AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2024 | 5:21 PM

Share

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್‌ಎಚ್‌ಕೆ ತಿಳಿಸಿದೆ.  ಎರಡು ವಿಮಾನ ನಡುವೆ ಡಿಕ್ಕಿಯಾಗಿದೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆಯಿಂದ  5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. ಜಪಾನ್​​​​ ವಿಮಾನ ಸಂಸ್ಥೆ ನೀಡಿದ ವರದಿ ಪ್ರಕಾರ ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದೆ. ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಐವರು ಸಿಬ್ಬಂದಿಗಳ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಪಾನ್ ಏರ್‌ಲೈನ್ಸ್‌ನ ವಕ್ತಾರರು ತಿಳಿಸಿರುವಂತೆ ವಿಮಾನವು 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊ ಹೊಕ್ಕೈಡೋದ ಶಿನ್-ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟು ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿದಿದೆ. ಇದೀಗ ವಿಮಾನದಲ್ಲಿದ್ದ 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಿದ್ದು, ಅವರನ್ನು ಆ ವಿಮಾನದಿಂದ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ವಿಮಾನವು ಹನೇಡಾ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. JAL 516 ವಿಮಾನವು ಹೊಕ್ಕೈಡೋದಿಂದ ಟೇಕ್ ಆಫ್ ಆಗಿದೆ ಎಂದು ವರದಿ ಹೇಳಿದೆ. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಹನೇಡಾ ವಿಮಾನ ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಹಾರಿಸುವ ಕೆಲಸವನ್ನು ನಡೆಸಿದ್ದಾರೆ. ಇನ್ನು ವಿಮಾನದ ಒಳಗೆ ಇರುವವರಿಗೆ ಯಾವುದಾದರೂ ತೊಂದರೆ ಸಂಭವಿಸಿದ್ದೇಯೆ ಎಂಬ ಬಗ್ಗೆ ಯಾವುದೇ ವರದಿ ಬಂದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 2 January 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!