AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ

ಈಶಾನ್ಯ ಚೀನಾದಲ್ಲಿನ ರೆಸ್ಟೋರೆಂಟ್​ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ
ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡImage Credit source: Twitter
TV9 Web
| Edited By: |

Updated on:Sep 28, 2022 | 3:27 PM

Share

ಬೀಜಿಂಗ್: ಈಶಾನ್ಯ ಚೀನಾದಲ್ಲಿನ (northeastern China) ರೆಸ್ಟೋರೆಂಟ್​ನಲ್ಲಿ(restaurant) ಬುಧವಾರ ಭಾರೀ ಅಗ್ನಿ ಅವಘಡ (Fire) ಸಂಭವಿಸಿದ್ದು 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಮಧ್ಯಾಹ್ನ 12.40ಕ್ಕೆ ಇಲ್ಲಿನ ಚಾಂಗ್​ಚುನ್ ನಗರದ ರೆಸ್ಟೋರೆಂಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸ್ಥಳೀಯ ಸರ್ಕಾರ ವೈಬೊ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಅಗ್ನಿಶಾಮಕ ದಳದ ವಾಹನಗಳು  ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ  ಮತ್ತು ರಕ್ಷಣಾ ಕಾರ್ಯವನ್ನು 3 ಗಂಟೆಗೆ ಮುಗಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.  ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಆವರ ಆರೈಕೆ ಮಾಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ. ಈ ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚೀನಾದಲ್ಲಿ ಆಗಾಗ್ಗೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಈ ತಿಂಗಳ ಆರಂಭದಲ್ಲಿ, ಕೇಂದ್ರ ನಗರವಾದ ಚಾಂಗ್ಶಾದಲ್ಲಿ ಭಾರಿ ಬೆಂಕಿಯು ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ ಗಗನಚುಂಬಿ ಕಟ್ಟಡದಲ್ಲಿ ಕಾಣಿಸಿಕೊಂಡಿತು. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಕಳೆದ ವರ್ಷ ಜುಲೈನಲ್ಲಿ, ಈಶಾನ್ಯ ಜಿಲಿನ್ ಪ್ರಾಂತ್ಯದಲ್ಲಿ ಗೋದಾಮಿನಲ್ಲಿ  ಬೆಂಕಿಹೊತ್ತಿಕೊಂಡಿದ್ದು 15 ಜನರು ಸಾವನ್ನಪ್ಪಿದರು ಮತ್ತು 25 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಅದಕ್ಕೂ ಒಂದು ತಿಂಗಳ ಮೊದಲು, ಮಧ್ಯ ಹೆನಾನ್ ಪ್ರಾಂತ್ಯದ ಸಮರ ಕಲೆಗಳ ಶಾಲೆಯಲ್ಲಿ ಸಂಭವಿಸಿದ  ಬೆಂಕಿ ಅನಾಹುತದಲ್ಲಿ ಮಕ್ಕಳು ಸೇರಿದಂತೆ 18 ಮಂದಿ ಸಾವಿಗೀಡಾಗಿದ್ದರು.

Published On - 3:02 pm, Wed, 28 September 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ