AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2024 | 5:21 PM

Share

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್‌ಎಚ್‌ಕೆ ತಿಳಿಸಿದೆ.  ಎರಡು ವಿಮಾನ ನಡುವೆ ಡಿಕ್ಕಿಯಾಗಿದೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆಯಿಂದ  5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. ಜಪಾನ್​​​​ ವಿಮಾನ ಸಂಸ್ಥೆ ನೀಡಿದ ವರದಿ ಪ್ರಕಾರ ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದೆ. ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಐವರು ಸಿಬ್ಬಂದಿಗಳ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಪಾನ್ ಏರ್‌ಲೈನ್ಸ್‌ನ ವಕ್ತಾರರು ತಿಳಿಸಿರುವಂತೆ ವಿಮಾನವು 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊ ಹೊಕ್ಕೈಡೋದ ಶಿನ್-ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟು ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿದಿದೆ. ಇದೀಗ ವಿಮಾನದಲ್ಲಿದ್ದ 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಿದ್ದು, ಅವರನ್ನು ಆ ವಿಮಾನದಿಂದ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ವಿಮಾನವು ಹನೇಡಾ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. JAL 516 ವಿಮಾನವು ಹೊಕ್ಕೈಡೋದಿಂದ ಟೇಕ್ ಆಫ್ ಆಗಿದೆ ಎಂದು ವರದಿ ಹೇಳಿದೆ. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಹನೇಡಾ ವಿಮಾನ ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಹಾರಿಸುವ ಕೆಲಸವನ್ನು ನಡೆಸಿದ್ದಾರೆ. ಇನ್ನು ವಿಮಾನದ ಒಳಗೆ ಇರುವವರಿಗೆ ಯಾವುದಾದರೂ ತೊಂದರೆ ಸಂಭವಿಸಿದ್ದೇಯೆ ಎಂಬ ಬಗ್ಗೆ ಯಾವುದೇ ವರದಿ ಬಂದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 2 January 24

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ