AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ

ಬ್ರೆಜಿಲ್​ನ ಪ್ಯಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಒಂಬತ್ತು ಮಂದಿ ಸಜೀವ ದಹನಗೊಂಡಿದ್ದಾರೆ. ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಏಳು ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ
ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Dec 11, 2023 | 7:23 AM

Share

ಸಾವೊ ಪಾಲೊ, ಡಿ.11: ಬ್ರೆಜಿಲ್‌ನ (Brazil) ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್‌ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಒಂಬತ್ತು ಮಂದಿ ಸಜೀವ ದಹನರಾಗಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಎಂಎಸ್‌ಟಿ ಪ್ರಕಾರ, ಪಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಇಂಟರ್ನೆಟ್ ವೈರಿಂಗ್ ಕಾಮಗಾರಿ ವೇಳೆ ಶಾರ್ಟ್ ಸರ್ಕ್ಯೂಟ್‌ ಆಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳೀಯ ಕಾಲಮಾನದ ಪ್ರಕಾರ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಂಟೆನಾವು ಹೈ-ವೋಲ್ಟೇಜ್ ನೆಟ್‌ವರ್ಕ್‌ಗೆ ತಗುಲಿದಾಗ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕೆಲವು ಗುಡಿಸಲುಗಳಿಗೆ ಬೆಂಕಿ ತಗುಲಿದೆ.

ಇದನ್ನೂ ಓದಿ: ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಘಟನೆಯಲ್ಲಿ ಮೃತಪಟ್ಟ ಒಂಬತ್ತು ಮಂದಿಯಲ್ಲಿ ಆರು ಮಂದಿ ಶಿಬಿರದಲ್ಲಿದ್ದವರಾಗಿದ್ದು, ಉಳಿದ ಮೂವರು ಇಂಟರ್ನೆಟ್ ಕಂಪನಿಯ ಉದ್ಯೋಗಿಗಳಾಗಿದ್ದಾರೆ. ಎಂಟು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ