ್ಲಿ ಅಗ್ನಿ ಅವಘಡ: 20 ದ್ವಿಚಕ್ರವಾಹನಗಳು ಸುಟ್ಟು ಭಸ್ಮ

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

Published On - 5:46 pm, Thu, 14 October 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್