AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

Taiwan Fire Accident: 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ತೈವಾನ್​ನಲ್ಲಿ ನಡೆದ ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ
ತೈವಾನ್​ನಲ್ಲಿ ಅಗ್ನಿ ಅವಘಡ
TV9 Web
| Edited By: |

Updated on:Oct 14, 2021 | 5:48 PM

Share

ತೈವಾನ್: ದಕ್ಷಿಣ ತೈವಾನ್‌ನ ನಗರವಾದ ಕಾಹೊಹ್‌ಸ್ಯುಂಗ್​ನಲ್ಲಿ ನಿನ್ನೆ ರಾತ್ರಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ್ದು, 46 ಜನರು ಸಾವನ್ನಪ್ಪಿದ್ದಾರೆ. 13 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಗ್ನಿ ದುರಂತದಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವ ಮುನ್ನ ಅನೇಕ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.

13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಬಹುತೇಕರು 7ನೇ ಮಹಡಿಯಲ್ಲಿ ವಾಸವಾಗಿದ್ದವರು. ಈ ಮಹಡಿಯಲ್ಲಿ ಸಾಕಷ್ಟು ಬಾಡಿಗೆ ಮನೆಗಳಿದ್ದು, ರಾತ್ರಿ ಎಲ್ಲರೂ ನಿದ್ರೆ ಮಾಡುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಉಳಿದ ಮಹಡಿಗಳಲ್ಲಿ ಕಮರ್ಷಿಯಲ್ ಅಂಗಡಿಗಳು ಕೂಡ ಇದ್ದು, ಹೆಚ್ಚೇನೂ ಅನಾಹುತಗಳು ಸಂಭವಿಸಿಲ್ಲ. ಮೊದಲ 5 ಮಹಡಿಗಳನ್ನು ಕಮರ್ಷಿಯಲ್ ಬಳಕೆಗೆ ನೀಡಲಾಗಿತ್ತು. ರಾತ್ರಿಯ ವೇಲೆ ಎಲ್ಲರೂ ಮನೆಗೆ ತೆರಳಿದ್ದರಿಂದ ಆ ಮಹಡಿಗಳಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿ ಆರ್ಥಿಕ ನಷ್ಟ ಮಾತ್ರ ಸಂಭವಿಸಿದೆ. ಅಲ್ಲಿ ಪ್ರಾಣಹಾನಿಯೇನೂ ಆಗಿಲ್ಲ.

ಇದನ್ನೂ ಓದಿ: ಮುಂಬೈನ ಕುರ್ಲಾದಲ್ಲಿ ಅಗ್ನಿ ಅವಘಡ: 20 ದ್ವಿಚಕ್ರವಾಹನಗಳು ಸುಟ್ಟು ಭಸ್ಮ

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

Published On - 5:46 pm, Thu, 14 October 21

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ