AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ

ಈಶಾನ್ಯ ಚೀನಾದಲ್ಲಿನ ರೆಸ್ಟೋರೆಂಟ್​ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ
ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡImage Credit source: Twitter
TV9 Web
| Edited By: |

Updated on:Sep 28, 2022 | 3:27 PM

Share

ಬೀಜಿಂಗ್: ಈಶಾನ್ಯ ಚೀನಾದಲ್ಲಿನ (northeastern China) ರೆಸ್ಟೋರೆಂಟ್​ನಲ್ಲಿ(restaurant) ಬುಧವಾರ ಭಾರೀ ಅಗ್ನಿ ಅವಘಡ (Fire) ಸಂಭವಿಸಿದ್ದು 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಮಧ್ಯಾಹ್ನ 12.40ಕ್ಕೆ ಇಲ್ಲಿನ ಚಾಂಗ್​ಚುನ್ ನಗರದ ರೆಸ್ಟೋರೆಂಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸ್ಥಳೀಯ ಸರ್ಕಾರ ವೈಬೊ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಅಗ್ನಿಶಾಮಕ ದಳದ ವಾಹನಗಳು  ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ  ಮತ್ತು ರಕ್ಷಣಾ ಕಾರ್ಯವನ್ನು 3 ಗಂಟೆಗೆ ಮುಗಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.  ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಆವರ ಆರೈಕೆ ಮಾಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ. ಈ ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚೀನಾದಲ್ಲಿ ಆಗಾಗ್ಗೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಈ ತಿಂಗಳ ಆರಂಭದಲ್ಲಿ, ಕೇಂದ್ರ ನಗರವಾದ ಚಾಂಗ್ಶಾದಲ್ಲಿ ಭಾರಿ ಬೆಂಕಿಯು ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ ಗಗನಚುಂಬಿ ಕಟ್ಟಡದಲ್ಲಿ ಕಾಣಿಸಿಕೊಂಡಿತು. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಕಳೆದ ವರ್ಷ ಜುಲೈನಲ್ಲಿ, ಈಶಾನ್ಯ ಜಿಲಿನ್ ಪ್ರಾಂತ್ಯದಲ್ಲಿ ಗೋದಾಮಿನಲ್ಲಿ  ಬೆಂಕಿಹೊತ್ತಿಕೊಂಡಿದ್ದು 15 ಜನರು ಸಾವನ್ನಪ್ಪಿದರು ಮತ್ತು 25 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಅದಕ್ಕೂ ಒಂದು ತಿಂಗಳ ಮೊದಲು, ಮಧ್ಯ ಹೆನಾನ್ ಪ್ರಾಂತ್ಯದ ಸಮರ ಕಲೆಗಳ ಶಾಲೆಯಲ್ಲಿ ಸಂಭವಿಸಿದ  ಬೆಂಕಿ ಅನಾಹುತದಲ್ಲಿ ಮಕ್ಕಳು ಸೇರಿದಂತೆ 18 ಮಂದಿ ಸಾವಿಗೀಡಾಗಿದ್ದರು.

Published On - 3:02 pm, Wed, 28 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್