Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan: ಜಪಾನ್​ನ ಒಸಾಕಾದಲ್ಲಿ ಅಗ್ನಿ ದುರಂತ; 27 ಜನರ ದುರ್ಮರಣ

Building fire in Osaka: ಜಪಾನ್​ನ ಒಸಾಕಾದ ಕಟ್ಟಡವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. 27 ಜನರು ದುರ್ಮರಣಕ್ಕೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

Japan: ಜಪಾನ್​ನ ಒಸಾಕಾದಲ್ಲಿ ಅಗ್ನಿ ದುರಂತ; 27 ಜನರ ದುರ್ಮರಣ
ಜಪಾನ್​ನ ಒಸಾಕಾದಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು (ಚಿತ್ರ: ಎಪಿ)
Follow us
TV9 Web
| Updated By: shivaprasad.hs

Updated on:Dec 17, 2021 | 10:07 AM

ಟೋಕಿಯೊ: ಜಪಾನ್‌ನ (Japan) ಒಸಾಕಾ ಜಿಲ್ಲೆಯ (Osaka) ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ (ಡಿಸೆಂಬರ್ 17) ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಬೆಂಕಿಯನ್ನು ನಂದಿಸಿದ ನಂತರ ಎಂಟು ಅಂತಸ್ತಿನ ಕಟ್ಟಡದ ಒಳಗೆ ಮತ್ತು ಹೊರಗೆ ಹತ್ತಾರು ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡುತ್ತಿರುವುದನ್ನು ಟಿವಿ ದೃಶ್ಯಾವಳಿಗಳು ತೋರಿಸಿವೆ. ಬೆಂಕಿಗೆ ಆಹುತಿಯಾದ ಮಹಡಿಯು ಮಾನಸಿಕ ಆರೋಗ್ಯ ಸೇವೆಗಳು ಮತ್ತು ಸಾಮಾನ್ಯ ವೈದ್ಯಕೀಯ ಆರೈಕೆಯನ್ನು ಒದಗಿಸುವ ಕ್ಲಿನಿಕ್ ಅನ್ನು ಹೊಂದಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಒಸಾಕಾ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎಫ್‌ಪಿಗೆ ಈ ಕುರಿತು ಮಾಹಿತಿ ನೀಡಿ, ‘‘ದುರಂತದಲ್ಲಿ ಒಟ್ಟು 28 ಮಂದಿ ಸಿಲುಕಿದ್ದರು. ಅವರಲ್ಲಿ 27 ಜನರು ಮೃತಪಟ್ಟಿದ್ದು, ಶರೀರಗಳನ್ನು ಆಸ್ಪತ್ರೆಗೆ ಒಯ್ಯಲಾಗಿದೆ’’ ಎಂದಿದ್ದಾರೆ. ಜಪಾನ್ ಕಾಲಮಾನ ಬೆಳಿಗ್ಗೆ 10:18 ಕ್ಕೆ ನಾಲ್ಕನೇ ಮಹಡಿಯಲ್ಲಿ ಬೆಂಕಿ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 70 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದವು.

ಪಶ್ಚಿಮ ಜಪಾನ್‌ನ ನಗರದ ಕಿಟಾಶಿಂಚಿ ರೈಲು ನಿಲ್ದಾಣದ ಬಳಿಯ ಜನನಿಬಿಡ ವ್ಯಾಪಾರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಅರ್ಧ ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಮತ್ತು ಇತರ ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲ. ಒಸಾಕಾ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಟ್ಟಡದ ಇತರ ಮಹಡಿಯಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:

ಆನ್​ಲೈನ್​ನಲ್ಲಿ ಅನಧಿಕೃತ ಸಾಲ ನೀಡುವ ಆ್ಯಪ್​ಗಳನ್ನು ಇನ್ಸ್ಟಾಲ್ ಮಾಡಿದ್ದೀರಾ? ನಿಮ್ಮ ಅಮೂಲ್ಯ ಡೇಟಾ ಕಳವಾಗಬಹುದು ಎಚ್ಚರ!

ಗೆಳತಿ ಮನೆಯಲ್ಲಿ ಕಳ್ಳತನ; ಬಟ್ಟೆ ಬದಲಿಸುವ ನೆಪದಲ್ಲಿ ಚಿನ್ನಾಭರಣ ಹೊತ್ತು ಪರಾರಿ

Published On - 9:59 am, Fri, 17 December 21

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ