Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ

ಬ್ರೆಜಿಲ್​ನ ಪ್ಯಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಒಂಬತ್ತು ಮಂದಿ ಸಜೀವ ದಹನಗೊಂಡಿದ್ದಾರೆ. ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಏಳು ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

Brazil Fire Accident: ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ
ಬ್ರೆಜಿಲ್​ನಲ್ಲಿ ಬೆಂಕಿ ಅವಘಡ, ಒಂಬತ್ತು ಮಂದಿ ಸಜೀವ ದಹನ, ಎಂಟು ಮಂದಿಗೆ ಗಾಯ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Dec 11, 2023 | 7:23 AM

ಸಾವೊ ಪಾಲೊ, ಡಿ.11: ಬ್ರೆಜಿಲ್‌ನ (Brazil) ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್‌ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಒಂಬತ್ತು ಮಂದಿ ಸಜೀವ ದಹನರಾಗಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಎಂಎಸ್‌ಟಿ ಪ್ರಕಾರ, ಪಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಇಂಟರ್ನೆಟ್ ವೈರಿಂಗ್ ಕಾಮಗಾರಿ ವೇಳೆ ಶಾರ್ಟ್ ಸರ್ಕ್ಯೂಟ್‌ ಆಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳೀಯ ಕಾಲಮಾನದ ಪ್ರಕಾರ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಂಟೆನಾವು ಹೈ-ವೋಲ್ಟೇಜ್ ನೆಟ್‌ವರ್ಕ್‌ಗೆ ತಗುಲಿದಾಗ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕೆಲವು ಗುಡಿಸಲುಗಳಿಗೆ ಬೆಂಕಿ ತಗುಲಿದೆ.

ಇದನ್ನೂ ಓದಿ: ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಘಟನೆಯಲ್ಲಿ ಮೃತಪಟ್ಟ ಒಂಬತ್ತು ಮಂದಿಯಲ್ಲಿ ಆರು ಮಂದಿ ಶಿಬಿರದಲ್ಲಿದ್ದವರಾಗಿದ್ದು, ಉಳಿದ ಮೂವರು ಇಂಟರ್ನೆಟ್ ಕಂಪನಿಯ ಉದ್ಯೋಗಿಗಳಾಗಿದ್ದಾರೆ. ಎಂಟು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು
ವಿಶೇಷ ನ್ಯಾಯಾಲಯದ ಮುಂದೆ ಸೂರಜ್ ರೇವಣ್ಣನನ್ನು ಹಾಜರುಪಡಿಸಿದ ಪೊಲೀಸ್​
ವಿಶೇಷ ನ್ಯಾಯಾಲಯದ ಮುಂದೆ ಸೂರಜ್ ರೇವಣ್ಣನನ್ನು ಹಾಜರುಪಡಿಸಿದ ಪೊಲೀಸ್​
ಸಂವಿಧಾನದ ಬಗ್ಗೆ ಮಾತಾಡಿ ಅನಂತಕುಮಾರ್ ಹೆಗಡೆ ಭಾರೀ ಬೆಲೆ ತೆತ್ತರು:ಬೆಲ್ಲದ್
ಸಂವಿಧಾನದ ಬಗ್ಗೆ ಮಾತಾಡಿ ಅನಂತಕುಮಾರ್ ಹೆಗಡೆ ಭಾರೀ ಬೆಲೆ ತೆತ್ತರು:ಬೆಲ್ಲದ್
ವಿಜಯೇಂದ್ರ ಮತ್ತು ಯತೀಂದ್ರ ಸಿದ್ದರಾಮಯ್ಯರನ್ನು ಒಂದೇ ವೇದಿಕೆ ನೋಡಿದ್ದೀರಾ?
ವಿಜಯೇಂದ್ರ ಮತ್ತು ಯತೀಂದ್ರ ಸಿದ್ದರಾಮಯ್ಯರನ್ನು ಒಂದೇ ವೇದಿಕೆ ನೋಡಿದ್ದೀರಾ?
ಚನ್ನಪಟ್ಟಣ ಅಸೆಂಬ್ಲಿ ಉಪ ಚುನಾವಣೆ ಅಭ್ಯರ್ಥಿ; ಕುಮಾರಸ್ವಾಮಿ ಜಾಣ್ಮೆಯ ಉತ್ತರ
ಚನ್ನಪಟ್ಟಣ ಅಸೆಂಬ್ಲಿ ಉಪ ಚುನಾವಣೆ ಅಭ್ಯರ್ಥಿ; ಕುಮಾರಸ್ವಾಮಿ ಜಾಣ್ಮೆಯ ಉತ್ತರ
ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲು ಹೊರಗೆ ಕಾದಿರುವ ಅಭಿಮಾನಿಗಳು
ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲು ಹೊರಗೆ ಕಾದಿರುವ ಅಭಿಮಾನಿಗಳು
ಸೂರಜ್​ನನ್ನು ಬೆಂಗಳೂರಿಗೆ ಕರೆತಂದ ಪೊಲೀಸ್, ಸಂಜೆ ನ್ಯಾಯಾಲಯದ ಮುಂದೆ ಹಾಜರು
ಸೂರಜ್​ನನ್ನು ಬೆಂಗಳೂರಿಗೆ ಕರೆತಂದ ಪೊಲೀಸ್, ಸಂಜೆ ನ್ಯಾಯಾಲಯದ ಮುಂದೆ ಹಾಜರು
ಅಂಬರೀಶ್ ಇದ್ದಿದ್ರೆ ದರ್ಶನ್ ಕಪಾಳಕ್ಕೆ ಹೊಡೆಯುತ್ತಿದ್ರು: ಓಂ ಪ್ರಕಾಶ್ ರಾವ್
ಅಂಬರೀಶ್ ಇದ್ದಿದ್ರೆ ದರ್ಶನ್ ಕಪಾಳಕ್ಕೆ ಹೊಡೆಯುತ್ತಿದ್ರು: ಓಂ ಪ್ರಕಾಶ್ ರಾವ್
ಮಕ್ಕಳು-ಪಾಲಕರ ನಡುವೆ ಸಂವಾದ ಕಡಿಮೆಯಾಗುತ್ತಿರೋದು ಆತಂಕಕಾರಿ ವಿಷಯ: ಐಶ್ವರ್ಯ
ಮಕ್ಕಳು-ಪಾಲಕರ ನಡುವೆ ಸಂವಾದ ಕಡಿಮೆಯಾಗುತ್ತಿರೋದು ಆತಂಕಕಾರಿ ವಿಷಯ: ಐಶ್ವರ್ಯ
ಕೊಡಗಿನಲ್ಲಿ‌ ಪ್ರವಾಸಿಗರ ಮೇಲೆ‌ ಹಲ್ಲೆ; ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿಸೆರೆ
ಕೊಡಗಿನಲ್ಲಿ‌ ಪ್ರವಾಸಿಗರ ಮೇಲೆ‌ ಹಲ್ಲೆ; ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿಸೆರೆ