AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ

ಬ್ರೆಜಿಲ್​ನ ಪ್ಯಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಒಂಬತ್ತು ಮಂದಿ ಸಜೀವ ದಹನಗೊಂಡಿದ್ದಾರೆ. ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಏಳು ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ
ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 11, 2023 | 7:23 AM

Share

ಸಾವೊ ಪಾಲೊ, ಡಿ.11: ಬ್ರೆಜಿಲ್‌ನ (Brazil) ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್‌ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಒಂಬತ್ತು ಮಂದಿ ಸಜೀವ ದಹನರಾಗಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಎಂಎಸ್‌ಟಿ ಪ್ರಕಾರ, ಪಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಇಂಟರ್ನೆಟ್ ವೈರಿಂಗ್ ಕಾಮಗಾರಿ ವೇಳೆ ಶಾರ್ಟ್ ಸರ್ಕ್ಯೂಟ್‌ ಆಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳೀಯ ಕಾಲಮಾನದ ಪ್ರಕಾರ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಂಟೆನಾವು ಹೈ-ವೋಲ್ಟೇಜ್ ನೆಟ್‌ವರ್ಕ್‌ಗೆ ತಗುಲಿದಾಗ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕೆಲವು ಗುಡಿಸಲುಗಳಿಗೆ ಬೆಂಕಿ ತಗುಲಿದೆ.

ಇದನ್ನೂ ಓದಿ: ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಘಟನೆಯಲ್ಲಿ ಮೃತಪಟ್ಟ ಒಂಬತ್ತು ಮಂದಿಯಲ್ಲಿ ಆರು ಮಂದಿ ಶಿಬಿರದಲ್ಲಿದ್ದವರಾಗಿದ್ದು, ಉಳಿದ ಮೂವರು ಇಂಟರ್ನೆಟ್ ಕಂಪನಿಯ ಉದ್ಯೋಗಿಗಳಾಗಿದ್ದಾರೆ. ಎಂಟು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!